ಇಂದು ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ 


Team Udayavani, Aug 30, 2021, 8:00 AM IST

ಇಂದು ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ 

ಉಡುಪಿ/ಮಂಗಳೂರು: ಶ್ರೀಕೃಷ್ಣಮಠ ಸಹಿತ ನಾಡಿನೆಲ್ಲೆಡೆ ಸೋಮವಾರ ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ಮಂಗಳವಾರ ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಆಚರಣೆ ಸಾಂಪ್ರದಾಯಿಕವಾಗಿ ನಡೆ ಯ ಲಿದೆ. ದ.ಕ. ಜಿಲ್ಲೆಯಲ್ಲಿ ಸಾರ್ವ ಜನಿ ಕ ವಾಗಿ ಶ್ರೀಕೃಷ್ಣಾಷ್ಟಮಿ ಆಚರಣೆಗೆ ಅವಕಾಶ ವಿಲ್ಲದ ಕಾರಣ ಶ್ರೀಕೃಷ್ಣ ದೇವಾಲಯ ಗಳಲ್ಲಿ ಶ್ರೀದೇವರಿಗೆ ಸರಳವಾಗಿ ವಿಶೇಷ ಪೂಜೆ ನೆರವೇರಲಿದೆ. ಮನೆಗಳಲ್ಲಿ ಶ್ರೀ ಕೃಷ್ಣಾಷ್ಟಮಿಯನ್ನು ಶ್ರದ್ಧಾ,ಭಕ್ತಿ, ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರೀಕೃಷ್ಣಮಠದಲ್ಲಿ ಆ. 30ರಂದು ಬೆಳಗ್ಗೆ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸು ವರು. ಬೆಳಗ್ಗೆ ಮಹಾಪೂಜೆ ಬಳಿಕ ರಾತ್ರಿ ಪೂಜೆಯ ನಿವೇದನೆಗೆ ಉಂಡೆ ಕಟ್ಟುವುದಕ್ಕೆ ಸ್ವಾಮೀಜಿ ಮುಹೂರ್ತ ಮಾಡುವರು. ಹಗಲು ಏಕಾದಶಿಯಂತೆ ನಿರ್ಜಲ ಉಪವಾಸವಿರುವ ಕಾರಣ ರಾತ್ರಿ ಮಹಾಪೂಜೆಯನ್ನೂ ನಡೆಸಿ ಮಧ್ಯರಾತ್ರಿ 12.15ಕ್ಕೆ ಸ್ವಾಮೀಜಿ ಯವರು ಇತರ ಸ್ವಾಮೀಜಿಯವರ ಜತೆಗೂಡಿ ಕೃಷ್ಣನಿಗೆ ಅಘÂìಪ್ರದಾನ ಮಾಡಲಿದ್ದಾರೆ. ಆ ಬಳಿಕ  ಕನಕನ ಕಿಂಡಿ ಎದುರು ಮತ್ತು ವಸಂತ ಮಂಟಪದಲ್ಲಿ ಅಘÂìವನ್ನು ಬಿಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ಶ್ರೀಕೃಷ್ಣಮಠವನ್ನು ಪುಷ್ಪಗಳಿಂದ ಸೋಮವಾರ ಅಲಂಕರಿಸಲಾಗುತ್ತದೆ. ಆ. 30ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ, ಆ. 31ರ ಬೆಳಗ್ಗೆ 7.30ರಿಂದ ಮಧ್ಯಾಹ್ನ 1ರ ವರೆಗೆ, ರಥೋತ್ಸವದ ಬಳಿಕ 5 ಗಂಟೆಯಿಂದ ದರ್ಶನಾವಕಾಶವಿದೆ. ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ದರ್ಶನ ಪಡೆಯಬೇಕು. ಯಾತ್ರಾರ್ಥಿಗಳು ವಿಶ್ವಪಥದ ಮೂಲಕ, ಸುದರ್ಶನ ಪ್ರವೇಶ ಪತ್ರ ಹೊಂದಿದ ಸ್ಥಳೀಯರು ಉತ್ತರ ಮತ್ತು ದಕ್ಷಿಣ ದ್ವಾರದಿಂದ ದರ್ಶನ ಪಡೆಯಬಹುದು.

ಕೊರೊನಾ ಕಾರಣದಿಂದ ಜನರ ನೂಕುನುಗ್ಗಲಿಗೆ ಅವಕಾಶ ಕೊಟ್ಟಿಲ್ಲ. ಇದೇ ಕಾರಣದಿಂದ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಈ ವರ್ಷವೂ ಏರ್ಪಡಿಸಿಲ್ಲ. ಸರಕಾರದ ನಿಯಮಾ ನುಸಾರ ವಿಟ್ಲಪಿಂಡಿ ಉತ್ಸವದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವುದಕ್ಕೆ ಅವಕಾಶ ನೀಡಿಲ್ಲ. ಮಠದ ಸಿಬಂದಿ, ಗೋಪಾಲಕರು ಮಾತ್ರ ಭಾಗವಹಿಸಿ ಮೊಸರುಕುಡಿಕೆ ಉತ್ಸವವನ್ನು ಆಚರಿಸಲಿದ್ದಾರೆ.

ಶ್ರೀಕೃಷ್ಣಮಠದ ಎಲ್ಲ ಪೂಜೆ, ಉತ್ಸವಗ ಳನ್ನು ಆನ್‌ಲೈನ್‌ನಲ್ಲಿ ಬಿತ್ತ¤ರಿಸ ಲಾಗುತ್ತಿದೆ. ವಿವಿಧ ಸಂಘಟನೆಗಳು ಆನ್‌ಲೈನ್‌ ಸ್ಪರ್ಧೆಗಳನ್ನು ಏರ್ಪ ಡಿಸಿವೆ. ಮನೆಗಳಲ್ಲಿ ಕೃಷ್ಣಾಷ್ಟಮಿ ಆಚರಿಸು ವವರು ಮಾರುಕಟ್ಟೆಗಳಿಂದ ಬೇಕಾದ ಸಾಮಗ್ರಿಗಳನ್ನು ಖರೀದಿಸಿದ್ದು ಪೂಜೆ, ಭಜನೆ, ಅಘÂìಪ್ರದಾನಗಳಿಂದ ಕೃಷ್ಣಜಯಂತಿಯನ್ನು ನಡೆಸುತ್ತಿದ್ದಾರೆ.

ಪ್ರಸಕ್ತ ಸನ್ನಿವೇಶದಲ್ಲಿ ಕೃಷ್ಣ   ನೀತಿ ಮಾರ್ಗದ ಅಗತ್ಯ :

ರಾಮ ಮತ್ತು ಕೃಷ್ಣ ಭಗವಂತನ ಅವತಾರವಾದರೂ ಕಾಲ ಬೇರೆ ಬೇರೆ. ಹೀಗಾಗಿ ಅವರಿಬ್ಬರ ನಡವಳಿಕೆಗಳಲ್ಲಿ ವ್ಯತ್ಯಾಸಗಳನ್ನು ಗಮನಿಸಬಹುದು. ರಾಮಚಂದ್ರನ ನಡೆ ನೇರ ನೇರ ಇತ್ತು. ಅಲ್ಲಿ ತಪ್ಪುಗಳನ್ನು ರಾಮಚಂದ್ರ ಮಾಡುವುದಿಲ್ಲ ಅಥವಾ ತಪ್ಪು ಮಾಡದೆ ಬದುಕುವುದು ಹೇಗೆ ಎಂಬ ಸಂದೇಶ ಸಿಗುತ್ತದೆ. ಕೃಷ್ಣಾವತಾರ ಕಾಲದಲ್ಲಿ ಅದಲು ಬದಲು ಕಾಣುತ್ತದೆ. ಕಾರಣ ಸಾಮಾಜಿಕ ಸ್ಥಿತಿಗತಿಯೂ ಬದಲಾಗಿತ್ತು. ಶ್ರೀಕೃಷ್ಣ ತಪ್ಪು ಮಾಡಿದಂತೆ ಕಾಣುತ್ತದೆ. ಕಲಿಯುಗದಲ್ಲಿ ಈ ತರಹದಲ್ಲಿಯೇ ಇರಬೇಕೆಂದು ಕೃಷ್ಣ ತೋರಿಸಿಕೊಟ್ಟಿದ್ದಾನೆ.

ಶ್ರೀಕೃಷ್ಣ ಎಂದೂ ರಾಜನಾಗಲಿಲ್ಲ. ಆತ ರಾಜರು ಹೇಗಿರಬೇಕೆಂದು ತೋರಿಸಿಕೊಟ್ಟ. ಸುಮಾರು 5,000 ವರ್ಷಗಳ ಹಿಂದೆ ಮಹಿಳೆಯರು, ಗೋಪಾಲಕರಾದಿ ಕಂಸ, ಜರಾಸಂಧನಂತಹ ಉಗ್ರರಿಂದ ತತ್ತರಿಸುವಾಗ ಭಗವಂತ ಕೃಷ್ಣನಾಗಿ ಅವತರಿಸಿ ರಕ್ಷಿಸಿದ. “ಕರ್ಷತೀತಿ’ ಎಂಬಂತೆ ತನ್ನೆಡೆಗೆ ಆಕರ್ಷಿಸುವವನು ಅವನಾದ.

ಶ್ರೀಕೃಷ್ಣ ಮಾಡಿದ ಉಪಕಾರವನ್ನು ಸ್ಮರಿಸಲೋಸುಗ ಪ್ರತೀ ವರ್ಷ ಆತನ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಆತ ಎಲ್ಲೆಡೆ ಹಬ್ಬಿಕೊಂಡಿದ್ದ ದುರ್ಜನರನ್ನು ಮುಗಿಸಿದ್ದು ಲೋಕಕ್ಕೆ ಮಾಡಿದ ಉಪಕಾರ. ಈಗಲೂ ಎಲ್ಲರನ್ನು ಸದೆ ಬಡಿಯುವ ದುಷ್ಟರಿದ್ದಾರೆ. ಎಲ್ಲರನ್ನೂ ಬದುಕಲು ಬಿಡಬೇಕೆಂಬ ಕಲ್ಪನೆ ಭಾರತೀಯರದು. ಹೀಗಾಗಿಯೇ ಎಲ್ಲ ಧರ್ಮದವರಿಗೆ ಭಾರತದಲ್ಲಿ ಅವಕಾಶ ಸಿಕ್ಕಿದ್ದು. ಆದರೆ ಲೋಕಕ್ಕೆಲ್ಲ ಭಯ ಉಂಟು ಮಾಡುವ ಲೋಕ ಕಂಟಕರೂ ಮೂಡಿದರು. ಬೇರೆ ಬೇರೆ ಹೆಸರುಗಳಲ್ಲಿ ದೇಶ, ಸಮಾಜವನ್ನು ಹಾಳುಗೆಡಹುವವರು ಇದ್ದಾರೆ. ದೇಶ ಕಟ್ಟುವವರು ಕೃಷ್ಣನ ನೀತಿ ಪಾಠವನ್ನು ಅನುಸರಿಸಬೇಕು.

ಇಂದಿನ ಜಾಗತಿಕ ಪರಿಸ್ಥಿತಿ ನೋಡಿದರೆ ಕೃಷ್ಣ ಸಂದೇಶ, ಕೃಷ್ಣ ಜಯಂತಿ ಆಚರಣೆ, ಕೃಷ್ಣಮಾರ್ಗದ ನಡೆಯ ಅಗತ್ಯ ಕಂಡುಬರುತ್ತದೆ. ಮಾನವರಾಗಿ ಜನಿಸಿದ ಮೇಲೆ ಭಗವಂತನ ಕುರಿತಾದ ಜ್ಞಾನ ಸಂಪಾದಿಸಬೇಕು. ಜ್ಞಾನದ ಜತೆ ಕರ್ಮವನ್ನೂ ಮೇಳೈಸಿಕೊಂಡು ಕರ್ತವ್ಯದಲ್ಲಿ ರಾಜಕೀಯಪ್ರಜ್ಞೆಯನ್ನು ತೋರಬೇಕಾಗಿದೆ. ಶ್ರೀಕೃಷ್ಣಾಷ್ಟಮಿಯು ಕರ್ತವ್ಯಪ್ರಜ್ಞೆಯನ್ನು ಎಲ್ಲರಲ್ಲಿಯೂ ಮೂಡಿಸಲಿ. ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠ, ಶ್ರೀಕೃಷ್ಣಮಠ, ಉಡುಪಿ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.