ಸ್ವ ಉದ್ಯೋಗಕ್ಕೆ ವರವಾದ ಸೌರ ವಿದ್ಯುತ್‌ ವ್ಯವಸ್ಥೆ


Team Udayavani, Apr 21, 2018, 8:15 AM IST

Solar-20-1.jpg

ಕುಂದಾಪುರ: ವಿದ್ಯುತ್‌ ಕೊರತೆ ಬಗ್ಗೆ ಮಾತನಾಡುತ್ತೇವಾದರೂ ಪರ್ಯಾಯ ಇಂಧನ ಬಳಕೆ ಬಗ್ಗೆ ಯೋಚಿಸುವುದೇ ಇಲ್ಲ. ಆದರೆ ಸೌರವಿದ್ಯುತ್ತನ್ನೇ ಪ್ರಮುಖವಾಗಿ ಬಳಸಿ ಕೆಲಸ ಮಾಡಿ ಜೀವನದಲ್ಲೂ ಯಶಸ್ಸು ಕಂಡವರು ಕುಂದಾಪುರ ತಾಲೂಕಿನ ಬೀಜಾಡಿಯ ಅಭಿನಯ ರಮೇಶ್‌.

ಆದಾಯಕ್ಕೆ ಕಲ್ಲು
ಸ್ವೋದ್ಯೋಗವಾಗಿ ಟೈಲರಿಂಗ್‌, ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಉತ್ತಮ ಆದಾಯ ಸಂಪಾದಿಸುತ್ತಿದ್ದರು. ಆದರೆ ದುರದೃಷ್ಟವಶಾತ್‌ ನರದ ಸಮಸ್ಯೆಯಿಂದ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡು ಸಮಸ್ಯೆಗೀಡಾಗಿದ್ದರು. ಜತೆಗೆ ಯಾವುದೇ ಕಷ್ಟದ ಕೆಲಸ ಮಾಡದಂತೆ ವೈದ್ಯರ ಸೂಚನೆ ಮೇರೆಗೆ ದಿಕ್ಕೇ ತೋಚದಂತಾಗಿತ್ತು.


ನೆರವಿಗೆ ಬಂತು ಯೋಜನೆ

ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ  ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿಯಾದ ಇವರು ಧ.ಗ್ರಾ. ಯೋಜನೆಯ ಸದಸ್ಯರೊಬ್ಬರ ಸೋಲಾರ್‌ ಜೆರಾಕ್ಸ್‌ ಮೆಶಿನ್‌ ನ ಯಶೋಗಾಥೆಯಿಂದ ಪ್ರೇರಿತರಾದರು. ಕಾರ್ಯಕರ್ತರ ಸಹಕಾರದೊಂದಿಗೆ 27 ಸಾವಿರ ರೂ. ಪ್ರಗತಿನಿಧಿ ಸಾಲ ಪಡೆದು ಸೋಲಾರ್‌ ಜೆರಾಕ್ಸ್‌ ಮಷೀನ್‌ ತಮ್ಮ ಮನೆಯಲ್ಲಿ ಅಳವಡಿಸಿಕೊಂಡರು. ಬದುಕಿನ ಕರಾಳ ಛಾಯೆ ಅಳಿಸಲು ಈ ಛಾಯಾಪ್ರತಿ ತೆಗೆಯುವ ಯುಂತ್ರ ನೆರವಾಯಿತು. ಇದರಿಂದ ಈಗ ದಿನಕ್ಕೆ ಕನಿಷ್ಠ  250ರೂ.ಯಂತೆ ದುಡಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸ್ಟೇಷನರಿ ಅಂಗಡಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

ಪ್ರಗತಿಗೆ ಯೋಜನೆ ಸದಾ ಬೆಂಬಲ
ಅಭಿನಯ ಅವರು ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿಯಾಗಿದ್ದು ಧರ್ಮಸ್ಥಳ ಯೋಜನೆಯಿಂದ ವಿವಿಧ ಉದ್ದೇಶಗಳಿಗಾಗಿ ಸುಮಾರು 5 ಲ.ರೂ. ಪ್ರಗತಿನಿಧಿ ಪಡೆದುಕೊಂಡಿದ್ದಾರೆ. ಅವರ ಪ್ರಗತಿಗೆ ಯೋಜನೆಯ ಬೆಂಬಲ ಮಾರ್ಗದರ್ಶನ ಸದಾ ಇರುತ್ತದೆ.
– ಸುಶೀಲಾ, ಜ್ಞಾನವಿಕಾಸ  ಸಮನ್ವಯಾಧಿಕಾರಿ, ಕುಂದಾಪುರ

ಕಷ್ಟದ ಗೂಡು
ಮಕ್ಕಳಾಗದ ಕೊರಗು ಒಂದೆಡೆಯಾದರೆ, ಆರೋಗ್ಯ ಸಮಸ್ಯೆ ಮತ್ತೂಂದೆಡೆ. ಈ ಸಂಕಷ್ಟಗಳ ನಡುವೆ ಕಡಿಮೆ ವೆಚ್ಚದಲ್ಲಿ ಸ್ವ ಉದ್ಯೋಗ ಮಾಡುತ್ತಿರುವುದು ನೆಮ್ಮದಿ ತಂದು ಕೊಟ್ಟಿದೆ.  ಪತಿ ಗಾರೆ ಕೆಲಸ ಮಾಡುತ್ತಿದ್ದು ನನಗೆ ಬೆಂಬಲವಾಗಿದ್ದಾರೆ.
– ಅಭಿನಯ ರಮೇಶ್‌, ಬೀಜಾಡಿ

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.