ವಿಶೇಷ ಸಾನ್ನಿಧ್ಯ ಶಕ್ತಿಯ ಕ್ಷೇತ್ರ ಹಿರಿಯಡಕ: ಡಾ| ಹೆಗ್ಗಡೆ
Team Udayavani, Feb 22, 2018, 2:18 PM IST
ಹೆಬ್ರಿ : ಪುರಾತನ ಇತಿಹಾಸ ಹೊಂದಿರುವ ಸಂಪ್ರದಾಯ, ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸು ವುದರೊಂದಿಗೆ ವಿಶೇಷ ಸಾನ್ನಿಧ್ಯ ಶಕ್ತಿಯನ್ನು ಶ್ರೀ ಕ್ಷೇತ್ರ ಹಿರಿಯಡಕ ಮಹತೋಭಾರ ವೀರಭದ್ರ ಸ್ವಾಮಿ ದೇವಸ್ಥಾನ ಹೊಂದಿದೆ. ಅತ್ಯದ್ಭುತ ಕೆತ್ತನೆಗಳ ಮೂಲಕ ಶಿಲಾಮಯವಾಗಿ ನಿರ್ಮಾಣವಾಗುತ್ತಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಆಡಳಿತ ಸಮಿತಿಯವರು ಊರವರ ಸಹಾಯದೊಂದಿಗೆ ಮುಕ್ತ ಮನಸ್ಸಿ ನಿಂದ ಪಾಲ್ಗೊಂಡಿದ್ದು ಅತ್ಯಂತ ಸೌಂದರ್ಯಯುತವಾಗಿ ದೇವಸ್ಥಾನ ರಚನೆಯಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಬುಧವಾರ ವೀರಭದ್ರ ಸ್ವಾಮೀ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ನಾವು ಭಗವಂತನಿಗೆ ಅರ್ಪಿಸಿದ್ದರ ದುಪ್ಪಟ್ಟನ್ನು ನಮಗೆ ಹಿಂದಿರುಗಿಸಿ ಹರಸುತ್ತಾನೆ. ಶ್ರೀ ಕ್ಷೇತ್ರ ಹಿರಿಯಡಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ವಿಶೇಷ ಸಂಬಂಧವನ್ನು ಹೊಂದಿದ್ದು ಸಿರಿಜಾತ್ರೆ ಸಂದರ್ಭದಲ್ಲಿ ಅಸಂಖ್ಯ ಭಕ್ತರು ತೀರ್ಥ ಸ್ಥಾನಕ್ಕೆ ಕ್ಷೇತ್ರಕ್ಕೆ ಆಗಮಿಸುತ್ತಾರೆ ಎಂದರು.
ಹೆಗ್ಗಡೆ ಭೇಟಿಯಿಂದ ಪರಿಪೂರ್ಣತೆ ದ.ಕ. ಹಾಗೂ ಉಡುಪಿ ಜಿಲ್ಲೆ ಮಾತ್ರ ವಲ್ಲದೆ ಹೆಚ್ಚಿನ ದೇವಸ್ಥಾನಗಳ ಅಭಿ ವೃದ್ಧಿಯಲ್ಲಿ ಶ್ರೀ ಕ್ಷೇತ್ರ ಧರ್ಮ ಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆ ಯವರ ಮಾರ್ಗದರ್ಶನವಿದ್ದು ಅವರ ಭೇಟಿಯಿಂದ ಮಾತ್ರ ದೇವಸ್ಥಾನ ಪರಿಪೂರ್ಣತೆ ಕಾಣುತ್ತದೆ. ಅಂತಹ ಪರಿಪೂರ್ಣತೆ ಹಾಗೂ ಧನ್ಯತೆ ಇಂದು ನಮಗೆ ಆಗಿದೆ ಎಂದು ಜೀರ್ಣೋ ದ್ಧಾರ ಸಮಿತಿಯ ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು.
ಸಮಾರಂಭದಲ್ಲಿ ಕಾರ್ಯಾಧ್ಯಕ್ಷ ಮಾಂಬೆಟ್ಟು ಗೋವರ್ಧನ ಹೆಗ್ಡೆ, ಅಧ್ಯಕ್ಷರಾದ ಅಂಜಾರು ಬೀಡು ಸುಭಾಶ್ಚಂದ್ರ ಹೆಗ್ಡೆ, ಪಡ್ಡಾಂ ಬೀಡು ಹರ್ಷವರ್ಧನ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಅಂಜಾರು ಬೀಡು ಅಮರನಾಥ ಶೆಟ್ಟಿ, ಷಡಂಗ ಲಕ್ಷ್ಮೀ ನಾರಾಯಣ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು. ಕುದಿ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು