ಮೂರು ತಿಂಗಳೊಳಗೆ ನಗರಕ್ಕೆ ಸ್ಮಾರ್ಟ್‌ ಟ್ರಾಫಿಕ್‌ ಜಂಕ್ಷನ್‌

ಟ್ರಾಫಿಕ್‌ ದಟ್ಟಣೆಗೆ ಸಿಗಲಿದೆ ಪರಿಹಾರ ; ಸಂಚಾರಿ ನಿಯಮ ಉಲ್ಲಂಘನೆ ಆರ್‌ಟಿಒ ಕಚೇರಿಯಲ್ಲಿ ದಾಖಲು

Team Udayavani, Jan 31, 2020, 5:48 AM IST

291UDKC6-4

ಉಡುಪಿ: ಟ್ರಾಫಿಕ್‌ ಸಮಸ್ಯೆಗೆ ಸದ್ಯ ಜಿಲ್ಲೆಯಲ್ಲಿ ಪರಿಹಾರ ಕಾಣುವ ಲಕ್ಷಣ ಗೋಚರಿಸುತ್ತಿದೆ. ಆಧುನಿಕ ಸಿಗ್ನಲ್‌ ನಗರದಲ್ಲಿ ಹಾದುಹೋಗುವ ರಾ. ಹೆದ್ದಾರಿ ಸಹಿತ 15 ಕಡೆಗಳಲ್ಲಿ ಸಂಚಾರ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಜಂಕ್ಷನ್‌ ರೂಪಿಸಲಾಗುತ್ತಿದೆ.

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂ ಸಿದರೆ ಮಾಹಿತಿ ಆರ್‌ಟಿಒ ಆಫೀಸ್‌ಗೆ ತಲುಪಲಿದೆ. ಆ ಮೂಲಕ ಸವಾರರಿಗೆ ದಂಡ ಹಾಕುವ ವ್ಯವಸ್ಥೆ ಇರಲಿದೆ. ಬಲಾಯಿಪಾದೆ, ಅಂಬಲಪಾಡಿ, ಸಂತೆಕಟ್ಟೆ, ಕಲ್ಸಂಕ ಸಹಿತ 15 ಕಡೆಗಳಲ್ಲಿ ತಲಾ 30 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್‌ ಸಿಗ್ನಲ್‌ 3 ತಿಂಗಳೊಳಗೆ ಕಾರ್ಯಾರಂಭ ಮಾಡಲಿವೆ. ಅತ್ಯಾಧುನಿಕ ಕೆಮರಾ ಹಾಗೂ ಸಿಗ್ನಲ್‌ ಲೈಟ್‌ಗಳನ್ನು ಇದಕ್ಕಾಗಿ ಅಳವಡಿಸಲಾಗುತ್ತದೆ.

ವರ್ಷದ ಹಿಂದೆ ಪ್ರಸ್ತಾವನೆ
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸಾರ್ವಜನಿಕರ ಮನವಿಯ ಮೇರೆಗೆ ಉಡುಪಿ ನಗರ ಸಭೆ ವ್ಯಾಪ್ತಿಯ ಪ್ರದೇಶಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಗತ್ಯವಿರುವ ಸ್ಥಳಗಳನ್ನು ಗುರುತಿಸಿ ಸಿಗ್ನಲ್‌ ಲೈಟ್‌ಗಳನ್ನು ಅಳವಡಿಸುವಂತೆ ಉಡುಪಿ ನಗರ ಸಭೆಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸ್‌ ಇಲಾಖೆ ವರ್ಷಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಅದಕ್ಕೆ ಅನುಮೋದನೆ ಸಿಕ್ಕಿದ್ದು, ಮೂರು ತಿಂಗಳ ಒಳಗೆ ನಗರದಲ್ಲಿ ಕಾರ್ಯಾರಂಭ ಮಾಡಲಿದೆ.

ಟ್ರಾಫಿಕ್‌ ದಟ್ಟಣೆ ನಿವಾರಿಸಲು ಹಲವು ಮಾರ್ಗ
ಪ್ರಮುಖ ರಸ್ತೆಗಳಾದ ಕವಿ ಮುದ್ದಣ ಮಾರ್ಗ, ಕೋರ್ಟ್‌ ರಸ್ತೆ, ಸರ್ವಿಸ್‌ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ, ಸಿಟಿಬಸ್‌ ನಿಲ್ದಾಣ, ಕಲ್ಸಂಕ, ಮಣಿಪಾಲದಲ್ಲಿ ವಾಹನದಟ್ಟಣೆ ಮಿತಿಮೀರುತ್ತಿದೆ. ಪ್ರಸ್ತುತ ಸವಾರರು ಈ ರಸ್ತೆಯಲ್ಲಿ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಟ್ರಾಫಿಕ್‌ ದಟ್ಟಣೆಗೆ ಮುಕ್ತಿ ನೀಡಲು ಕಿನ್ನಿಮೂಲ್ಕಿ-ಬ್ರಹ್ಮಗಿರಿ-ಬನ್ನಂಜೆ ರಸ್ತೆಗಳು ಸವಾರರಿಗೆ ಅನುಕೂಲ ಮಾಡಿಕೊಡುತ್ತಿವೆ. ಮಣಿಪಾಲಕ್ಕೆ ಹಾಗೂ ಉಡುಪಿ ನಗರಭಾಗಕ್ಕೆ ತೆರಳುವವರು ಕರಾವಳಿ ಬೈಪಾಸ್‌ ಮೂಲಕ ಸಂಚರಿಸಿದರೂ ನಗರದಲ್ಲಿ ಉಂಟಾಗುವ ಟ್ರಾಫಿಕ್‌ ದಟ್ಟಣೆಯನ್ನು ತಕ್ಕಮಟ್ಟಿಗೆ ನಿಯಂತ್ರಿಸಬಹುದಾಗಿದೆ.

ಸಾವಿರಕ್ಕೂ ಅಧಿಕ ವಾಹನಗಳು
ನಗರದಲ್ಲಿ ವಾಹನ ದಟ್ಟಣೆ ದಿನಕಳೆದಂತೆ ಅಧಿಕವಾಗುತ್ತಿದೆ. ನಗರದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಟ್ರಾಫಿಕ್‌ ದಟ್ಟಣೆ ಸರ್ವಸಾಮಾನ್ಯವಾಗಿದೆ. ಟ್ರಾಫಿಕ್‌ ಪೊಲೀಸರೂ ಇದನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಈಗಾಗಲೇ ಈ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಬ್ರಹ್ಮಗಿರಿ ವೃತ್ತವಾಗಿ ಚಾಲಕರು ಸರ್ಕ್ನೂಟ್‌ಹೌಸ್‌ ಮಾರ್ಗವಾಗಿ ಯಾವುದೇ ಟ್ರಾಫಿಕ್‌ ತೊಂದರೆ ಇಲ್ಲದೆ ಸಂಚಾರ ಮಾಡಬಹುದಾಗಿದೆ. ರಸ್ತೆ ಹಾಗೇ ಸೂಚಕ ಪಟ್ಟಿಗಳನ್ನು ಕೂಡ ಹೊಸದಾಗಿ ಮಾಡಿರುವುದರಿಂದ ಚಾಲಕರಿಗೆ ರಸ್ತೆ ಮಾರ್ಗಸುಲಭದಲ್ಲಿ ಗೋಚರವಾಗುತ್ತದೆ.

ಕರಾವಳಿ ಜಂಕ್ಷನ್‌ ಮಾರ್ಗವಾಗಿ
ಮಂಗಳೂರು ಭಾಗದಿಂದ ಬರುವ ವಾಹನಗಳು ಕಿನ್ನಿಮೂಲ್ಕಿಯ ಉಡುಪಿ ಸ್ವಾಗತಗೋಪುರ ಮಾರ್ಗವಾಗಿ ಬರುವ ಬದಲು ರಾ.ಹೆ.ಯಲ್ಲಿ ನೇರವಾಗಿ ಬಂದು ಅಂಬಲಪಾಡಿಯಾಗಿ ಆದಿಉಡುಪಿಯ ಕರಾವಳಿ ಜಂಕ್ಷನ್‌ ಮೂಲಕ ಮಣಿಪಾಲ -ಶಿವಮೊಗ್ಗದ ಕಡೆಗೆ ರಾ.ಹೆ. 169ಎ ಮೂಲಕ ಪ್ರಯಾಣಿಸಬಹುದಾಗಿದೆ.

3 ತಿಂಗಳಲ್ಲಿ ಲಭ್ಯ
ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಗರದ 15 ಕಡೆಗಳಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಜಂಕ್ಷನ್‌ಗಳನ್ನು ಮೂರು ತಿಂಗಳೊಳಗೆ ಅಳವಡಿಸಲಾಗುತ್ತದೆ. ಎಲ್ಲವೂ ಅತ್ಯಾಧುನಿಕ ವ್ಯವಸ್ಥೆಗಳನ್ನು ಒಳಗೊಂಡಿರಲಿದೆ. ಅತ್ಯಾಧುನಿಕ ಕೆಮರಾ ಹಾಗೂ ಸಿಗ್ನಲ್‌ ಲೈಟ್‌ಗಳನ್ನು ಇದಕ್ಕಾಗಿ ಅಳವಡಿಸಲಾಗುತ್ತದೆ.
-ಕೆ.ರಘುಪತಿ ಭಟ್‌, ಶಾಸಕರು

ಸಮಯ ಉಳಿತಾಯ
ಹೆಚ್ಚಾಗಿ ವಾಹನಗಳು ಜೋಡುಕಟ್ಟೆಯಾಗಿ ಸಿಟಿ ಮಾರ್ಗವನ್ನು ಪ್ರವೇಶಿಸುತ್ತದೆ.
ಆದರೆ ಈ ಮಾರ್ಗ ಸುಮಾರು ವರ್ಷಗಳಿಂದ ಇದೆ. ಈ ರಸ್ತೆ ಉತ್ತಮವಾಗಿದೆ. ಯಾವುದೇ ಕಿರಿಕಿರಿ ಇಲ್ಲದೆ ಜನರು ಸಂಚರಿಸಬಹುದು. ಮುಖ್ಯವಾಗಿ ಇಲ್ಲಿ ತೆರಳುವುದರಿಂದ ಸಮಯ ಉಳಿತಾಯವಾಗಲಿದೆ.
-ಸುರೇಶ್‌,ಆಟೋ ರಿಕ್ಷಾ ಚಾಲಕ

ಪರ್ಯಾಯ ಮಾರ್ಗ
ಮಣಿಪಾಲ- ಶಿವಮೊಗ್ಗಕ್ಕೆ ಭಾಗಕ್ಕೆ ತೆರಳುವ ವಾಹನಗಳು ಅನಗತ್ಯವಾಗಿ ಜೋಡುಕಟ್ಟೆ, ಕೋರ್ಟ್‌ ರೋಡ್‌, ಡಯಾನ ಸರ್ಕಲ್‌, ಹನುಮಾನ್‌ ಸರ್ಕಲ್‌ ಹಾಗೂ ಸರ್ವಿಸ್‌ ಬಸ್‌ ನಿಲ್ದಾಣವಾಗಿ ನಗರಕ್ಕೆ ಬಂದು ಮತ್ತೆ ರಾ.ಹೆ. 169 ಎ ಮಾರ್ಗವಾಗಿ ಸೇರುತ್ತಿರುವುದು ಟ್ರಾಫಿಕ್‌ ದಟ್ಟನೆಯ ಪ್ರಮುಖ ಸಮಸ್ಯೆಗಳಲ್ಲೊಂದು. ಇದರ ಬದಲು ಉಡುಪಿ ಸಿಟಿಯಲ್ಲಿ ವ್ಯವಹಾರ ಇಲ್ಲದೆ ಬರುವ ವಾಹನಗಳು ಉಡುಪಿ ಸ್ವಾಗತಗೋಪುರದ ಎಡಕ್ಕೆ ತಾಗಿರುವ ಬ್ರಹ್ಮಗಿರಿ ಮಾರ್ಗವಾಗಿ (ಸ್ವಾಮಿ ವಿವೇಕಾನಂದ ರಸ್ತೆ, ನಾಯರ್‌ಕೆರೆ) ಅಥವಾ ಕರಾವಳಿ ಜಂಕ್ಷನ್‌ ಮಾರ್ಗವಾಗಿ ರಾ.ಹೆ.169ನ್ನು ಕಡಿಮೆ ಸಮಯದಲ್ಲಿ ಸೇರಬಹುದು. ಉಡುಪಿ ಕಿನ್ನಿಮೂಲ್ಕಿಯ ಸ್ವಾಗತಗೋಪುರದ ಬಲಕ್ಕೆ ಇರುವ ವಾಣಿಜ್ಯ ತೆರಿಗೆ ಕಚೇರಿ, ಅಬಕಾರಿ, ಅಗ್ನಿಶಾಮಕ ಕಚೇರಿಯ ಒತ್ತಿನಲ್ಲಿರುವ ನಾಯರ್‌ಕೆರೆ ಮಾರ್ಗವಾಗಿ ಬ್ರಹ್ಮಗಿರಿ ಸರ್ಕಲ್‌ ಮೂಲಕ ಸರ್ಕ್ನೂಟ್‌ ಹೌಸ್‌ ಮಾರ್ಗವಾಗಿ ಚಾಲಕರು ಯಾವುದೇ ಟ್ರಾಫಿಕ್‌ ಕಿರಿಕಿರಿ ಇಲ್ಲದೆ ತೆರಳಬಹುದು. ಅನೇಕ ವರ್ಷಗಳಿಂದ ಈ ಮಾರ್ಗ ಇದ್ದು. ಜನರು ಅರ್ಧ ಕಿ.ಮೀ. ದೂರ ಬರವಾಗಿ ಹೋಗಬೇಕೆಂಬ ಕಾರಣಕ್ಕೆ ಸಿಟಿ ಮಾರ್ಗವನ್ನು ಆಶ್ರಯಿಸುತಿದ್ದಾರೆ. ಆದರೆ ಈ ಮಾರ್ಗದಲ್ಲಿ ದ್ವಿಚಕ್ರ ಮತ್ತು ಕಾರುಗಳು ಯಾವುದೇ ಟ್ರಾಫಿಕ್‌ ದಟ್ಟನೆಯಿಲ್ಲದೆ ಆರಾಮವಾಗಿ ಸಾಗಬಹುದಾಗಿದೆ.

– ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.