ಮದುಮಕ್ಕಳಿಗೆ ಶುಭಪ್ರದ ಜಾತ್ರೆ

ಆ. 17: ಪೆರ್ಡೂರಿನಲ್ಲಿ ಸಿಂಹ ಸಂಕ್ರಮಣ ಸಂಭ್ರಮ

Team Udayavani, Aug 16, 2019, 5:10 AM IST

1408HBRE1

ಸಂಗ್ರಹ ಚಿತ್ರ

ವಿಶೇಷ ವರದಿಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀ ಪ್ರಿಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ ದಲ್ಲಿ ಆ. 17ರಂದು ನಡೆಯುವ ಸಿಂಹ ಸಂಕ್ರಮಣ ಆಚರಣೆ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

ಬೆಳಗ್ಗೆ 4 ಗಂಟೆಯಿಂದ ಜನಜಂಗುಳಿ, ವಾಹನ ದಟ್ಟಣೆ ಆರಂಭವಾಗುತ್ತದೆ. ಉಡುಪಿ ಜಿಲ್ಲೆ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷ.

ಬಾಳೆಹಣ್ಣಿನ ನೈವೇದ್ಯ ಪ್ರಿಯ ಶ್ರೀ ಅನಂತ ಪದ್ಮನಾಭನ ಕ್ಷೇತ್ರ ವಿಶೇಷ ಕಾರಣಿಕದ ಸಾನ್ನಿಧ್ಯವಾಗಿದ್ದು, ಭಕ್ತರು ತಮ್ಮ ಇಷ್ಟ ದೈವವನ್ನು ಸ್ಮರಿಸಿಕೊಂಡು ಪ್ರಾರ್ಥಿಸಿದರೆ ಖಂಡಿತ ಫಲ ನೀಡುತ್ತದೆ ಎಂಬ ನಂಬಿಕೆ ಭಕ್ತರದ್ದಾಗಿದೆ. 12 ಸಂಕ್ರಮಣಗಳೂ ಇಲ್ಲಿ ವಿಶೇಷವಾಗಿದ್ದು ಅದರಲ್ಲೂ ಸಿಂಹ ಸಂಕ್ರಮಣ ಹಬ್ಬದ ವಾತಾವರಣದೊಂದಿಗೆ ಬೃಹತ್‌ ಜನಸಾಗರ ಹರಿದುಬರುತ್ತದೆ.

ಮದುಮಕ್ಕಳ ಜಾತ್ರೆ
ಆಷಾಢ ಮಾಸದ ಬಳಿಕ ಬರುವ ಸಿಂಹ ಮಾಸ ನೂತನ ಮದುಮಕ್ಕಳಿಗೆ ವಿಶೇಷ. ಹೊಸದಾಗಿ ಮದುವೆಯಾದ ಮದುಮಕ್ಕಳು ದೇವರ ದರ್ಶನ ಮಾಡಿ ಹೋಗುವ ಸಂಪ್ರದಾಯ ಮೊದಲಿನಿಂದ‌ಲೂ ನಡೆದು ಬರುತ್ತಿದೆ. ಮದುಮಗ ತನ್ನ ಮನೆ ಹಿರಿಯ ರೊಂದಿಗೆ ಬಂದು ತನ್ನ ಮಡದಿಯನ್ನು ಕರೆದೊಯ್ಯುವ ಹಾಗೂ ಮದುಮಗಳು ತನ್ನ ತಂದೆ-ತಾಯಿಯೊಂದಿಗೆ ಬಂದು ಗಂಡನ ಮನೆಯೆಡೆಗೆ ನಡೆಯಲು ಸೇರುವ ತಾಣ ಪೆರ್ಡೂರಿನ ಸಿಂಹ ಸಂಕ್ರಮಣವಾಗಿತ್ತು. ಅದಕ್ಕಾಗಿಯೇ ಕಳೆದ ವರ್ಷ ಮದುವೆಯಾದ ಜೋಡಿಗಳು ಜತೆಯಾಗಿ ಬಂದು ಮುಂದಿನ ಭವಿಷ್ಯಕ್ಕಾಗಿ ಶ್ರೀ ಸ್ವಾಮಿಯನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದ್ದು, ಇಂದು ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿಯನ್ನು ಪಡೆದಿದೆ.

ಹನ್ನೆರಡು ಸಂಕ್ರಮಣ ವ್ರತ
ಸಂಕ್ರಮಣ ದೇವರು ಎಂದು ಪ್ರಸಿದ್ಧಿ ಪಡೆದ ಪೆರ್ಡೂರು ಕ್ಷೇತ್ರವು ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟ ದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ಧತಿ ಹಿಂದಿನಿಂದಲೂ ಇದೆ. ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ‌ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ.

ಹಿಂದೆ ಪ್ರತಿ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತರು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾರ್ಥಿಸಿ ವ್ರತಾಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಒಳಾಂಗಣದ ಸುತ್ತ ತಗಡಿನ ಚಪ್ಪರ
ಭಕ್ತರು ಯಾವುದೇ ನೂಕು ನುಗ್ಗಲಿಲ್ಲದೆ ಮಳೆಯಲ್ಲಿ ಒದ್ದೆಯಾಗದಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ದೇವಸ್ಥಾನ ಒಳಾಂಗಣದ ಸುತ್ತ ತಗಡಿನ ಚಪ್ಪರ ಹಾಕಲಾಗಿದೆ. ಅಲ್ಲದೆ ದೇವಸ್ಥಾನ ಜೀಣೊìದ್ಧಾರದ ಅಂಗವಾಗಿ ಸುತ್ತುಪೌಳಿಯ ನೀಲ ನಕ್ಷೆ ತಯಾರಾಗಿದ್ದು ಭಕ್ತರ ಸಹಕಾರದೊಂದಿಗೆ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ.
– ಪ್ರಮೋದ್‌ ರೈ ಪಳಜೆ, ಅಧ್ಯಕ್ಷ ರು, ದೇವಸ್ಥಾನ ವ್ಯವಸ್ಥಾಪನ ಸಮಿತಿ

ಬಾಳೆಹಣ್ಣಿಗೊಲಿವ ಭಗವಂತ
ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದ ಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರಿಗೆ ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ಧಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು , 500 ಬಾಳೆಹಣ್ಣು, ದಿನಕ್ಕೊಂದು ಬಾಳೆಹಣ್ಣು , ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತಗೊಂಡಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.