ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಶ್ರೀ ವಿದ್ಯಾರಾಜೇಶ್ವರ ತೀರ್ಥರು


Team Udayavani, May 13, 2019, 6:15 AM IST

palimaru-mutt

ಉಡುಪಿ: ಶುಕ್ರವಾರ ಸನ್ಯಾಸಾಶ್ರಮ ಸ್ವೀಕರಿಸಿದ ಕಂಬಳಕಟ್ಟದ ಶೈಲೇಶ್‌ ಉಪಾಧ್ಯಾಯರು ರವಿವಾರ ಶ್ರೀಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯೋಜನೆಗೊಂಡರು. 30ನೆಯ ಪೀಠಾಧಿಪತಿಗಳಾದ ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು 31ನೆಯ ಪೀಠಾಧಿಪತಿಯವರನ್ನು ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಎಂದು ಪ್ರಕಟಿಸಿದರು.

ಮಧ್ಯಾಹ್ನ 12.20 ಗಂಟೆ ಅಭಿಜಿನ್‌ ಮುಹೂರ್ತದಲ್ಲಿ ಸರ್ವಜ್ಞ ಪೀಠದಲ್ಲಿ ಕುಳಿತು ಶ್ರೀವಿದ್ಯಾಧೀಶತೀರ್ಥರು ಶಿಷ್ಯನಿಗೆ ಪಟ್ಟಾಭಿಷೇಕ ನಡೆಸಿದರು. ತಮ್ಮ ಉಪಾಸ್ಯಮೂರ್ತಿಗಳಾದ ವೇದವ್ಯಾಸರು, ಶ್ರೀಕೃಷ್ಣ, ವಿಶ್ವಂಭರ ಸಾಲಿಗ್ರಾಮವನ್ನು ಹರಿವಾಣದಲ್ಲಿಟ್ಟು ಅದನ್ನು ಶಿಷ್ಯನ ಶಿರದ ಮೇಲಿರಿಸಿ ಅಭಿಷೇಕ ಮಾಡಿದರು. ಈ ನೀರು ಶಿಷ್ಯನ ದೇಹವನ್ನು ಒದ್ದೆಯಾಗಿಸಿತು.

ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಆಶ್ರಮ ಜ್ಯೇಷ್ಠ ಯತಿಗಳಿಗೆ ಶ್ರೀವಿದ್ಯಾಧೀಶ ತೀರ್ಥರು, ಶ್ರೀ ವಿದ್ಯಾರಾಜೇಶ್ವರ ತೀರ್ಥರು ಫ‌ಲ ಸಮರ್ಪಣೆಯೊಂದಿಗೆ ದಂಡವತ್‌ ಪ್ರಣಾಮ ಗೌರವ ಸಲ್ಲಿಸಿದರು. ಎಲ್ಲ ಮಠಾಧೀಶರು ಪಟ್ಟ ಕಾಣಿಕೆಯನ್ನು ಸಮರ್ಪಿಸಿದರು.
ಬೆಳಗ್ಗೆ ಮಹಾಪೂಜೆಯನ್ನು ಶ್ರೀವಿದ್ಯಾ ಧೀಶತೀರ್ಥ ಶ್ರೀಪಾದರು ನಡೆಸಿದರು.

ಬಳಿಕ ಗರ್ಭಗುಡಿ ಹೊರಭಾಗ ವೈದಿಕರು ಚತುರ್ವೇದ ಪಾರಾಯಣ, ಭಾಗವತ, ಮಹಾಭಾರತ, ವಿಷ್ಣುಸಹಸ್ರನಾಮ, ಗೀತೆ ಇತ್ಯಾದಿ ಪವಿತ್ರ ಗ್ರಂಥಗಳ ಪಾರಾಯಣ ವನ್ನು, ಮಧ್ವಮಂಟಪದಲ್ಲಿ ಮಹಿಳೆಯರು ಲಕ್ಷ್ಮೀಶೋಭಾನೆ ಪಠನ ನಡೆಸಿದರು.

ಪಲಿಮಾರು ಮಠದ ಶ್ರೀ ರಾಜರಾಜೇಶ್ವರತೀರ್ಥರು ರಚಿಸಿದ “ಮಂಗಲಾಷ್ಟಕ’ವನ್ನು ರಾಜಾಂಗಣದಲ್ಲಿ ಮೂರ್‍ನಾಲ್ಕು ಬಾರಿ ಪಠಿಸಲಾಯಿತು. ಇದನ್ನು ದೇಶಕ್ಕೆ ಒಳಿತಾಗಲೆಂದು “ಮಂಗಲ ಭಾರತ ನಿರ್ಮಾಣ’ ಪರಿಕಲ್ಪನೆಯಲ್ಲಿ ಪಾರಾಯಣ ನಡೆಸಲಾಯಿತು. ಮಧ್ವಮಂಟಪ, ರಾಜಾಂಗಣದಲ್ಲಿ ನೇರ ಪ್ರಸಾರ ನಡೆಸಲಾಯಿತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.