ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ


Team Udayavani, Mar 2, 2019, 12:30 AM IST

0103udsb1.jpg

ಉಡುಪಿ: ಜಿಲ್ಲೆಯಲ್ಲಿ ವರದಿಯಾಗುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ನೂತನ ಎಸ್‌ಪಿ ನಿಶಾ ಜೇಮ್ಸ್‌ ಭರವಸೆ ನೀಡಿದ್ದಾರೆ.

ಶುಕ್ರವಾರ ನೇರ ಪೊಲೀಸ್‌ ಫೋನ್‌-ಇನ್‌ ಕಾರ್ಯಕ್ರಮದಲ್ಲಿ  ಅಕ್ರಮ ಮರಳುಗಾರಿಕೆ ಕುರಿತಾದ ದೂರು ಕರೆಗೆ ಪ್ರತಿಕ್ರಿಯಿಸಿದ ಅವರು, “ಅಕ್ರಮ ಮರಳುಗಾರಿಕೆಯನ್ನು ತಡೆಯಲು ಪೊಲೀಸರಿಗೆ ಅಧಿಕಾರವಿದೆ. ಈಗಾಗಲೇ ಜಿಲ್ಲೆಯಲ್ಲಿ ಇದರ ವಿರುದ್ಧ ಪೊಲೀಸ್‌ ತಂಡ ಕಾರ್ಯನಿರ್ವಹಿಸುತ್ತಿದೆ. ನ್ಯಾಯಾಲಯದ ಇತ್ತೀಚಿನ ನಿರ್ದೇಶನದಂತೆ ಪೊಲೀಸರು ಅಕ್ರಮ ಮರಳು ಸಾಗಾಟ ವಾಹನಗಳನ್ನು ವಶಪಡಿಸಿದ ಅನಂತರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನ್ಯಾಯಾಲಯಕ್ಕೆ ವರದಿ ಒಪ್ಪಿಸುವ ಪ್ರಕ್ರಿಯೆ ನಡೆಸಲಿದೆ’ ಎಂದು ಹೇಳಿದರು.

ಬೀಟ್‌ ಪೊಲೀಸರಿಗೆ ಜವಾಬ್ದಾರಿ
ಇತ್ತೀಚೆಗೆ ಹೊಸ ಬೀಟ್‌ ವ್ಯವಸ್ಥೆ ಜಾರಿಗೆ ಬಂದ ಅನಂತರ ಆಯಾ ಪ್ರದೇಶದ ಬೀಟ್‌ ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಅವರಿಂದ ಅಸಾಧ್ಯವಾದುದನ್ನು ಠಾಣೆ, ಜಿಲ್ಲಾ ಮಟ್ಟದಲ್ಲಿ ನಿಭಾಯಿಸಲಾಗುತ್ತಿದೆ. ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಪೊಲೀಸ್‌ ತಂಡ ಕಾರ್ಯಾಚರಣೆ ನಡೆಸುತ್ತಿದೆ ಎಂದು ನಿಶಾ ಜೇಮ್ಸ್‌ ತಿಳಿಸಿದರು.

ಒಂದು ಕಾರಿನ ನಂಬರ್‌ ಇನ್ಯಾವುದೋ ಕಾರಿಗೆ 
“ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷರು ತಮ್ಮ ಕಾರಿಗೆ ಬೇರೆ ಕಾರಿನ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡಿದ್ದಾರೆ’ ಎಂದು ವ್ಯಕ್ತಿಯೋರ್ವರು ದೂರಿದರು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಎಸ್‌ಪಿ ಸೂಚಿಸಿದರು. ಉದ್ಯಾವರದಲ್ಲಿ ಧ್ವನಿವರ್ಧಕದಿಂದ ಆಗುತ್ತಿರುವ ತೊಂದರೆ ಬಗ್ಗೆ ಓರ್ವರು ದೂರಿದರು. 

ರೇಷನ್‌ ಅಕ್ಕಿ ಮಾರಾಟ
ಬೈಂದೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಸಿಗುವ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಇದನ್ನು ಖರೀದಿ
ಸಲೆಂದೇ ತಿಂಗಳಿಗೊಮ್ಮೆ ಕೆಲವು ಮಂದಿ ಬರುತ್ತಾರೆ ಎಂದು ಓರ್ವರು ದೂರಿದರು. ಈ ಫೋನ್‌-ಇನ್‌ನಲ್ಲಿ ಮೂವರು ಮಹಿಳೆಯರು ಕರೆ ಮಾಡಿದರು.
 
ರಸ್ತೆ ಸಂಚಾರ ಅವ್ಯವಸ್ಥೆ
ಈ ಬಾರಿಯೂ ರಸ್ತೆ ನಿಯಮ ಉಲ್ಲಂಘನೆ ಬಗ್ಗೆ ಅಧಿಕ ದೂರುಗಳು ಬಂದವು.  
– ಉಡುಪಿ ನಗರ ಭಾಗದ ರಾ.ಹೆ.ಯಲ್ಲಿ ಸರ್ವೀಸ್‌ ರಸ್ತೆಯಲ್ಲಿ ವಾಹನ ನಿಲುಗಡೆ, ವೇಗವಾಗಿ ವಾಹನ ಓಡಿಸುತ್ತಾರೆ.  
– ಹಿರಿಯಡಕ ಜಂಕ್ಷನ್‌ನಲ್ಲಿ ಬಸ್‌ಗಳನ್ನು ಬಸ್‌ನಿಲ್ದಾಣದ ಹೊರಗೆ ನಿಲ್ಲಿಸಲಾಗುತ್ತಿದೆ. ಸಿಗ್ನಲ್‌ ನೀಡದೇ ಏಕಾಏಕಿ ಬಸ್‌ ನಿಲುಗಡೆ; ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿ ಮಾಲಕರಿಗೆ ತಿಳಿಸಲಾಗುವುದು ಮುಂದುವರಿದರೆ ಆರ್‌ಟಿಒ ಮೂಲಕ ಕ್ರಮ ಕೈಗೊಳ್ಳಲಾಗುವುದು’ ಎಂದರು.
– ಉಡುಪಿಯ ವಿವಿಧೆಡೆ ರಸ್ತೆಯಲ್ಲೇ ಕಾರು ಪಾರ್ಕಿಂಗ್‌ ಕುರಿತಾದ ದೂರಿಗೆ ಸ್ಪಂದಿಸಿದ ಎಸ್‌ಪಿ “ಕಾರ್‌ ಲಾಕಿಂಗ್‌ಗಳನ್ನು ಬಳಸಲಾಗುವುದು. ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
– ಉಡುಪಿಯ ಖಾಸಗಿ ಬಸ್‌ಗಳ‌ಲ್ಲಿ ಹಿರಿಯ ನಾಗರಿಕರಿಗಾಗಿ ಮೀಸಲಿಟ್ಟ ಸೀಟನ್ನು ಬಿಟ್ಟು ಕೊಡಲಿಲ್ಲ ಎಂದು ಓರ್ವರು ದೂರಿದರು.
– ತೆರೆದ ಲಾರಿಗಳಲ್ಲಿ ಮಣ್ಣು ಸಾಗಿಸುವ ಲಾರಿಗಳ ಕುರಿತಾದ ದೂರಿಗೆ ಸ್ಪಂದಿಸಿದ ಎಸ್‌ಪಿ “ಇಂತಹ ಸಾಮಗ್ರಿ ಸಾಗಿಸುವಾಗ ಟಾರ್ಪಾಲ್‌ಗ‌ಳಿಂದ ಮುಚ್ಚಬೇಕೆಂಬ ನಿಯಮವಿದೆ. ನಿಯಮ ಮೀರಿದರೆ ಪ್ರಕರಣ ದಾಖಲಿಸುತ್ತೇವೆ’ ಎಂದರು. 
– “ರಾ.ಹೆದ್ದಾರಿ 66ರ ಉದ್ಯಾವರ- ಬಲಾಯಿ ಪಾದೆಯ ಪೆಟ್ರೋಲ್‌ ಪಂಪ್‌ ಸಮೀಪದಿಂದ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸುತ್ತಿವೆ. ಬಸ್‌ನವರು ಕೂಡ ಕೈ ತೋರಿಸಿದಲ್ಲಿ ನಿಲ್ಲಿಸುತ್ತಿದ್ದಾರೆ’ ಎಂಬ ದೂರುಕರೆ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿ “ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬಸ್‌ನವರು ಪರವಾನಿಗೆ ಪಡೆಯುವಾಗ ಯಾವ ನಿಲ್ದಾಣಗಳಲ್ಲಿ ನಿಲ್ಲಿಸಲು ಪರವಾನಿಗೆ ಪಡೆಯುತ್ತಾರೋ ಅಲ್ಲಿ ಮಾತ್ರ ನಿಲ್ಲಿಸಬೇಕು. ಉಲ್ಲಂಘನೆಯಾದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
– ಬಸ್‌ಗಳ ಒಳಗೆ ಕೂಡ ಬಸ್‌ನ ನಂಬರ್‌ನ್ನು ಪ್ರದರ್ಶಿಸಬೇಕು ಎಂಬ ನಿಯಮವನ್ನು ಪಾಲಿಸ ಲಾಗುತ್ತಿಲ್ಲ ಎಂದು ಸಂತೆಕಟ್ಟೆಯ ಮಹಿಳೆಯೋರ್ವರು ಹೇಳಿದರು.

ಮಟ್ಕಾ : ಐವರ ಬಂಧನ 
ಫೆ. 8ರಿಂದ  28ರ ವರೆಗೆ ಜಿಲ್ಲೆಯಲ್ಲಿ 5 ಮಟ್ಕಾ ಪ್ರಕರಣಗಳಲ್ಲಿ 5 ಮಂದಿಯನ್ನು, 4 ಇಸ್ಪೀಟು ಪ್ರಕರಣಗಳಲ್ಲಿ 24 ಮಂದಿಯನ್ನು, 3 ಅಕ್ರಮ ಮದ್ಯ ಪ್ರಕರಣಗಳಲ್ಲಿ 3 ಮಂದಿಯನ್ನು ಹಾಗೂ 8 ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ. ಕೋಟಾ³ ಕಾಯಿದೆಯಡಿ 109 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿರುವ 35 ಮಂದಿಯ ವಿರುದ್ಧ, ಕರ್ಕಶ ಹಾರ್ನ್ ಬಳಕೆ ಮಾಡಿದ 520 ಮಂದಿ, ವಾಹನ ಚಲಾಯಿಸುವಾಗ ಮೊಬೈಲ್‌ ಬಳಸಿದ 132 ಮಂದಿ ವಿರುದ್ಧ, ಹೆಲ್ಮೆಟ್‌ ರಹಿತ ಬೈಕ್‌ ಸವಾರಿ ಮಾಡಿರುವ 3,249 ಮಂದಿ ವಿರುದ್ಧ, ಅತೀ ವೇಗದ ಚಾಲನೆಗೆ 140 ಮಂದಿ ವಿರುದ್ಧ ಹಾಗೂ ಇತರ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿ 7001 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.