ಉಡುಪಿಗೆ ಬರಲಿವೆ ವಿದ್ಯಾರ್ಥಿನಿ ‘ಹುಲಿಗಳು’!


Team Udayavani, Aug 24, 2018, 2:00 AM IST

hulivesha-23-8.jpg

ಉಡುಪಿ: ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಶಾಲಾ ಕಾಲೇಜ್‌ ವಿದ್ಯಾರ್ಥಿನಿಯರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬಕ್ಕೆ ಹುಲಿವೇಷ ಧರಿಸಿ ಕುಣಿಯಲಿದ್ದಾರೆ. ಪಿಯುಸಿ, ಪದವಿ, ಎಂಜಿನಿಯರಿಂಗ್‌ ಪದವಿ ಓದುವ 16 ವಿದ್ಯಾರ್ಥಿನಿಯರು, ಪ್ರಾ. ಶಾಲೆಯ ಮೂವರು ವಿದ್ಯಾರ್ಥಿನಿಯರು ಹುಲಿ ವೇಷ ಧರಿಸುವವರು. ಸಾಮಾನ್ಯವಾಗಿ ವಿಟ್ಲಪಿಂಡಿ ದಿನ ಹುಲಿವೇಷ ಸಹಿತ ವಿವಿಧ ವೇಷಗಳನ್ನು ಹಾಕುವುದು ರೂಢಿ. ಆದರೆ ಈ ಬಾರಿ ಸೆ. 3ರಂದು ನಗರಸಭಾ ಚುನಾವಣೆಯ ಫ‌ಲಿತಾಂಶ ಇರುವುದರಿಂದ ಶ್ರೀ ಕೃಷ್ಣಜನ್ಮಾಷ್ಟಮಿ ಸೆ. 2ರಂದೇ ವಿದ್ಯಾರ್ಥಿನಿಯರು ಹುಲಿವೇಷ ಧರಿಸಲಿದ್ದಾರೆ.

ಇವರಿಗೆ ತರಬೇತಿ ಕೊಡುತ್ತಿರುವವರು ಮೆಸ್ಕಾಂ ನಿವೃತ್ತ ಸಿಬಂದಿ ಶಿವಪ್ಪ ಪೂಜಾರಿಯವರು. ಇವರು ‘ಅಸಾಮಾನ್ಯ ಹುಲಿ’-1970, 1987 ರಲ್ಲಿ  ಸತತ ಎರಡು ಗಂಟೆ ಹುಲಿವೇಷ ಕುಣಿದು ಬಹುಮಾನ ಗಿಟ್ಟಿಸಿಕೊಂಡ ವರು. ಕಾನೂನು ವಿದ್ಯಾಲಯಕ್ಕೆ ತಮಿಳುನಾಡು, ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಹುಲಿವೇಷದ ತರಬೇತಿ ಕೊಟ್ಟವರು. ಹುಲಿವೇಷದ ಬಟ್ಟೆ ಧರಿಸಿ ಇವರು ಕುಣಿಯುವುದಿಲ್ಲ, ಬದಲಾಗಿ ಬಟ್ಟೆ ಮೇಲೆ ಬಣ್ಣಗಳನ್ನು ಸಿಂಪಡಿಸಿ (ಸ್ಪ್ರೇ) ವೇಷ ಹಾಕುತ್ತಾರೆ. ಇವರ ಉಡುಗೆ ಸಿದ್ಧಪಡಿಸುವವರು ಎ1 ಕಾಸ್ಟೂಮ್ಸ್‌ನ ನಿತಿನ್‌. ಈ ಹುಲಿವೇಷದ ತಂಡದವರು ಹೋದ ವರ್ಷ ಉಡುಪಿಯಲ್ಲಿ ನಡೆದ ಧರ್ಮಸಂಸದ್‌, ಅದಕ್ಕೂ ಹಿಂದೆ ನಡೆದ ಅಖಿಲ ಭಾರತೀಯ ಸಂಸ್ಕೃತ ಸಮ್ಮೇಳನಕ್ಕೆ ಆಗಮಿಸಿದ ಅತಿಥಿಗಳಿಗೆ ಭೋಜನ ಬಡಿಸುವ ಕೆಲಸವನ್ನು ನಡೆಸಿದ್ದರು.

ಕಾರಣವೇನು?
ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವದವರು ಆರಂಭಿಸಿದ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ‘ಆಸರೆ’ ಯೋಜನೆಗೆ ನೆರವಾಗುವುದೇ ಹುಲಿವೇಷ ತಂಡದ ಗುರಿ. ಅಂದೇ ಯೋಜನೆಗೆ ನೆರವಾಗಲು ಉದ್ದೇಶಿಸಿದ್ದೆವು. ಆದರೆ ವಿದ್ಯಾರ್ಥಿಗಳಾದ್ದರಿಂದ ಹುಲಿವೇಷ ಹಾಕಿ ಸಂಗ್ರಹವಾದ ಹಣವನ್ನು ಆಸರೆ ಟ್ರಸ್ಟ್‌ ಗೆ ಹಸ್ತಾಂತರಿಸುತ್ತೇವೆ. ಇಷ್ಟಾದರೂ ಸಮಾಜಸೇವೆಯಾಗಲಿ ಎನ್ನುವುದು ನಮ್ಮ ಉದ್ದೇಶ ಎನ್ನುತ್ತಾರೆ ತಂಡದ ನೇತೃತ್ವ ವಹಿಸಿರುವ ಶ್ರುತಿ ಶೇಟ್‌ ಮತ್ತು ನವ್ಯಾ ಕಿಣಿ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.