ಆರೋಗ್ಯಕೇಂದ್ರಗಳ ಅರೋಗ್ಯ : ವೈದ್ಯರ ಕೊರತೆ, ಆದರೂ ಮಳೆಗಾಲಕ್ಕೆ ಸಜ್ಜು


Team Udayavani, Jun 20, 2018, 2:30 AM IST

phc-kaupu-19-6.jpg

ಪ್ರಾ.ಆ. ಕೇಂದ್ರ ಕಾಪು ಸಂಪರ್ಕ: 0820 2551618 ; ಸಂಪರ್ಕ:  9845367839

ಕಾಪು: ಪೂರ್ಣಕಾಲಿಕ ವೈದ್ಯಾಧಿಕಾರಿ ಮತ್ತು ಹಲವು ಸಿಬಂದಿ ಕೊರತೆಯ ನಡುವೆಯೂ ಮಳೆಗಾಲದ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಕಾಪು ಆರೋಗ್ಯ ಕೇಂದ್ರ ಸಜ್ಜಾಗಿದೆ. ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು, ಮೂಳೂರು, ಉಳಿಯಾರಗೋಳಿ, ಕೈಪುಂಜಾಲು, ಮಲ್ಲಾರು ಸಹಿತವಾಗಿ ಪಾಂಗಾಳ, ಇನ್ನಂಜೆ, ಮಜೂರು, ಪಾದೂರು, ಹೇರೂರು ಗ್ರಾಮಗಳ ಜನತೆಗೆ ಇದು ಖಾಯಂ ಆಸ್ಪತ್ರೆಯಾಗಿದೆ. ಇದರೊಂದಿಗೆ ಉಚ್ಚಿಲ, ಬೆಳಪು, ಪಣಿಯೂರು ಸಹಿತ ಹಲವು ಪ್ರದೇಶಗಳ ಜನರೂ ತಮ್ಮ ವೈದ್ಯಕೀಯ ಸಂಬಂಧಿತ ಕಾರಣಗಳಿಗಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿಕೊಂಡಿದ್ದಾರೆ.

ದಿನನಿತ್ಯ 70 – 80 ರೋಗಿಗಳ ಭೇಟಿ 
ಇಲ್ಲಿನ ಆರೋಗ್ಯ ಕೇಂದ್ರಕ್ಕೆ ನಿತ್ಯ 70 ರಿಂದ 80 ರೋಗಿಗಳು ವೈದ್ಯಕೀಯ ತಪಾಸಣೆಗಾಗಿ ಆಗಮಿಸುತ್ತಿದ್ದಾರೆ. ಇಲ್ಲಿನ ವ್ಯಾಪ್ತಿಯಲ್ಲಿ ಹೇರೂರು, ಇನ್ನಂಜೆ, ಮಲ್ಲಾರು, ಪಡು, ಪಾಂಗಾಳ, ಉಳಿಯಾರ ಗೋಳಿ ಸಹಿತ 9 ಉಪ ಆರೋಗ್ಯ ಕೇಂದ್ರಗಳಿವೆ. ಇಲ್ಲೂ ಸಿಬಂದಿ ಮತ್ತು ಕಟ್ಟಡ ಕೊರತೆ ಕಾಡುತ್ತಿದೆ.

ನಾಲ್ವರು ವೈದ್ಯರಿಂದ ಸೇವೆ
ಇಲ್ಲಿ ಪೂರ್ಣಕಾಲಿಕ ವೈದ್ಯರ ಕೊರತೆ ಇರುವುದರಿಂದ ಪಡುಬಿದ್ರಿಯ ವೈದ್ಯಾಧಿಕಾರಿ ಡಾ| ಬಿ.ಬಿ. ರಾವ್‌ ಅವರು ಪ್ರಭಾರ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಹೊರತು ಪಡಿಸಿ ಶಿರ್ವ ಆಸ್ಪತ್ರೆಯ ಡಾ| ಭರತ್‌ (2 ದಿನ), ಮುದರಂಗಡಿ ಆಸ್ಪತ್ರೆಯ ಡಾ| ಸುಬ್ರಹ್ಮಣ್ಯ ಪ್ರಭು (2 ದಿನ), ಇನ್ನಾ ಆಸ್ಪತ್ರೆಯ ಡಾ| ಸಂಧ್ಯಾ (2 ದಿನ) ಅವರು ಕಾಪು ಆಸ್ಪತ್ರೆಯಲ್ಲಿ ಸೇವೆಗೆ ಲಭ್ಯರಿರುತ್ತಾರೆ.

ಕಡತದಲ್ಲೇ ಬಾಕಿ
ಪ್ರಸ್ತುತ 6 ಬೆಡ್‌ (3 ಪುರುಷ – 3 ಮಹಿಳೆ) ಗಳ ಸೌಲಭ್ಯ ಹೊಂದಿರುವ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1.30 ಕೋ. ರೂ. ವೆಚ್ಚದಲ್ಲಿ ನೂತನ ಕಟ್ಟಡ ರಚನೆಯಾಗುತ್ತಿದೆ. ಆದರೆ ತಾ| ಆಸ್ಪತ್ರೆಯಾಗಿ ಮೇಲ್ದರ್ಜೆಗೇರುವ ಕನಸು ಕಾಣುತ್ತಿದ್ದರೂ ಅದಕ್ಕೆ ಸಂಬಂಧಿತ ಕೆಲಸ ಕಾರ್ಯ ಇನ್ನೂ ಕಡತದಲ್ಲೇ ಬಾಕಿ ಇವೆ. 

ಯಾವ ಹುದ್ದೆಗಳು ಖಾಲಿ 
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ-1, ಸಹಾಯಕ ವೈದ್ಯಾಧಿಕಾರಿ-1, ಪ್ರಥಮ ದರ್ಜೆ ಸಹಾಯಕ-1, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ-1, ಹಿರಿಯ ಪುರುಷ ಆರೋಗ್ಯ ಸಹಾಯಕ-1, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ-1, ಕಿರಿಯ ಪುರುಷ ಆರೋಗ್ಯ ಸಹಾಯಕ-4 ಖಾಲಿ, ಗ್ರೂಪ್‌  ಡಿ.-1 ಹುದ್ದೆ ಖಾಲಿಯಿದೆ. ಆ್ಯಂಬುಲೆನ್ಸ್‌ ಸೇವೆ ಲಭ್ಯವಿದ್ದು, ಎರವಲು ಸೇವೆಯ ಮೂಲಕ ಚಾಲಕ ಸೇವೆ ಸಲ್ಲಿಸುತ್ತಿದ್ದಾರೆ.

ಏನೇನು ಸೌಲಭ್ಯಗಳಿವೆ?
ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ಸಹಿತ ವಿವಿಧ ರೋಗಗಳ ಕುರಿತ ವೈದ್ಯಕೀಯ ಸೌಲಭ್ಯಗಳು, ಔಷಧ ಆಸ್ಪತ್ರೆಯಲ್ಲಿ ಲಭ್ಯವಿವೆೆ. ಇದರೊಂದಿಗೆ ಎಚ್‌1ಎನ್‌1ಗೆ ವಿಶೇಷ ಔಷಧಿ, ಅತಿಸಾರ ಭೇದಿ, ಹುಚ್ಚು ನಾಯಿ ಕಡಿತ, ಕ್ಷಯ, ಕುಷ್ಟ ರೋಗ ಸೇರಿದಂತೆ ವಿವಿಧ ಕಾಯಿಲೆಗಳ ಔಷಧ ಲಭ್ಯ. ಇದರೊಂದಿಗೆ ವಿವಿಧ ರೋಗಗಳು, ರೋಗ ನಿಯಂತ್ರಣ ಬಗ್ಗೆ ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. 

ಸ್ವಚ್ಛತೆಗೆ ಮನವಿ 
ರಾಷ್ಟ್ರೀಯ ಕಾರ್ಯಕ್ರಮಗಳ ಅನುಷ್ಠಾನ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಮಳೆಗಾಲದಲ್ಲಿ ಸ್ವಚ್ಛತೆಗೆ ಮನವಿ ಮಾಡಿದ್ದೇವೆ. ಬಾವಿ ನೀರಿನ ಸ್ವಚ್ಛತೆ ಬಗ್ಗೆ ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸಲಾಗುತ್ತಿದೆ.
– ಡಾ| ಬಿ.ಬಿ. ರಾವ್‌,  ಪ್ರಭಾರ ವೈದ್ಯಾಧಿಕಾರಿ ; ಸಂಪರ್ಕ:  9845367839

— ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.