ಮಣಿಪಾಲದಲ್ಲಿ 36 ಗಂಟೆಗಳ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್
Team Udayavani, Apr 1, 2017, 11:37 AM IST
ಉಡುಪಿ: ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿರ್ವಹಿಸುವ 36 ಗಂಟೆಗಳ ದಿನಪೂರ್ತಿ ಕಾರ್ಯಕ್ರಮ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮಣಿಪಾಲದಲ್ಲಿ ನಡೆಯಲಿದೆ.
ಇದು ಇಲ್ಲಿಯವರೆಗೆ ನಡೆದ ವಿಶ್ವದ ಅತಿ ದೊಡ್ಡ ಡಿಜಿಟಲ… ಉತ್ಪನ್ನ ತಯಾರಿಕೆ ಹ್ಯಾಕಥಾನ್ ಆಗಿದೆ. ಡಿಜಿಟಲ… ಇಂಡಿಯಾ ಕನಸನ್ನು ನನಸಾಗಿಸಲು ಯುವಕರನ್ನು ತೊಡಗಿಸಿಕೊಳ್ಳುವ ಗುರಿ ಹೊಂದಲಾಗಿದೆ.
ಇಸ್ರೋ, ರಕ್ಷಣಾ ಮಂತ್ರಾಲಯ ಮುಂತಾದ ಕೇಂದ್ರ ಸರಕಾರದ ವಿಭಾಗಗಳ 598 ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬರೋಬ್ಬರಿ 10,000 ಯುವಕರು ತೊಡಗಿಸಿಕೊಳ್ಳಲಿ¨ªಾರೆ. ಆರಂಭದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ 2,100ಕ್ಕೂ ಅಧಿಕ ಕಾಲೇಜುಗಳ 7,531 ತಂಡಗಳು (ತಲಾ 6 ವಿದ್ಯಾರ್ಥಿಗಳು ಮತ್ತು 2 ಮಾರ್ಗದರ್ಶಕರು) ಕಲ್ಪನೆಗಳನ್ನು ಒದಗಿಸಿದರೂ 1,266 ತಂಡಗಳು ಮಾತ್ರ ಎ. 1 ಮತ್ತು 2ರಂದು ದೇಶದ 26 ನೋಡಲ್ ಕೇಂದ್ರಗಳಲ್ಲಿ ನಡೆಯುವ ಅಂತಿಮ ಸುತ್ತಿಗೆ ಆಯ್ಕೆಯಾಗಿವೆ.
ಕರ್ನಾಟಕದಲ್ಲಿ ಆಯ್ಕೆಯಾದ 3 ಕೇಂದ್ರಗಳಲ್ಲಿ ಮಣಿಪಾಲದ ಎಂಐಟಿ ಒಂದಾಗಿದೆ. ಎ. 1ರ ಬೆಳಗ್ಗೆ 7.30 ಗಂಟೆಯಿಂದ ಎ. 2 ರಾತ್ರಿ 8.30ರ ವರೆಗೆ ನಿರಂತರವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ, ವಿ.ವಿ. ಧನಸಹಾಯ ಆಯೊಗ (ಯುಜಿಸಿ) ನೀಡುವ ಸಮಸ್ಯೆಗಳನ್ನು ಪರಿಹರಿಸಲು 350ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಲಿ¨ªಾರೆ.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಣಿಪಾಲ ವಿ.ವಿ. ಕುಲಸಚಿವ ಡಾ| ನಾರಾಯಣ ಸಭಾಹಿತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಯುಜಿಸಿ ಅಧಿಕಾರಿ ಡಾ| ಎನ್. ಗೋಪುಕುಮಾರ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಭಾಗವಹಿಸಲಿ¨ªಾರೆ.
ಎಂಐಟಿ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಭು ಉಪಸ್ಥಿತರಿರುವರು. ಉಪಕುಲಸಚಿವ (ತಾಂತ್ರಿಕ ಶಿಕ್ಷಣ) ಡಾ| ಪ್ರೀತಮ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಯುಜಿಸಿ ಅಧಿಕಾರಿಗಳು, ರೋಬೋ ಸಾಫ್ಟ್ ಟೆಕ್ನಾಲಜೀಸ್ನ ಅನುಭವಿ ವೃತ್ತಿಪರರು ತೀರ್ಪುಗಾರರಾಗಿ ಭಾಗವಹಿಸಲಿ¨ªಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್