ಶೀಘ್ರದಲ್ಲೇ ಕಾಪು ತಾಲೂಕು ಅನುಷ್ಠಾನ: ವಿನಯ ಕುಮಾರ್‌ ಸೊರಕೆ


Team Udayavani, Mar 26, 2017, 1:11 PM IST

sorake.jpg

ಕಾಪು: ಕಾಪು ತಾಲೂಕು ಘೋಷಣೆಯಾದಷ್ಟೇ ವೇಗದಲ್ಲಿ ಅನುಷ್ಠಾನವೂ ಆಗಲಿದೆ. ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಬಳಿ ಈ ಬಗ್ಗೆ ಮಾತುಕತೆಯನ್ನೂ ನಡೆಸಿದ್ದೇನೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಎ. 22ಕ್ಕೆ ಸ್ವತಃ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರೇ ಆಗಮಿಸಿ ಕಾಪು ತಾಲೂಕು ಅನುಷ್ಠಾನ ಯೋಜನೆಗೆ ಚಾಲನೆ ನೀಡುವರು ಎಂದು ಮಾಜಿ ಸಚಿವ, ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

ಕಾಪು ತಾಲೂಕು ಘೋಷಣಾ ಸಂಭ್ರಮಾಚರಣೆ ಮತ್ತು ಸಾರ್ವಜನಿಕ ಆಭಿನಂದನ ಸಮಿತಿ ಆಶ್ರಯದಲ್ಲಿ ಮಾ. 25ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಸಾರ್ವಜನಿಕ ಅಭಿನಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ ದರು.

ವಿರೋಧಿಗಳಿಗೆ ಶೋಭೆಯೇ ? 
ಕಾಪು ತಾಲೂಕಿಗೆ ಹೋರಾಟ ನಡೆಸುವಾಗ ಪ್ರಾರಂಭದಲ್ಲಿ ಕೈ ಜೋಡಿಸಿ ಮತ್ತೆ ಕೈ ಕೊಟ್ಟ ಕೆಲವರು ಬಳಿಕ ತಾಲೂಕು ಆಗುವುದೇ ಇಲ್ಲ ಎಂದು ಹೇಳುತ್ತಾ ಅಪಪ್ರಚಾರ ಮಾಡಿದ್ದರು. ಈಗ ತಾಲೂಕು ಘೋಷಣೆಯಾದ ಬಳಿಕ ಕಾಪು ತಾಲೂಕು ಘೋಷಣೆಗೆ ಮಾತ್ರ ಸೀಮಿತವಾಗಿರದೇ ಶೀಘ್ರ ಅನುಷ್ಠಾನಗೊಳಿಸಲಿ ಎಂದು ಸವಾಲೆಸೆಯುತ್ತಿದ್ದಾರೆ. ತಾಲೂಕೇ ಬೇಡ ಎಂದವರು ಈಗ ಈ ರೀತಿಯ ಮಾತುಗಳನ್ನಾಡುವುದು ಶೋಭೆಯೇ ಎಂದರು.

ಸಮಗ್ರ ಅಭಿವೃದ್ಧಿಗೆ ಒತ್ತು ಘೋಷಿತ ಕಾಪು ತಾಲೂಕು ವ್ಯಾಪ್ತಿಯಲ್ಲಿ 1 ಲಕ್ಷ ಸಸಿ ನೆಡುವಿಕೆ, 6,000 ಮನೆ ನಿವೇಶನ ಸಹಿತ ಮನೆ ನಿರ್ಮಾಣ, ಪುರಸಭಾ ವ್ಯಾಪ್ತಿಯಲ್ಲಿ ವಸತಿ ಬಡಾವಣೆ, ಕೆರೆ, ಪಾರ್ಕ್‌ ಅಭಿವೃದ್ಧಿಗೆ ಒತ್ತು, 9 ಸೇತುವೆಗಳ ನಿರ್ಮಾಣ, ಪ್ರಮುಖ ರಸ್ತೆಗಳನ್ನು ದ್ವಿಪಥ ರಸ್ತೆಗಳನ್ನಾಗಿ ಪರಿವರ್ತಿಸುವುದು, ಹೆಜಮಾಡಿ ಬಂದರು ಅಭಿವೃದ್ಧಿ, ಬೆಳಪುವಿನ ಸೈಯನ್ಸ್‌ ಸೆಂಟರ್‌ ಶೀಘ್ರ ಅನುಷ್ಠಾನ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕ ಎಲ್ಲ ಸಿದ್ಧತೆ, ಪ್ರಸ್ತಾವನೆಯನ್ನು ಸರಕಾರದ ಮುಂದಿರಿಸಿದ್ದೇನೆ ಎಂದರು.

ಶಾಸಕ ಸೊರಕೆ, ಲೀಲಾಧರ ಶೆಟ್ಟಿ ಅವರಿಗೆ ಸಮ್ಮಾನ ಸಾರ್ವಜನಿಕ ಅಭಿನಂದನ ಸಮಿತಿ ಮತ್ತು ಸಾರ್ವಜನಿಕರ ಪರವಾಗಿ ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಮತ್ತು ಕಾಪು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಮಾಜರತ್ನ ಕೆ. ಲೀಲಾಧರ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ ಅಭಿನಂದಿಸಿ ಸಮ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ವೇ| ಮೂ| ಕೇಂಜ ಶ್ರೀಧರ ತಂತ್ರಿ, ಶಿರ್ವ ಸೈಂಟ್‌ ಮೆರೀಸ್‌
ಚರ್ಚ್‌ನ ಧರ್ಮಗುರು ರೆ| ಫಾ| ಸ್ಟಾ  éನಿತಾವ್ರೋ, ಕಾಪು ಜುಮ್ಮಾ ಮಸೀದಿ ಧರ್ಮಗುರು ಇರ್ಷಾದ್‌ ಸಆದಿ ಆಶೀರ್ವಚನ ನೀಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಶಿಕ್ಷಣ ತಜ್ಞ ಕುದಿ ವಸಂತ ಶೆಟ್ಟಿ ಅಭಿನಂದನ ಭಾಷಣ ಮಾಡಿದರು.

ಕಾಪು ಪುರಸಭಾಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷ ಕೆ. ಎಚ್‌. ಉಸ್ಮಾನ್‌, ಕಾಪು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉಡುಪಿ ಸಾಯಿರಾಧಾ ಗ್ರೂಪ್ಸ್‌ನ ಅಧ್ಯಕ್ಷ ಮನೋಹರ ಶೆಟ್ಟಿ, ಜೆಡಿಎಸ್‌ನ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಕಾಪು ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕೇ¤ಸರ ಮೋಹನ್‌ ಎಂ. ಬಂಗೇರ, ಗಣ್ಯರಾದ ಸುಧೀರ್‌ ಹೆಗ್ಡೆ, ಮಾಧವ ಆರ್‌. ಪಾಲನ್‌, ಶೇಖರ ಆಚಾರ್ಯ, ನಜೀರ್‌ ಅಹ್ಮದ್‌, ಅಶೋಕ್‌ ಎಂ. ಸುವರ್ಣ, ಮೈರ್ಮಾಡಿ ಸುಧಾಕರ ಶೆಟ್ಟಿ, ವಿಲ್ಸನ್‌ ರೊಡ್ರಿಗಸ್‌, ಪ್ರಭಾಕರ ಪೂಜಾರಿ, ನಿತ್ಯಾನಂದ ಶೆಟ್ಟಿ, ಅಮೃತ್‌ ಶೆಣೈ, ಉದಯ ಶೆಟ್ಟಿ ಮುನಿಯಾಲು, ಗೀತಾ ವಾಗ್ಲೆ ಉಪಸ್ಥಿತರಿದ್ದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಸ್ವಾಗತಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ
ಬ್ಯಾಂಕ್‌ ನಿರ್ದೇಶಕ ಡಾ| ದೇವಿಪ್ರಸಾದ್‌ ಶೆಟ್ಟಿ ಪ್ರಸ್ತಾವನೆಗೈದರು. ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ವಂದಿಸಿದರು. ಟಿ.ವಿ. ನಿರೂಪಕ ನವೀನ್‌ ಶೆಟ್ಟಿ ಎಡೆ¾àರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.