ತಮಿಳು ಮೂಲದ ಯಕ್ಷ ಕಲಾವಿದನಿಗೆ “ಸೂರು ಯೋಜನೆ’


Team Udayavani, Apr 13, 2017, 4:01 PM IST

Arun-Kumar-Jarkala.jpg

ಉಡುಪಿ: ಹಾಸ್ಯರಂಗದಲ್ಲಿ ಉತ್ತುಂಗಕ್ಕೇರಿದವರ ಜೀವನ ನೋವಿನಿಂದ ಕೂಡಿತ್ತೆಂಬುದಕ್ಕೆ ಹಲವು ಉದಾಹರ‌ಣೆಗಳಿವೆ. ಯಕ್ಷಗಾನವೂ ಈ ಪರಿಸ್ಥಿತಿಗೆ ಹೊರತೇನಲ್ಲ. ಅನೇಕ ಯಕ್ಷ ಕಲಾವಿದರ ಬದುಕು ನಿಜಜೀವನದಲ್ಲಿ ಬಡತನದಿಂದ ಕೂಡಿರುತ್ತದೆಂಬುದು ಒಪ್ಪಿಕೊಳ್ಳಲೇಬೇಕಾದ ಕಟುಸತ್ಯ. ಅಂತಹವರಲ್ಲಿ  ತಮಿಳುನಾಡು ಮೂಲದ ಯಕ್ಷ ಕಲಾವಿದ ಅರುಣ್‌ ಕುಮಾರ್‌ ಜಾರ್ಕಳ ಕೂಡ ಒಬ್ಬರು.

ಸತತ 14 ವರ್ಷಗಳಿಂದ ಯಕ್ಷರಂಗದಲ್ಲಿ ಕಲಾವಿದನಾಗಿªರೂ ವಾಸಕ್ಕಾಗಿ  ಸ್ವಂತ ಸೂರಿಲ್ಲ. ಈಗ ತಾನು ಇಷ್ಟೆಲ್ಲ ಬೆಳೆಯಲು ಸಾಧ್ಯವಾದ ಯಕ್ಷರಂಗ ತನಗೊಂದು ಮನೆಯನ್ನು ಕಟ್ಟಿಸಿ ಕೊಡಲಾರದೇ ಎಂದು ಯೋಚಿಸಿದ ಅರುಣ್‌ ಗೃಹ ನಿರ್ಮಾಣ ಸಹಾಯಾರ್ಥ ಎ. 13ರಂದು ಕುಂದಾಪುರದಲ್ಲಿ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರೊಂದಿಗೆ   “ಮಾನಿಷಾದ’ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಲಿದೆ.

ಮೂಲ ತಮಿಳುನಾಡಾದರೂ ಅರುಣ್‌ ಹುಟ್ಟಿದ್ದು ಉಡುಪಿ ಜಿÇÉೆಯ ಕಟಪಾಡಿ ಸಮೀಪದ ಪಾಜಕದಲ್ಲಿ. ಹೆತ್ತವರಾದ ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಉದ್ಯೋಗ ನಿಮಿತ್ತವಾಗಿ ಇಲ್ಲಿಗೆ ಬಂದು ಇಲ್ಲಿಯೇ ವಾಸವಾಗಿದ್ದಾರೆ. ದೈವ ಭಕ್ತರಾದ ದೊರೆಸ್ವಾಮಿ ಪ್ರತಿ ವರ್ಷ ಅಯ್ಯಪ್ಪನ ಮಾಲೆ ಹಾಕುವುದನ್ನು ತಪ್ಪಿಸುತ್ತಿರಲಿಲ್ಲ. ಆ ಸಮಯದಲ್ಲಿ ಊರವರ ಸಹಾಯದೊಂದಿಗೆ ಯಕ್ಷಗಾನ ಬಯಲಾಟ ಆಡಿಸುತ್ತಿದ್ದರು. 

ಇದರಿಂದ ಅರುಣ್‌ ಕುಮಾರ್‌ ಪ್ರೇರಣೆಗೊಂಡು ಯಕ್ಷಗಾನ ಕಲಾವಿದನಾಗಿ ರೂಪುಗೊಳ್ಳಲು ಸಾಧ್ಯವಾಯಿತು. ಅರುಣ್‌ ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಮಿಂಚುತ್ತಿರುವುದು ಅವರ ಅಸಾಧಾರಣ ಪ್ರತಿಭೆಗೆ ಹಿಡಿದ ಕೈಗನ್ನಡಿ. ಪ್ರಸ್ತುತ ತೆಂಕು ಹಾಗೂ ಬಡಗು ಉಭಯ ತಿಟ್ಟುಗಳಲ್ಲಿಯೂ ವಿಶಿಷ್ಟ ಶೈಲಿಯ ಹಾಸ್ಯದಿಂದ ಜನರನ್ನು ರಂಜಿಸುತ್ತಿದ್ದಾರೆ. ಧರ್ಮಸ್ಥಳ ತರಬೇತಿ ಶಿಬಿರದಲ್ಲಿ ಯಕ್ಷಗಾನದ ಕಲೆಗಳನ್ನು ಕರಗತ ಮಾಡಿಕೊಂಡ ಅವರು ಅನಂತರ ಕಟೀಲು ಮೇಳಕ್ಕೆ ಸೇರಿಕೊಂಡರು. ಮೊದಲು ಚಿಕ್ಕ ಪುಟ್ಟ ವೇಷಗಳನ್ನು ಮಾಡ‌ುತ್ತಾ ಆನಂತರ ಪ್ರಧಾನ ಹಾಸ್ಯಗಾರನಾಗಿ ಹೆಸರು ಗಳಿಸಿರುತ್ತಾರೆ. 

ವಿಶಿಷ್ಟ ಶೈಲಿಯ ಆಂಗಿಕ ಅಭಿನಯದಿಂದ ಜನರನ್ನು ನಗೆಗಡಲಲ್ಲಿ ತೇಲಿಸಬಲ್ಲ ಸಮರ್ಥ ಹಾಸ್ಯಗಾರರೆಂಬ ಖ್ಯಾತಿಯೂ ಅವರಿಗಿದೆ. ಅಮೆರಿಕ ಹಾಗೂ ಲಂಡನ್‌ನಲ್ಲೂ  ಯಕ್ಷಗಾನ ಪ್ರದರ್ಶಿಸಿದ್ದಾರೆ.ಯಕ್ಷಗಾನ ಕಲಾಭಿಮಾನಿಗಳು ಕೈಸೇರಿಸಿದರೆ ಅರುಣರಂತಹ ಅನೇಕ ಕಲಾವಿದರಿಗೆ ಸೂರು ಬಂದೀತು. 
 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.