ಜು. 26: ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ
ಝೀರೋ ಟ್ರಾಫಿಕ್
Team Udayavani, Jul 23, 2019, 5:06 AM IST
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘ ಅವರು ಜು. 26ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಲಿರುವುದರಿಂದ ಉಡುಪಿ ಪೊಲೀಸ್ ವರಿಷ್ಠಾ ಧಿಕಾರಿ ನಿಶಾ ಜೇಮ್ಸ್ ನೇತೃತ್ವದಲ್ಲಿ ಸೋಮವಾರ ದೇಗುಲದ ಅತಿಥಿ ಗೃಹ ಸಹಿತ ಒಳ ಪೌಳಿಯ ಪರಿಶೀಲನೆ ನಡೆಯಿತು.
ನವಚಂಡಿಯಾಗಕ್ಕೆ ತಯಾರಿ
ಶ್ರೀಲಂಕಾ ಪ್ರಧಾನಿ ಶುಕ್ರವಾರ ನಡೆಯಲಿರುವ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಭಾಗವಹಿಸುವರು.ಪೊಲೀಸ್ ವರಿಷ್ಠಾ ಧಿಕಾರಿ ನಿಶಾ ಜೇಮ್ಸ್, ಡಿವೈಎಸ್ಪಿ ದಿನೇಶ್ ಕುಮಾರ್, ಬೈಂದೂರು ವೃತ್ತ ಪೊಲೀಸ್ ಅ ಧಿಕಾರಿಗಳ ತಂಡವು ದೇಗುಲದ ಕಾರ್ಯ ನಿರ್ವಹಣಾಧಿ ಕಾರಿ ಎಚ್. ಹಾಲಪ್ಪ ಅವರೊಡನೆ ಎರಡು ವರುಷಗಳಿಂದ ಶ್ರೀಲಂಕಾ ಪ್ರಧಾನಿಯವರ ವಿಶೇಷ ಪೂಜೆ ಸಂದರ್ಭದ ವ್ಯವಸ್ಥೆಗಳು, ಭಾಗವಹಿಸುವವರ ಮಾಹಿತಿ ಸಂಗ್ರಹಿಸಿದರಲ್ಲದೆ ಪ್ರತಿಯೊಬ್ಬರಿಗೂ ಗುರುತು ಚೀಟಿ ನೀಡುವ ಬಗ್ಗೆ ಚರ್ಚಿಸಿದರು.
ದರ್ಶನ ಸಮಯ ಬದಲುಶುಕ್ರವಾರ ಬೆಳಗ್ಗೆ 9 ಗಂಟೆ ತನಕ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ವಿರಲಿದೆ. ಬಳಿಕ ಶ್ರೀಲಂಕಾ ಪ್ರಧಾನಿ ಯವರ ನವಚಂಡಿಯಾಗದ ಪೂರ್ಣಾಹುತಿ ತನಕ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ತನಕ ಕೊಲ್ಲೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಸತಿ ಸಮುಚ್ಚಯ ಸಂಪೂರ್ಣ ಬಂದ್ ಮಾಡಲಾಗುವುದು. ವಾಹನಸಂಚಾರ ಸಹಿತ ಪಾದಚಾರಿಗಳ ಸಂಚಾರಕ್ಕೆ ಈ ಅವ ಧಿಯಲ್ಲಿ ನಿರ್ಬಂಧವಿರಲಿದೆ. ಭಕ್ತರು ಸಹಕರಿಸಬೇಕು ಎಂದು ದೇಗುಲದ ಕಾರ್ಯನಿರ್ವಹಣಾಧಿ ಕಾರಿ ಎಚ್. ಹಾಲಪ್ಪ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ.
ಗುಪ್ತಚರ ಅಧಿಕಾರಿಗಳ ಆಗಮನ
ರಾಜ್ಯ, ಕೇಂದ್ರ ಸ್ತರದಿಂದ ಈಗಾಗಲೇ ಆಗಮಿಸಿರುವ ವಿಶೇಷ ಪೊಲೀಸ್ ತಂಡಗಳು ಕೊಲ್ಲೂರು ಸಹಿತ ಆಸುಪಾಸಿನ ಗ್ರಾಮಗಳ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿವೆ.
ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಲ್ಲೂರಿನ ಅರೆಶಿರೂರು ಹೆಲಿಪ್ಯಾಡಿಗೆ ಆಗಮಿಸಲಿರುವ ಶ್ರೀಲಂಕಾ ಪ್ರಧಾನಿಯ ಭದ್ರತೆಯ ನಿಟ್ಟಿನಲ್ಲಿ ಹೆಲಿಪ್ಯಾಡ್ ಸಹಿತ ಕೊಲ್ಲೂರಿಗೆ ವಾಹನದಲ್ಲಿ ಸಾಗುವ ದಾರಿಯುದ್ದಕ್ಕೂ ವಿಶೇಷ ಪೊಲೀಸ್ ಪಡೆ ನಿಯೋಜಿಸಲಾಗುವುದು. ಹವಾಮಾನ ವೈಪರೀತ್ಯವಿದ್ದಲ್ಲಿ ಮಂಗಳೂರಿನಿಂದ ಕೊಲ್ಲೂರಿಗೆ ಅವರು ರಸ್ತೆ ಮಾರ್ಗವಾಗಿ ಪ್ರಯಾ ಣಿಸುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ