ಸೂರ್ಗೋಳಿ ಶಾಲೆ : ಊರವರಿಂದ ತರಕಾರಿ ತೋಟ ನಿರ್ಮಾಣ
Team Udayavani, Jul 22, 2019, 5:15 AM IST
ಕುಂದಾಪುರ: ಸೂರ್ಗೋಳಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ರವಿವಾರ ಎಸ್.ಡಿ.ಎಂ.ಸಿ. ಮತ್ತು ಪೋಷಕರ ಪರಿಷತ್ತು, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳ ಸಹಕಾರದಲ್ಲಿ ನಮ್ಮ ಶಾಲೆ ನಮ್ಮ ತೋಟ ಯೋಜನೆಯಲ್ಲಿ ನೂತನ ತರಕಾರಿ ತೋಟ ನಿರ್ಮಾಣ ಮಾಡಲಾಯಿತು.
ಸುಮಾರು 5 ಸೆಂಟ್ಸ್ ಸ್ಥಳವನ್ನು ಉಳುಮೆ ಮಾಡಿ ಜೈವಿಕ ಬೇಲಿ ರಚಿಸಲಾಯಿತು. ಬದನೆ, ಬೆಂಡೆ, ಹೀರೆ, ಸುವರ್ಣ, ಸೋರೆ ಗಿಡಗಳನ್ನು ನೆಡಲಾಯಿತು. ಪೋಷಕರು ಸ್ವಯಂಸೇವಕರಾಗಿ ತೋಟವನ್ನು ನಿರ್ಮಿಸಿದರು.ಕುಂದಾಪುರ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ. ಸಂಜೀವ ನಾಯ್ಕ ಗಿಡ ನೀಡುವುದರ ಮೂಲಕ ಚಾಲನೆ ನೀಡಲಾಯಿತು.
ತಾ.ಪಂ. ಸದಸ್ಯ ಚಂದ್ರಶೇಖರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಶೆಟ್ಟಿ, ರಮೇಶ್ ಹಾಲಂಬಿ, ನಾಗರಾಜ್ ನಕ್ಕತ್ತಾಯ, ಪ್ರಕಾಶ್ ಪೂಜಾರಿ ಉಪಸ್ಥಿತರಿದ್ದರು.
ಪ್ರಕಾಶ್ ಅಲ್ಸೆ ಬೇಲಿ ಸಾಮಗ್ರಿಗಳನ್ನು, ಶೇಖರ್ ನಾಯ್ಕ ಸೆಟ್ಟೊಳ್ಳಿ ಪೈಪ್ ಲೈನ್ ಕೊಡುಗೆ, ಎಸ್ಡಿಎಂಸಿ ಅಧ್ಯಕ್ಷ ಬಾಬಣ್ಣ ಸೂರ್ಗೋಳಿ ಮತ್ತು ಸೂರ್ಯ ನಾಯ್ಕ ಸಾಗಾಟ ವೆಚ್ಚ, ಚಂದ್ರ ಶೇಖರ ನಾಯ್ಕ ಗೊಬ್ಬರವನ್ನು ಕೊಡುಗೆಯಾಗಿ ನೀಡಿದರು.
ಪೋಷಕರಾದ ಕೃಷ್ಣ ನಾಯ್ಕ, ಸದಾಶಿವ, ಚಂದ್ರ ನಾಯ್ಕ, ನಾರಾಯಣ ನಾಯ್ಕ, ಸತೀಶ್, ಬಾಬಣ್ಣ ನಾಯ್ಕ, ಕೃಷ್ಣ ನಾಯ್ಕ, ಮೋಹನ್ ನಾಯ್ಕ, ವೆಂಕಟೇಶ್ ನಾಯ್ಕ, ಲಕ್ಷ್ಮಣ ನಾಯ್ಕ, ಸಂಜೀವ ನಾಯ್ಕ, ಪುಟ್ಟಯ್ಯ ನಾಯ್ಕ, ಸುರೇಶ್ ನಾಯ್ಕ ಮತ್ತಿತರರು ಭಾಗಿಯಾದರು.
ಶಿಕ್ಷಕರಾದ ದೇವ ನಾಯ್ಕ, ಶ್ರೀನಿವಾಸ್, ನಾಗರತ್ನ, ವನಿತಾ, ಆಶಾ ಸಹಕರಿಸಿದರು. ಮುಖ್ಯ ಶಿಕ್ಷಕ ಸದಾನಂದ ನಾಯಕ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ