ಅಕಾಡೆಮಿ ಆಯ್ಕೆಯಲ್ಲಿ ಪ್ರಾದೇಶಿಕ ಅಸಮಾಧಾನದ ಹೊಗೆ


Team Udayavani, Mar 25, 2024, 6:30 AM IST

ಅಕಾಡೆಮಿ ಆಯ್ಕೆಯಲ್ಲಿ ಪ್ರಾದೇಶಿಕ ಅಸಮಾಧಾನದ ಹೊಗೆ

ಉಡುಪಿ: ಲೋಕಸಭೆ ಚುನಾವಣೆ ಘೋಷಣೆಯ ಮುನ್ನಾದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಒಮ್ಮೆಗೆ 18 ಅಕಾಡೆಮಿ, ಪ್ರಾಧಿಕಾರಗ ಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿರುವುದು ಹಲವು ರೀತಿಯ ಅಸಮಾಧಾನ, ಗೊಂದಲಕ್ಕೆ ಕಾರಣವಾಗಿದೆ.

ಸಾಮಾಜಿಕ ನ್ಯಾಯ, ಪ್ರಾದೇ ಶಿಕ ಸಮಾನತೆ ಇತ್ಯಾದಿಗಳಿಗೆ ಮನ್ನಣೆ ನೀಡದೆ ಪ್ರಾಧಿಕಾರ, ಅಕಾಡೆಮಿಗೆ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉ.ಕ. ಪ್ರಾತಿನಿಧ್ಯವೇ ಇಲ್ಲ
ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರು ಹಾಗೂ 10 ಸದಸ್ಯರನ್ನು ನೇಮಿಸಲಾ ಗಿದೆ. ಅಧ್ಯಕ್ಷ ಸ್ಥಾನ ಉಡುಪಿ ಜಿಲ್ಲೆಗೆ ನೀಡಿದರೆ 9 ಸದಸ್ಯರು ದ.ಕ., ಕಾಸರಗೋಡಿನ ಒಬ್ಬರಿಗೆ ಅವಕಾಶ ನೀಡಲಾಗಿದೆ. ಸದಸ್ಯರಲ್ಲಿ ಉಡುಪಿಯವರು ಯಾರೂ ಇಲ್ಲ. ಯಕ್ಷಗಾನ ವನ್ನು ಉಳಿಸಿ, ಬೆಳೆಸುವಲ್ಲಿ ಹಾಗೂ ಆಧುನಿಕತೆಯ ಹೊಡೆತದ ನಡುವೆಯೂ ಕಲೆ ಸತ್ವ ಉಳಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಕೊಡುಗೆ ಉತ್ತರ ಕನ್ನಡ ಜಿಲ್ಲೆಯೂ ನೀಡಿದೆ. ಅಕಾಡೆಮಿಗೆ ಪದಾಧಿಕಾರಿಗಳ ನೇಮಕದ ಸಂದರ್ಭದಲ್ಲಿ ಉ.ಕ.ಗೆ ಒಂದೂ ಸ್ಥಾನ ನೀಡಿಲ್ಲ. ಯಕ್ಷಗಾನದಲ್ಲಿ ತೆಂಕು, ಬಡಗು, ಬಡಬಡಗು ಹಾಗೂ ದೊಡ್ಡಾಟ ಪ್ರಮುಖವಾಗಿದೆ. ದಕ್ಷಿಣ ಕನ್ನಡದ ಪ್ರಮುಖ ಮೇಳಗಳು ತೆಂಕು ತಿಟ್ಟಿನ ವಾದರೆ, ಉಡುಪಿ, ಉ.ಕ.ದಬಹುಪಾಲು ಮೇಳಗಳು ಬಡಗು ತಿಟ್ಟಿನಂತೆ ನಡೆ ಯುತ್ತಿವೆ. ತೀರ ಉತ್ತರ ಕನ್ನಡಕ್ಕೆ ಸೀಮಿತವಾಗಿದ್ದ ಬಡಬಡಗು ತಿಟ್ಟು ಕಾಣ ಸಿಗುತ್ತದೆ. ಅದರಿಂದಾಚೆಗೆ ದೊಡ್ಡಾಟ ಚಾಲ್ತಿಯಲ್ಲಿದೆ. ಆದರೆ, ಇಲಾಖೆಯಿಂದ ಯಕ್ಷಗಾನ ಅಕಾಡೆಮಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬೇರೆ ಜಿಲ್ಲೆಗಳನ್ನು ಪರಿಗಣಿಸದೇ ಒಂದೇ ಜಿಲ್ಲೆಗೆ ಮನ್ನಣೆ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ವಿವಿಧ ಅಕಾಡೆಮಿಯಲ್ಲೂ ಇದೇ ಕಥೆ
ತುಳು ಸಾಹಿತ್ಯ ಅಕಾಡೆಮಿಯಲ್ಲೂ ಪ್ರಾದೇಶಿಕ ಅಸಮಾನತೆ ಆರೋಪ ಕೇಳಿ ಬರುತ್ತಿದೆ. ಅಧ್ಯಕ್ಷರು ಸಹಿತವಾಗಿ ಬಹುಪಾಲು ಸದಸ್ಯರನ್ನು ದ.ಕ. ಜಿಲ್ಲೆಯಿಂದಲೇ ಆಯ್ಕೆ ಮಾಡಲಾಗಿದೆ. ಉಡುಪಿಗೆ ಕೇವಲ 2 ಸ್ಥಾನ ಮಾತ್ರ ನೀಡಲಾಗಿದೆ. ಕಾಸರಗೋಡಿನಲ್ಲಿ ತುಳು ಭಾಷಿಕರು ಮತ್ತು ಸಾಧಕರಿ ದ್ದರೂ ಯಾರನ್ನೂ ಗಣನೆಗೆ ತೆಗೆದು ಕೊಂಡಿಲ್ಲ ಎನ್ನಲಾಗುತ್ತಿದೆ.

ಒಂದೇ ವರ್ಗಕ್ಕೆ ಆದ್ಯತೆ?
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಜತೆಗೆ ಐದು ಸದಸ್ಯರ ಸ್ಥಾನವನ್ನು ದ.ಕ. ಜಿಲ್ಲೆಗೆ ನೀಡಲಾಗಿದೆ. ಉ.ಕ. ಜಿಲ್ಲೆಗೆ 2 ಸದಸ್ಯ ಸ್ಥಾನ ನೀಡಿದರೆ ಉಡುಪಿಗೆ ಒಂದು ಸ್ಥಾನ ಮಾತ್ರ ಕೊಡಲಾಗಿದೆ. ಪ್ರಾದೇಶಿಕ ಅಸಮಾನತೆಯ ಜತೆಗೆ ಕೊಂಕಣಿ ಮಾತನಾಡುವ ಮತೀಯ ಅಲ್ಪಸಂಖ್ಯಾಕ ಸಮೂದಾಯಕ್ಕೆ ಹೆಚ್ಚಿನ ಮನ್ನಣೆ ನೀಡಲಾಗಿದೆ. ಇನ್ನೂಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲೂ ಉಡುಪಿಯನ್ನು ಅವಗಣಿಸಲಾಗಿದೆ. 10 ಸದಸ್ಯರಲ್ಲಿ ತಲಾ 1 ಸ್ಥಾನವನ್ನು ಉಡುಪಿ, ಚಿಕ್ಕ ಮಗಳೂರು ಹಾಗೂ ಬೆಂಗಳೂರಿಗೆ ನೀಡಿ, ಅಧ್ಯಕ್ಷ ಸ್ಥಾನ ಸಹಿತ ಉಳಿದ 7 ಸದಸ್ಯತ್ವವನ್ನು ದ.ಕ.ಕ್ಕೆ ನೀಡಲಾಗಿದೆ.

ಹೊಸ ಸರಕಾರ ರಚನೆಯಾದ ಅನಂತರದಲ್ಲಿ ನಿಗಮ ಮಂಡಳಿಗಳ ನೇಮಕಕ್ಕೆ ಸಾಕಷ್ಟು ಕಾಲಾವಕಾಶ ಇದ್ದರೂ ಲೋಕಸಭೆ ಅಧಿಸೂಚನೆಗೆ ಒಂದು ದಿನ ಮೊದಲು ಏಕಾಏಕಿ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿರುವುದು ಬೇರೆಯೇ ಸಂದೇಶ ರವಾನೆಯಾಗುತ್ತಿದೆ. ನೀತಿ ಸಂಹಿತೆ ಜಾರಿಯಾದ ಅನಂತರದಲ್ಲಿ ಹೊಸದಾಗಿ ಅಧಿಸೂಚನೆ ಹೊರಡಿಸಲು ಸಾಧ್ಯವಾಗುವುದಿಲ್ಲ. ಅಸಮಾನತೆಯಿದ್ದರೂ ಅದನ್ನು ಅನಿವಾರ್ಯವಾಗಿ ಸಹಿಸಿಕೊಳ್ಳಬೇಕಾಗುತ್ತದೆ ಎಂಬುದನ್ನು ತಿಳಿದೇ ಹೀಗೆ ಮಾಡಿದ್ದಾರೆ. ಒಂದೇ ಜಿಲ್ಲೆ ಕೇಂದ್ರಿತವಾಗಿ ಆಯ್ಕೆ ನಡೆದಿರುವುದು ಸರಿಯಲ್ಲ ಎಂದು ಕೆಲವರು ಅಸಮಾಧಾನಹೊರ ಹಾಕಿದ್ದಾರೆ.
– ಶಿವರಾಜ್‌ ತಂಗಡಗಿ, ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.