ಶೀಘ್ರದಲ್ಲೇ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

ಮೇಲ್ದರ್ಜೆಗೇರಿದ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇಮಕ

Team Udayavani, Sep 28, 2020, 12:51 PM IST

udupi-tdy-1

ಉಡುಪಿ, ಸೆ. 27: ರಾಜ್ಯದ ಕಾನೂನು ಸುವ್ಯವಸ್ಥೆ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆಗಾಗಿ ಪೊಲೀಸ್‌ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

ಈ ಪೈಕಿ ಜಿಲ್ಲೆಯ ಒಂದು ಠಾಣೆ  ಸೇರಿದಂತೆ ಒಟ್ಟು 16 ಜಿಲ್ಲೆಗಳ 56 ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೇರಲಿವೆ. ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗಳು ಶೀಘ್ರದಲ್ಲಿಯೇ ರಾಜ್ಯಾದ್ಯಂತ ಹಂತ ಹಂತವಾಗಿ ಕಾರ್ಯರೂಪಕ್ಕೆ ಬರಲಿವೆ.

ಉಡುಪಿ ವೃತ್ತ ಠಾಣಾ ವ್ಯಾಪ್ತಿಯಲ್ಲಿ  ಪ್ರಸ್ತುತ ನಗರ, ಸಂಚಾರ ಹಾಗೂ ಮಲ್ಪೆ ಠಾಣೆಗಳಿವೆ. ಈ ಪೈಕಿ ಉಡುಪಿ  ನಗರಠಾಣೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಉಡುಪಿ ಸಂಚಾರ ಹಾಗೂ ಮಲ್ಪೆ  ಠಾಣೆಗಳು ಉಡುಪಿ ವೃತ್ತ ಠಾಣೆಯೊಳಗೆ  ಬರಲಿವೆ. ದ.ಕ. ಜಿಲ್ಲೆಯಿಂದ ಬಂಟ್ವಾಳ ವೃತ್ತ ವ್ಯಾಪ್ತಿಯಲ್ಲಿ ಇರುವ ಬಂಟ್ವಾಳ ನಗರ,  ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ಸಂಚಾರ, ವಿಟ್ಲ ಪೊಲೀಸ್‌ ಠಾಣೆಗಳಿವೆ. ಈ ಪೈಕಿ ಬಂಟ್ವಾಳ ನಗರ ಹಾಗೂ ವಿಟ್ಲ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಈ ಠಾಣೆಗಳು ಮೇಲ್ದರ್ಜೆಗೆ ಏರಿದ ಬಳಿಕ ಬಂಟ್ವಾಳ ವೃತ್ತ ಠಾಣೆಯ ಪರಿಮಿತಿಯಲ್ಲಿ ಬಂಟ್ವಾಳ ಗ್ರಾಮಾಂತರ ಹಾಗೂ ಸಂಚಾರ ಠಾಣೆಗಳು ಇರಲಿವೆ.

ಪದನಾಮ ನವೀಕರಣಕ್ಕೆ ಅವಕಾಶ :  ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ ಏರಿದ ಬಳಿಕ ವೃತ್ತದ ಹೆಸರನ್ನು ಬದಲಿಸಲು ಅವಕಾಶ ನೀಡಲಾಗಿದೆ. ಅದರಂತೆ ಉಡುಪಿ ವೃತ್ತವನ್ನು ಮಲ್ಪೆ ವೃತ್ತವನ್ನಾಗಿ ಹಾಗೂ ಬಂಟ್ವಾಳ ವೃತ್ತವನ್ನು ಬಂಟ್ವಾಳ ಗ್ರಾಮಾಂತರ ವೃತ್ತವನ್ನಾಗಿ ಮರು ಪದನಾಮಕರಿಸಬಹುದಾಗಿದೆ.  ಈ ಆಯ್ಕೆಯನ್ನು ಆಯಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಿರ್ಧರಿಸಲಿದ್ದಾರೆ.

ಇನ್‌ಸ್ಪೆಕ್ಟರ್‌ಗಳ  ನೇಮಕ : ಮೇಲ್ದರ್ಜೆಗೆ ಆಯ್ಕೆಯಾಗಿರುವ ಪೊಲೀಸ್‌ ಠಾಣೆಗಳಲ್ಲಿ ಪ್ರಸ್ತುತ  ಸಬ್‌ ಇನ್‌ಸ್ಪೆಕ್ಟರ್‌ಗಳ ಉಸ್ತುವಾರಿ ಇದೆ. ಸರ್ಕಲ್‌ ಇನ್‌ಸ್ಪೆಕ್ಟರ್‌ಗಳ ಅಧೀನದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಇನ್‌ಸ್ಪೆಕ್ಟರ್‌ಗಳ ಅನುಮತಿ ಇಲ್ಲದೆ ಅಥವಾ ಅವರ ಗಮನಕ್ಕೆ ತಾರದೆ ನೇರವಾಗಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಬ್‌ಇನ್‌ಸ್ಪೆಕ್ಟರ್‌ಗಳಿಗೆ ಅಧಿಕಾರವಿರಲಿಲ್ಲ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ನಿರ್ವಹಣೆ ಪರಿಣಾಮಕಾರಿಯಾಗುತ್ತಿರಲಿಲ್ಲ. ಆದ್ದರಿಂದ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಮೇಲ್ದರ್ಜೆಗೇರುವ ಠಾಣೆಗಳಲ್ಲಿ ಸಬ್‌ಇನ್‌ಸ್ಪೆಕ್ಟರ್‌ಗಳನ್ನೂ ನೇಮಕ ಮಾಡಲಾಗುತ್ತದೆ.

ಪ್ರಕರಣಗಳ ಪರಿಣಾಮಕಾರಿ ತನಿಖೆಗಾಗಿ ರಾಜ್ಯದ 56  ಪೊಲೀಸ್‌ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಶೀಘ್ರದಲ್ಲಿ ಈ ಠಾಣೆಗಳಿಗೆ ಇನ್‌ಸ್ಪೆಕ್ಟರ್‌ಗಳ ನೇಮಕ ಆಗಲಿದೆ. -ಪ್ರವೀಣ್‌ ಸೂದ್‌,  ರಾಜ್ಯ ಪೊಲೀಸ್‌ ಮಹಾನಿರ್ದೇಶಕರು

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.