Mandarthi Temple : ಫೆ. 14: ಶ್ರೀ ಮನ್ಮಹಾರಥೋತ್ಸವ
ಕೆಂಡಸೇವೆ ಬೇಗನೆ ಪ್ರಾರಂಭ
Team Udayavani, Feb 11, 2024, 7:25 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ. 13ರ ಕುಂಭ ಸಂಕ್ರಮಣದಂದು ರಾತ್ರಿ ಕೆಂಡಸೇವೆ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು, ಅನಂತರ ಐದೂ ಮೇಳಗಳಿಂದ ಸೇವೆ ಆಟ ಜರಗಲಿದೆ.
ಕೆಂಡಸೇವೆ ಬೇಗನೆ ಪ್ರಾರಂಭ
ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಂಡಸೇವೆ ಈ ಬಾರಿ ಮಾಮೂಲಿಗಿಂತ ಬೇಗನೆ ಪ್ರಾರಂಭಗೊಳ್ಳಲಿದೆ.
ರಾತ್ರಿ 7ರಿಂದ ಸೇವಾ ಚೀಟಿ ನೀಡಲು ಪ್ರಾರಂಭವಾಗಲಿದ್ದು, ರಾತ್ರಿ 9ಕ್ಕೆ ದರ್ಶನ ಸೇವೆ ಮುಗಿದ ಅನಂತರ ಕೆಂಡ ಸೇವೆ ಜರಗಲಿದೆ.
ರಶೀದಿ ಮಾಡಿದವರಿಗೆ ಮಾತ್ರವೇ ಕೆಂಡ ಸೇವೆಯ ಅವಕಾಶ ಇರಲಿದೆ ಎಂದು ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಮತ್ತು ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಎಸ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ