ನಿಸಾರ್ ಕಾವ್ಯದಲ್ಲಿ ಸಾಮಾಜಿಕ ಸಮನ್ವಯದ ಸೂತ್ರ
Team Udayavani, Jul 27, 2017, 7:30 AM IST
ಕುಂದಾಪುರ: ಸಾಮಾಜಿಕ ಬದುಕಿನ ಸಮನ್ವಯತೆಯ ಸೂತ್ರವನ್ನು ತಮ್ಮ ಕಾವ್ಯದ ಮೂಲಕ ಸಾಧಿಸಿ ತೋರಿಸಿದವರು ಕವಿ ನಿಸಾರ್ ಅಹಮ್ಮದ್ ಅವರು. ಜೀವನದಲ್ಲಿ ಕಾಣುವ ಒಳಿತು-ಕೆಡುಕುಗಳನ್ನು ತಮ್ಮದೇ ಆದ ಕಾವ್ಯಭಾಷೆಯ ಮೂಲಕ ಮಾಂತ್ರಿಕ ಶಕ್ತಿಯುಳ್ಳ ಸುಂದರ ಪದಪುಂಜಗಳ ಮೂಲಕ, ಪ್ರಾಸಯುಕ್ತ¤ ಪದವಿನ್ಯಾಸದ ಮೂಲಕ, ಹೊಸ ಹೊಸ ಪದಗಳನ್ನು ಜೋಡಿಸಿ ಕನ್ನಡ ಸಾಹಿತ್ಯಕ್ಕೆ ಕೊಡುವ ಮೂಲಕ ಒದಗಿಸಿ ಕೊಟ್ಟವರು ಎಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಉಪನ್ಯಾಸಕಿ ಹಾಗೂ ಲೇಖಕಿ ಡಾ| ಪಾರ್ವತಿ ಜಿ. ಐತಾಳ ಹೇಳಿದರು.
ಅವರು ಹೆ„ದರಾಬಾದಿನ ಕರ್ನಾಟಕ ಸಾಹಿತ್ಯ ಮಂದಿರದಲಿ ನಡೆದ ನಿಸಾರ್ ಅಹಮದ್-ಬದುಕು ಬರಹದ ಕುರಿತು ನಡೆದ ಒಂದು ದಿನದ ವಿಚಾರ ಸಂಕಿರಣದಲ್ಲಿ ನಿಸಾರ್ ಕಾವ್ಯದಲಿ ವ್ಯಕ್ತವಾಗುವ ಜೀವನ ದರ್ಶನ ಎಂಬ ವಿಷಯದ ಕುರಿತು ಮಾತನಾಡಿದರು.
ಸಾಹಿತಿ ಡಾ| ಸಂಧ್ಯಾ ರೆಡ್ಡಿ ಮತ್ತು ಭೈರಮಂಗಲ ರಾಮೇಗೌಡರು ಉಪಸ್ಥಿತ ರಿದ್ದು, ನಿಸಾರ್ ಕಾವ್ಯದ ವಿಭಿನ್ನ ಮುಖಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಕನ್ನಡದ ಹಿರಿಯ ಕವಿ ಪ್ರೊ| ಕೆ.ವಿ.ತಿರುಮಲೇಶ್ ಗೋಷ್ಠಿಯ ಅಧ್ಯಕ್ಷ ಸ್ಥಾನದಿಂದ ನಿಸಾರ್ ಜೊತೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಉಪನ್ಯಾಸ ನೀಡಿದವರಿಗೆ ಸಂಘಟನೆಯ ಪದಾಧಿಕಾರಿಗಳು ಒಟ್ಟುಸೇರಿ ಶಾಲು ಫಲಕಗಳನ್ನು ನೀಡಿ ಸಮ್ಮಾನಿಸಿದರು.ಕರ್ನಾಟಕ ಸಾಹಿತ್ಯ ಮಂದಿರದ ಅಧ್ಯಕ್ಷ ವಿಟuಲ್ ಜೋಯ ಅವರು ವಂದಿಸಿದರು.
ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಅವನ ಬದುಕು ಒಳಗೊಳ್ಳುವ ನೂರಾರು ಸನ್ನಿವೇಶಗಳನ್ನು ನೆಪವಾಗಿಸಿಕೊಂಡು ಅಲ್ಲಿ ಕಾಣುವ ಸೌಖ್ಯ ಸೌಂದರ್ಯಗಳಿಗೆ, ಲೋಪದೋಷಗಳಿಗೆ ಪ್ರತಿಮೆ ರೂಪಕಗಳ ಮೂಲಕ ಸಮಾಂತರಗಳನ್ನು ಸೃಷ್ಠಿಸಿ ಜೀವನದ ಸಮಗ್ರ ದರ್ಶನವನ್ನು ನಿಸಾರರು ತಮ್ಮ ಕವಿತೆಗಳಲ್ಲಿ ಒಂದಿಲ್ಲೊಂದು ರೀತಿಯಲ್ಲಿ ನೇಯ್ದು ಕೊಟ್ಟಿದ್ದಾರೆ. ಪ್ರೀತಿ-ವಂಚನೆ, ಸ್ನೇಹ-ಅಸೂಯೆ, ಪ್ರಾಮಾಣಿಕತೆ-ಬೂಟಾಟಿಕೆ, ಶೋಷಣೆ-ಪ್ರೊÅàತ್ಸಾಹ, ನ್ಯಾಯ- ಅನ್ಯಾಯಗಳ ದ್ವಂದ್ವಗಳು ಅವರ ಕವಿತೆಗಳಲ್ಲಿ ಸದಾ ಅನುರಣಿಸುತ್ತದೆ.ನವೋದಯ ಮತ್ತು ನವ್ಯ ಶೈಲಿಗಳಲ್ಲಿ ಕಾವ್ಯ ನಿರ್ಮಿತಿ ನಡೆಸಿದ ನಿಸಾರರು ತಮ್ಮ ಸುತ್ತಲ ಜಗತ್ತನ್ನು ಬಗೆದು ಶೋಧಿಸಿ, ಒಂದು ಬೃಹತ್ ಕಾವ್ಯ ಲೋಕವನ್ನು ಸೃಷ್ಟಿಸಿದ್ದಾರೆ. ಅವರ ಕಾವ್ಯದಲ್ಲಿ ವ್ಯಕ್ತವಾಗುವ ಜೀವನ ದರ್ಶನದ ಹರಹು ಬಹಳ ದೊಡ್ಡದು.
– ಡಾ| ಪಾರ್ವತಿ ಜಿ. ಐತಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ