ಯಕ್ಷಗಾನಕ್ಕಾಗಿ ಬದುಕನ್ನೇ ಮುಡಿಪಾಗಿರಿಸಿದ್ದ ಯಕ್ಷ ಋಷಿ ಹೊಸ್ತೋಟ


Team Udayavani, Jan 7, 2020, 5:00 PM IST

Hosthota-02

ಹೊಸ್ತೋಟ ಮಂಜುನಾಥ ಭಾಗವತರು ಒಂದರ್ಥದಲ್ಲಿ ಯಕ್ಷಗಾನ ಕಲೆಗಾಗಿ ತನ್ನ ಸರ್ವಸ್ವವನ್ನೂ ಸಮರ್ಪಿಸಿಕೊಂಡಿದ್ದ ಕಲಾ ತಪಸ್ವಿ. ಅವರು ಬಡಗುತಿಟ್ಟಿನ ಯಕ್ಷಗಾನದ ಅಧ್ಯಯನ-ಪರಾಮರ್ಶೆ-ಪ್ರಸರಣೆಗಾಗಿ ಜಂಗಮರಂತೆ ಏಕಾಂಗಿಯಾಗಿ ಊರೂರು ಸುತ್ತುತ್ತಿದ್ದ ಯಕ್ಷ ಭೈರಾಗಿ.

ಶಿರಸಿ ತಾಲೂಕಿನ ಹನುಮಂತಿ ಗ್ರಾಮದ ಹೊಸ್ತೋಟದಲ್ಲಿ ಮಂಜುನಾಥ ಭಾಗವತರು 1940ರಲ್ಲಿ ಜನಿಸಿದರು. ಆರನೇ ತರಗತಿಗೆ ಮಂಜುನಾಥ ಭಾಗವತರ ಶಾಲಾ ಕಲಿಕೆ ನಿಂತರೂ ಯಕ್ಷಗಾನದ ಕಡೆಗೆ ಬಾಲ್ಯದಿಂದಲೇ ಅವರಿಗಿದ್ದ ಆಸಕ್ತಿ ಅವರನ್ನು ಕೆರೆಮನೆ ಶಿವರಾಮ ಹೆಗಡೆ ಮತ್ತು ಕೆರೆಮನೆ ಮಹಾಬಲ ಹೆಗಡೆ ಅವರ ಸಂಪರ್ಕಕ್ಕೆ ಬರುವಂತೆ ಮಾಡುತ್ತದೆ. ಮುಂದೆ ಸುಮಾರು 28 ವರ್ಷಗಳವರೆಗೆ ಯಕ್ಷಗಾನದ ಸರ್ವಾಂಗೀಣ ವಿಭಾಗಗಳಲ್ಲಿ ಪ್ರಾವಿಣ್ಯತೆಯನ್ನು ಸಾಧಿಸಿದ್ದು ಮಾತ್ರವಲ್ಲದೇ ಜೊತೆಯಲ್ಲೇ ಕನ್ನಡ ಸಾಹಿತ್ಯ ಹಾಗೂ ಛಂದಸ್ಸುಗಳ ಅಧ್ಯಯನವನ್ನೂ ಮಾಡುತ್ತಾರೆ.

ಈ ನಡುವೆ 1966ರಲ್ಲಿ ಕಾರವಾರದ ರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಪ್ರಭಾನಂದಜೀ ಅವರಿಂದ ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದುಕೊಂಡು ಪಾರಿವ್ರಾಜಕ ವೃತವನ್ನು ಸ್ವೀಕರಿಸಿದರು. ಆ ಬಳಿಕ ಹೊಸ್ತೋಟ ಮಂಜುನಾಥ ಭಾಗವತರು ತಮ್ಮ ಸಂಪೂರ್ಣ ಜೀವನವನ್ನು ಯಕ್ಷಗಾನಕ್ಕಾಗಿಯೇ ಮುಡುಪಾಗಿಟ್ಟಿದ್ದು ವಿಶೇಷ.

ಕರ್ನಾಟಕಾದ್ಯಂತ ಸಂಚರಿಸುತ್ತಾ ಹಲವಾರು ಕಡೆಗಳಲ್ಲಿ ಯಕ್ಷಗಾನ ಕಲಿಕಾ ಶಿಬಿರಗಳನ್ನು ನಡೆಸುತ್ತಾರೆ. ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಅಂಧರಿಗೆ ಯಕ್ಷಗಾನ ತರಬೇತಿ ನೀಡಿದ ಹೆಗ್ಗಳಿಕೆ ಹೊಸ್ತೋಟ ಭಾಗವತರದ್ದು. ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ವಿವಿಧ ಮಟ್ಟುಗಳ ಅಧ್ಯಯನ ಹಾಗೂ ಸಂಗ್ರಹವನ್ನು ಮಾಡುತ್ತಾರೆ.

ಯಕ್ಷಗಾನದ ಸಮಗ್ರ ವಿಚಾರಗಳ ಅಧ್ಯಯನ ಮತ್ತು ಅಧ್ಯಾಪನಕ್ಕೆ ತನ್ನ ಸಂಪೂರ್ಣ ಬದುಕನ್ನು ಸಮರ್ಪಿಸಿಕೊಂಡು ಒಂದರ್ಥದಲ್ಲಿ ‘ಯಕ್ಷ ಋಷಿ’ಯಾಗಿಯೇ ಬದುಕಿದವರು ಹೊಸ್ತೋಟ ಭಾಗವತರು. ಭಾಗವತಿಕೆ, ಮೃದಂಗ, ವೇಷಭೂಷಣ, ನೃತ್ಯ, ಭಾವಾಭಿನಯ,ಪ್ರಾತ್ಯಕ್ಷತೆಯ ಗೋಷ್ಠಿಗಳು, ಬೇಸಿಗೆ ಶಿಬಿರಗಳು, ಜಾನಪದ ವಿಚಾರ ಮಂಡನೆ ಸೇರಿದಂತೆ ತಮ್ಮ ಬದುಕಿನುದ್ದಕ್ಕೂ ಯಕ್ಷಗಾನದ ಬೆಳವಣಿಗೆಗಾಗಿ ಶ್ರಮಿಸಿದ ಸಂತ ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು.

ರಾಮಾಯಣದ 19 ಪ್ರಸಂಗಗಳು, ಮಹಾಭಾರತದ 50 ಪ್ರಸಂಗಗಳು, ಭಾಗವತದ 20 ಪ್ರಸಂಗಗಳನ್ನು ಹೊಸ್ತೋಟ ಭಾಗವತರು ರಚಿಸಿದ್ದಾರೆ. ಪಂಚತಂತ್ರ ಕಥೆಗಳನ್ನು ಆಧರಿಸಿ ಮಕ್ಕಳಿಗಾಗಿ ಚೈತ್ರ ಪೂರ್ಣಿಮಾ ಹೆಸರಿನಲ್ಲಿ 15 ಪ್ರಸಂಗಗಳನ್ನು ರಚಿಸಿದ್ದಾರೆ. ಶೆಕ್ಸ್ ಪಿಯರ್ ನ ಮ್ಯಾಕ್ ಬೆತ್ ನಾಟಕವನ್ನು ಆಧರಿಸಿ ‘ಮೇಘಕೇತ’, ಹೋಮರನ ಒಡಿಸ್ಸಿ ಕಾವ್ಯವನ್ನಾಧರಿಸಿ ‘ಉಲ್ಲಾಸದತ್ತ ಚರಿತ್ರೆ’, ಕಾಳಿದಾಸನ ‘ಮೆಘದೂತ’, ‘ಶಾಕುಂತಲ’, ಉತ್ತರರಾಮಚರಿತೆ, ದೂತವಾಕ್ಯ ಸಹಿತ 250ಕ್ಕೂ ಹೆಚ್ಚು ಪ್ರಸಂಗಗಳನ್ನು ಇವರು ರಚಿಸಿದ್ದಾರೆ.

ಹೊಸ್ತೋಟ ಭಾಗವತರು ರಚಿಸಿರುವ ‘ನಿಸರ್ಗಾನುಸಂಧಾನ’ ಎಂಬ ಪರಿಸರ ರಕ್ಷಣೆಯ ಆಶಯಕ್ಕೆ ಪೂರಕವಾಗಿರುವ ಪ್ರಸಂಗವು ಕನ್ನಡ, ಹಿಂದಿ, ಸಂಸ್ಕೃತ ಭಾಷೆಗಳಲ್ಲಿ ದೇಶಾದ್ಯಂತ ಹಲವಾರು ಪ್ರದರ್ಶನಗಳನ್ನು ಕಂಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪ್ರಶಸ್ತಿ, ಅಗ್ನಿ ಟ್ರಸ್ಟ್ ನಿಂದ ಕೊಡಮಾಡುವ ಪರಮದೇವ ಪ್ರಶಸ್ತಿ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ, ಸೀತಾನದಿ ಗಣಪಯ್ಯ ಭಾಗವತ ಪ್ರಶಸ್ತಿ, ಕಲಾರಂಗ ಉಡುಪಿಯಿಂದ ಕೊಡಮಾಡುವ ಉಪ್ಪೂರು ನಾರಾಯಣ ಭಾಗವತ ಪ್ರಶಸ್ತಿ, ಪೇಜಾವರ ಮಠದ ರಾಮ ವಿಠಲ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಹೊಸ್ತೋಟ ಭಾಗವತರನ್ನು ಅರಸಿಕೊಂಡು ಬಂದಿವೆ.

ಯಕ್ಷಗುರು, ಯಕ್ಷಭೀಷ್ಮ, ಯಕ್ಷಋಷಿ ಎಂದೆಲ್ಲಾ ಕರೆಯಲ್ಪಡುವ ಮಂಜುನಾಥ ಭಾಗವತರು ಒಂದರ್ಥದಲ್ಲಿ ಅವಧೂತರಂತೆ ಬದುಕಿ ಬಾಳಿದವರು. ಈ ಮಹಾನ್ ವ್ಯಕ್ತಿತ್ವ ನಿರ್ಯಾಣ ಹೊಂದುವುದರೊಂದಿಗೆ ಯಕ್ಷರಂಗದ ‘ಮಹಾನ್ ಚೇತನ’ವೊಂದು ಅದೃಶ್ಯವಾದಂತಾಗಿದೆ. ಆದರೆ ತಮ್ಮ ಸುದೀರ್ಘ ಜೀವನಯಾನದಲ್ಲಿ ಹೊಸ್ತೋಟ ಭಾಗವತರು ಯಕ್ಷರಂಗಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಯಕ್ಷಾಭಿಮಾನಿಗಳ ಮನಸ್ಸಿನಲ್ಲಿ ಅವರ ನೆನಪನ್ನು ಸದಾ ಹಸಿರಾಗಿಸಿದೆ.

ಪೂರಕ ಮಾಹಿತಿ: ಹೊಸ್ತೋಟ ಮಂಜುನಾಥ ಭಾಗವತ – ಒಡಲಿನ ಮಡಿಲು ಯಕ್ಷತಾರೆ, ಬಯಲಾಟದ ನೆನಪುಗಳು

ಟಾಪ್ ನ್ಯೂಸ್

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.