ಮಟ್ಟು: ಹೊಳೆಗೆ ತುಂಬಲಾದ ಮಣ್ಣು ತೆರವು ಆರಂಭ
ಕೃಷಿಕರು, ರೈತರಿಗೆ ಕೊಟ್ಟ ಭರವಸೆ ಈಡೇರಿಸಿದ ಸಚಿವ ಅಂಗಾರ, ಶಾಸಕ ಲಾಲಾಜಿ
Team Udayavani, May 12, 2022, 11:35 AM IST
ಕಟಪಾಡಿ: ಮಟ್ಟು ನೂತನ ಸೇತುವೆಯಡಿ ತುಂಬಲಾಗಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಬುಧವಾರ ಆರಂಭಗೊಂಡಿದೆ.
ಆ ಮೂಲಕ ಮೇ 9ರಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕಾಪು ಕ್ಷೇತ್ರ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಸ್ಥಳೀಯರು, ರೈತರು, ಕೃಷಿಕರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದಂತಾಗಿದೆ.
ಮಟ್ಟು ಗ್ರಾಮದ ರಾಜಪಥವಾಗಿ ತೆರೆದುಕೊಳ್ಳಬೇಕಿದ್ದ ಮಟ್ಟು ನೂತನ ಸೇತುವೆಯ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಸೇತುವೆ ನಿರ್ಮಾಣಕ್ಕಾಗಿ ಹೊಳೆಯನ್ನು ಮಣ್ಣಿನಿಂದ ತುಂಬಿಸಲಾಗಿತ್ತು. ಪಿನಾಕಿನಿ ಹೊಳೆಯ ನೀರು ಸರಾಗವಾಗಿ ಹರಿಯದಂತೆ ತಡೆಯೊಡ್ಡಲಾಗಿತ್ತು.
ನಿರ್ಮಾಣಗೊಂಡ ಸೇತುವೆಯ ಕೆಲ ಕಿಂಡಿಗಳ ತಳಭಾಗದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಇನ್ನುಳಿದಂತೆ ಸುಮಾರು 4 ಕಿಂಡಿಗಳ ಭಾಗದಲ್ಲಿ ಹೊಳೆಗೆ ತುಂಬಿಸಿರುವ ಮಣ್ಣನ್ನು ತೆರವುಗೊಳಿಸದೆ ಬಾಕಿ ಇರಿಸಲಾಗಿತ್ತು. ಹಾಗಾಗಿ ಈ ಬಾರಿಯ ಮಳೆಗಾಲದಲ್ಲಿ ಮೈದುಂಬಿ ಹರಿಯುವ ಮಟ್ಟು ಪಿನಾಕಿನಿ ಹೊಳೆಯಲ್ಲಿ ಹರಿಯಬೇಕಾದ ನೀರು ನದಿತಟವನ್ನು ದಾಟಿ ಗದ್ದೆ, ತೋಟಗಳತ್ತ ಹಾಗೂ ವಾಸ್ತವ್ಯದ ಮನೆಗಳತ್ತ ಮುನ್ನುಗ್ಗಲಿದೆ ಎಂಬ ಭೀತಿ ತೀರದ ನಿವಾಸಿಗಳದ್ದಾಗಿತ್ತು.
ಅದರೊಂದಿಗೆ ಕೃಷಿ ಹಾನಿಯಾಗುವ, ತೋಟಗಾರಿಕೆ ಬೆಳೆಯು ವಿನಾಶದತ್ತ ಸಾಗುವ ಭೀತಿ ವ್ಯಕ್ತಪಡಿಸಿದ್ದ ಕೃಷಿಕರು, ಸ್ಥಳೀಯ ನಿವಾಸಿಗಳ ಆಕ್ರೋಶದ ಕುರಿತು ಉದಯವಾಣಿಯು ಜನಪರ ಕಾಳಜಿಯ ವರದಿಯನ್ನು ಮೇ 6ರಂದು ಪ್ರಕಟಿಸಿತ್ತು.
ಆ ಹಿನ್ನೆಲೆಯಲ್ಲಿ ಮೇ 9ರಂದು ಸಂಜೆಯ ವೇಳೆಗೆ ಜನಪ್ರತಿನಿಧಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಇದೀಗ ಮೇ 11ರಂದು ಮಣ್ಣು ತೆರವು ಕಾರ್ಯಾಚರಣೆಯು ಆರಂಭಗೊಂಡಿದೆ.
ಮಣ್ಣಲ್ಲಿ ಹೂತು ಹೋದ ಯಂತ್ರ
ಮಣ್ಣು ತೆರವಿಗೆ ಆಗಮಿಸಿದ ಸಣ್ಣ ಯಂತ್ರವೊಂದು ಅಕಾಲಿಕವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮಣ್ಣು ತೆರವುಗೊಳಿಸುವ ವೇಳೆ ಹೂತು ಹೋಗಿತ್ತು. ಅದನ್ನು ಮೇಲೆಳೆಯಲು ಮತ್ತೂಂದು ದೊಡ್ಡ ಗಾತ್ರದ ಯಂತ್ರಹರಸಾಹಸ ಪಡುತ್ತಿತ್ತು. ಬಳಿಕ ಎರಡೂ ಯಂತ್ರಗಳನ್ನು ಬಳಸಿ ಮಣ್ಣು ತೆರವು ಕಾರ್ಯಾಚರಣೆಯು ನಡೆಯುತ್ತಿರುವುದು ಕಂಡು ಬಂದಿತ್ತು.
ಮಣ್ಣು ಸಂಪೂರ್ಣ ತೆರವುಗೊಂಡಲ್ಲಿ ಈ ಮಳೆಗಾಲದಲ್ಲಿ ಸ್ವಲ್ಪ ನೆಮ್ಮದಿಯ ಪರಿಸ್ಥಿತಿ ನಮ್ಮದಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ