ಯೋಗದ ಮೂಲಕ “ಸ್ಮಾರ್ಟ್‌ ಉಡುಪಿ’: ರಾಮದೇವ್‌ ಪ್ರಸ್ತಾವ

ಯೋಗ ಶಿಬಿರ ಸಮಾರೋಪ

Team Udayavani, Nov 21, 2019, 5:12 AM IST

SGR_6388

ಉಡುಪಿ: ಕಳೆದೈದು ದಿನಗಳಿಂದ ಉಡುಪಿ ಶ್ರೀಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಯೋಗ ಶಿಬಿರ ನಡೆಸಿಕೊಟ್ಟ ಯೋಗಗುರು ಬಾಬಾ ರಾಮದೇವ್‌ ಅವರು ಉಡುಪಿ ಜನರಿಗೆ ಯೋಗ ನಶೆಯ ರುಚಿ ಕಲಿಸಿದರಲ್ಲದೆ ಯೋಗದ ಮೂಲಕ “ಸ್ಮಾರ್ಟ್‌ ಉಡುಪಿ’ ಪ್ರಸ್ತಾವವನ್ನೂ ಮಾಡಿದರು.

ಶನಿವಾರ ಆರಂಭಗೊಂಡ ಶಿಬಿರದಲ್ಲಿ ಪ್ರತಿನಿತ್ಯವೂ ಬೆಳ್ಳಂಬೆಳಗ್ಗೆ ದೂರದೂರುಗಳಿಂದ ಮಹಿಳೆಯರು, ಮಕ್ಕಳು, ಯುವಕರು, ಹಿರಿಯ ನಾಗರಿಕರಾದಿ ಎಲ್ಲ ವಯೋಮಾನದವರನ್ನು ಆಕರ್ಷಿಸಿದ್ದು ಬಾಬಾ ರಾಮದೇವ್‌ ಅವರ ಮೋಡಿಯಾಗಿತ್ತು. ಇದೊಂದು ಐತಿಹಾಸಿಕ ಯೋಗ ಶಿಬಿರವಾಗಿದೆ ಎಂದು ರಾಮದೇವ್‌ ಕೊನೆಯ ದಿನವಾದ ಬುಧವಾರ ಘೋಷಿಸಿದರು.

ಯೋಗದ ಮೂಲಕ ಭಗವಂತನ ಸಂಪೂರ್ಣ ಅನುಭೂತಿ ಪಡೆಯಲು ಸಾಧ್ಯ. “ಹೇ ಭಗವಂತ, ನಿನ್ನ ಹೆಸರಿಗೇ ಅತ್ಯದ್ಭುತವಾದ ಶಕ್ತಿ ಇದೆ’ ಎಂಬ ಮೂಲಕ ಶರಣಾಗತರಾದರೆ ಭಗವಂತನ ಅನುಭೂತಿ ಸಿಗುತ್ತದೆ. ಭಕ್ತಿಪೂರ್ವಕ ಯೋಗವನ್ನು ಮಾಡಿದರೆ ನಿರಾಶೆ, ಒತ್ತಡ, ದುಃಖ ದುಮ್ಮಾನಗಳನ್ನು ಕಣ್ಮರೆಯಾಗಿ ವ್ಯಾಧಿಮುಕ್ತ, ಸಮಾಧಿಯುಕ್ತ ಯೋಗ ದೊರಕುತ್ತದೆ ಎಂದು ರಾಮದೇವ್‌ ಹೇಳಿದರು.

ನಮ್ಮ ಎಲ್ಲ ಮುಸ್ಲಿಮರಿಗೆ ಪೂರ್ವಜ ರಾಮಚಂದ್ರ. ರಾಮರಾಜ್ಯ ಸ್ಥಾಪನೆಯಾಗಬೇಕೆಂದರೆ ಅದು ಪವಿತ್ರ ಚರಿತ್ರೆಯ ಪುನಃಸ್ಥಾಪನೆಯಾಗಬೇಕು. ಧರ್ಮ ನಮ್ಮ ಆಚರಣೆಯಲ್ಲಿ ರೂಪುಗೊಳ್ಳಬೇಕು. ಒಂದು ದೇಶ, ಒಂದು ಸಂವಿಧಾನವೆಂಬಂತೆ ಸಮಾನ ನಾಗರಿಕ ಸಂಹಿತೆ ಜಾರಿಯಾಗಬೇಕು. ನಾನು ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರರಿಗೆ ವೇದ ಕಲಿಸುತ್ತಿದ್ದೇನೆ. ನಾನು ಯಾವುದೇ ಜಾತಿ ತಾರತಮ್ಯ ಮಾಡುತ್ತಿಲ್ಲ. ಎಲ್ಲರಿಗೂ ಯೋಗಾಭ್ಯಾಸ ಅತ್ಯವಶ್ಯ ಎಂದು ರಾಮದೇವ್‌ ಹೇಳಿದರು.

ಬೆಂಗಳೂರಿನ ಯಾದವ ಪೀಠದ ಶ್ರೀಯಾದವಾನಂದ ಸ್ವಾಮೀಜಿಯವರು ಪಾಲ್ಗೊಂಡು ರಾಮದೇವ್‌ ಮತ್ತು ಪಲಿಮಾರು ಸ್ವಾಮೀಜಿಯವರನ್ನು ಗೌರವಿಸಿ ರಾಮದೇವ್‌ ಅವರು ಯೋಗವನ್ನು ಬಿತ್ತರಿಸುವ ತ್ಯಾಗಿ ಎಂದು ಬಣ್ಣಿಸಿದರು. ರಾಮದೇವ್‌ ಅವರು ಕೆಲವು ಯೋಗಾಸನಗಳನ್ನು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಂದಲೂ ಮಾಡಿಸಿ ಚಿಕ್ಕ ಪ್ರಾಯವಾದ ಕಾರಣ ಯೋಗಾಸನಗಳನ್ನು ಅಭ್ಯಾಸ ಮಾಡಬೇಕೆಂದು ಆಶಿಸಿದರು.

ಶ್ರೀಕೃಷ್ಣಮಠದಿಂದ ರಾಮದೇವ್‌ ಅವರನ್ನು ಸಮ್ಮಾನಿಸಲಾಯಿತು.

ದೈನಂದಿನ ಯೋಗ ಚಟುವಟಿಕೆಗಳನ್ನು ಪರ್ಯಾಯ ಶ್ರೀಪಲಿಮಾರು ಮಠದ ದಿವಾನ್‌ ವೇದವ್ಯಾಸ ತಂತ್ರಿ ಉದ್ಘಾಟಿಸಿದರು. ರಾಜ್ಯ ಆಯುರ್ವೇದ ವೈದ್ಯರ ಸಂಘಟನೆಯ ಡಾ|ಅಶೋಕಕುಮಾರ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್‌, ಉದ್ಯಮಿಗಳಾದ ರಂಜನ್‌ ಕಲ್ಕೂರ, ತಲ್ಲೂರು ಶಿವರಾಮ ಶೆಟ್ಟಿ, ಮನೋಹರ ಶೆಟ್ಟಿ, ಶ್ರೀಕೃಷ್ಣಮಠದ ಆಡಳಿತಾಧಿಕಾರಿ ಪ್ರಹ್ಲಾದ ರಾವ್‌, ಪತಂಜಲಿ ಸಮಿತಿ ರಾಜ್ಯ ಪ್ರಭಾರಿ ಬವರ್‌ಲಾಲ್‌ ಆರ್ಯ, ಜಿಲ್ಲಾ ಸಂರಕ್ಷಕ ಬಾಲಾಜಿ ರಾಘವೇಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿ ಯೋಗಾಸನಗಳನ್ನು ಅಭ್ಯಾಸ ಮಾಡಿದರು.

ಎಲ್ಲ ಜೀವಿಗಳಿಗೂ ಬದುಕುವ ಹಕ್ಕು ಇದೆ
ಜ್ಞಾನಯೋಗ, ಕ್ರಿಯಾಯೋಗ, ಭಕ್ತಿ ಯೋಗದ ಮೂಲಕ ಕರ್ಮಯೋಗಿಯಾಗಿ ಪುರುಷಾರ್ಥ ಸಿದ್ಧಿಸಿಕೊಳ್ಳಬೇಕು. ಪ್ರಗತಿ ಎಂದರೇನು? ಸಮ್ಯಕ್‌ ಮತಿಯಿಂದ ಪ್ರಕೃತಿಯನ್ನು ಕಾಪಾಡುವುದೇ ಪ್ರಗತಿ. ಸಸ್ಯಾಹಾರವೇ ಸಂಪೂರ್ಣ ನಿರ್ದೋಷ ಆಹಾರ ಪದ್ಧತಿಯಾಗಿದೆ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕು ಇದೆ. ಆದ್ದರಿಂದ ಪ್ರಾಣಿಗಳನ್ನು ಆಹಾರವಾಗಿ ಸ್ವೀಕರಿಸುವುದು ಸರಿಯಲ್ಲ. ಒಂದು ವೇಳೆ ಅವುಗಳಿಗೂ ಮತದಾನದ ಹಕ್ಕು ಇದ್ದರೆ, ಎಫ್ಐಆರ್‌ ದಾಖಲಿಸಿ ಧರಣಿ ನಡೆಸುವ ಸಾಧ್ಯತೆ ಇದ್ದರೆ ಹೇಗಿರುತ್ತದೆ ಸ್ಥಿತಿ? ಗೋಹತ್ಯೆ ನಿಷೇಧ ಆಗಲೇಬೇಕು ಎಂದು ರಾಮದೇವ್‌ ಹೇಳಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.