ಶ್ರೀಕೃಷ್ಣ ಮಠದಲ್ಲಿ ಇನ್ನು ನಾಲ್ಕು ತಿಂಗಳು ವಿಭಿನ್ನ ಆಹಾರ


Team Udayavani, Jul 5, 2017, 3:45 AM IST

krishna.jpg

ಉಡುಪಿ: ಚಾತುರ್ಮಾಸ ವ್ರತದ ಆಹಾರ ಪದ್ಧತಿ ಉಡುಪಿ ಸಂಪ್ರದಾಯದ ಮಠಗಳಲ್ಲಿ ಆಷಾಢ ಮಾಸದ ದ್ವಾದಶಿಯಿಂದ ನಾಲ್ಕು ತಿಂಗಳು ಪರ್ಯಂತ ನಡೆಯಲಿದೆ. ಪ್ರಥಮನ ಏಕಾದಶಿಯಂದು ಉಪವಾಸವಿದ್ದು ತಪ್ತ
ಮುದ್ರಾಧಾರಣೆ ಮಾಡಿದ ಅನಂತರ ನಾಲ್ಕು ತಿಂಗಳಲ್ಲಿ ನಾಲ್ಕು ತರಹದ ಆಹಾರ ಕ್ರಮ ಸಂಪ್ರದಾಯದಂತೆ ನಡೆಯಲಿದೆ. ಇದು ಸಹಜವಾದ ಆಹಾರ ಕ್ರಮಕ್ಕಿಂತ ಸಂಪೂರ್ಣ ಭಿನ್ನವಾಗಿರುತ್ತದೆ.

ಮೊದಲ ತಿಂಗಳು ಶಾಕವ್ರತ
ಮೊದಲ ತಿಂಗಳ ಆಹಾರ ಕ್ರಮವನ್ನು ಶಾಕವ್ರತ ಎನ್ನುತ್ತಾರೆ. ಈ ತಿಂಗಳಲ್ಲಿ ತರಕಾರಿ ಬಳಸುವುದಿಲ್ಲ. ಮಾವು ಹೊರತಾಗಿ ಇತರ ಹಣ್ಣುಗಳನ್ನು ಬಳಸುವುದಿಲ್ಲ. ಪೊನ್ನಂಗೈ ಸೊಪ್ಪು, ತಿಮರೆ ಸೊಪ್ಪು, ಮಾವಿನಕಾಯಿ, ಪಾಪಡ್ಕ ಕಾಯಿಯನ್ನು ಬಳಸುತ್ತಾರೆ. ಹುಣಿಸೆಹುಳಿ ಬದಲು ಮಾವಿನಕಾಯಿಯನ್ನು, ಹಸಿ ಮೆಣಸು- ಒಣ ಮೆಣಸಿನ ಬದಲು ಕಾಳು ಮೆಣಸು ಬಳಸುತ್ತಾರೆ. ಇದಕ್ಕಾಗಿ ಮಾವಿನಕಾಯಿಯನ್ನು ಬೇಸಗೆಯಲ್ಲಿ ಒಣಗಿಸಿ ಇಟ್ಟು ಈಗ ಬಳಸುತ್ತಾರೆ. ಉದ್ದು, ಹೆಸರು ಬೇಳೆ ಹೊರತು ಪಡಿಸಿ ಇನ್ನಾವುದೇ ಬೇಳೆಯನ್ನು ಬಳಸುವುದಿಲ್ಲ. ಒಟ್ಟಿನಲ್ಲಿ ಬೇರು (ಭೂಮಿಯಡಿ ಬೆಳೆ
ಯುವಂಥದ್ದು), ಕಾಂಡ (ತರಕಾರಿಗಳು), ಪತ್ರ(ಪತ್ರೊಡೆಯಂತಹ ಖಾದ್ಯ ತಯಾರಿ ಎಲೆಗಳು), ಪುಷ್ಪ (ಗುಂಬಳ, ದಾಸವಾಳದಂತಹ ಹೂವು), ಹಣ್ಣುಗಳನ್ನು ಬಳಸುವುದಿಲ್ಲ. ಸಾರು, ಸಾಂಬಾರು, ಪಲ್ಯ, ಪಾಯಸಕ್ಕೆ ಹೆಸರು ಬೇಳೆ
ಮುಖ್ಯ. ಪಂಚಕಜ್ಜಾಯವನ್ನು ಹೆಸರುಬೇಳೆಯಿಂದ ಮಾಡಲಾಗುತ್ತದೆ. ಕಡಲೆ ಬೇಳೆ ಮಡ್ಡಿಯ ಬದಲು ಹೆಸರು ಬೇಳೆ ಮಡ್ಡಿ ಮಾಡುತ್ತಾರೆ.

2- 3ನೇ ತಿಂಗಳು ಕ್ಷೀರ ವ್ರತ, ದಧಿವ್ರತ
ಎರಡನೆಯ ತಿಂಗಳ ವ್ರತವನ್ನು ಕ್ಷೀರ ವ್ರತ ಎನ್ನುತ್ತಾರೆ. ಈ ತಿಂಗಳಲ್ಲಿ ಹಾಲಿನ ಬಳಕೆ ಇಲ್ಲ. ಮೂರನೆಯ ತಿಂಗಳಿನ ವ್ರತವನ್ನು ದಧಿವ್ರತ ಎನ್ನುತ್ತಾರೆ. ಈ ತಿಂಗಳಲ್ಲಿ ಮೊಸರನ್ನು ಬಳಸುವುದಿಲ್ಲ.

ನಾಲ್ಕನೇ ತಿಂಗಳು ದ್ವಿದಳ ವ್ರತ
ನಾಲ್ಕನೆಯ ತಿಂಗಳ ಆಹಾರ ಕ್ರಮವನ್ನು ದ್ವಿದಳ ವ್ರತ ಎನ್ನುತ್ತಾರೆ. ಈ ತಿಂಗಳಲ್ಲಿ ಯಾವುದೇ ಬೇಳೆ, ಹಸಿ ಮೆಣಸು, ಒಣಮೆಣಸನ್ನು ಬಳಸುವುದಿಲ್ಲ. ಭೂಮಿಯಡಿ ಬೆಳೆಯುವ ಗಡ್ಡೆ ಗೆಣಸು, ಬಾಳೆ ದಿಂಡು, ಬಾಳೆಕಾಯಿ, ಬಾಳೆಕೂಂಬೆ ಬಳಸುತ್ತಾರೆ. ಹಣ್ಣುಗಳಲ್ಲಿ ಬಾಳೆ ಹಣ್ಣನ್ನು ಬಳಸಲಾಗುತ್ತದೆ. ಕಾಳು ಮೆಣಸು ಖಾರಕ್ಕಾಗಿ, ಮಾವಿನಕಾಯಿ ಹುಳಿಗಾಗಿ ಬಳಸುತ್ತಾರೆ. ಈ ತಿಂಗಳಲ್ಲಿ ಅರಳಿನ ಚಿತ್ರಾನ್ನ, ಪಲ್ಯ, ಅವಲಕ್ಕಿಯ ಪಾಯಸ ಮಾಡುತ್ತಾರೆ. ಯಾವ ಬೇಳೆಯನ್ನೂ ಬಳಸುವುದಿಲ್ಲವಾದ ಕಾರಣ ರವೆಯ ಮಡ್ಡಿಯನ್ನು ಮಾಡುತ್ತಾರೆ. ಮೊದಲ ಮತ್ತು ಕೊನೆಯ ತಿಂಗಳಲ್ಲಿ ಗೋಡಂಬಿ, ದ್ರಾಕ್ಷಿ, ಲಾವಂಚ, ಏಲಕ್ಕಿಯಂತಹ ಪರಿಮಳ ದ್ರವ್ಯಗಳನ್ನು ಬಳಸುವುದಿಲ್ಲ. 

ಅಭ್ಯಾಸವಿಲ್ಲದವರಿಗೆ ಈ ವ್ರತಗಳ ಆಹಾರ ರುಚಿಸುವುದಿಲ್ಲ. ಹೀಗಾಗಿ ಶ್ರೀಕೃಷ್ಣ ಮಠದಲ್ಲಿ ಯಾತ್ರಾರ್ಥಿಗಳಿಗೆ ಎಂದಿನಂತೆ ಸಾರು, ಸಾಂಬಾರಿನ ಖಾದ್ಯಗಳನ್ನು ತಯಾರಿಸುತ್ತಾರೆ. ನೈವೇದ್ಯಕ್ಕಾಗಿ ವ್ರತದ ಆಹಾರವನ್ನು ತಯಾರಿಸುತ್ತಾರೆ ಮತ್ತು ಈ ಆಚಾರವನ್ನು ಪಾಲಿಸುವ ವ್ರತಧಾರಿಗಳು ಚಾತುರ್ಮಾಸ ವ್ರತದ ಆಹಾರವನ್ನು
ಬಳಸುತ್ತಾರೆ. ವಿಶೇಷವಾಗಿ ಸ್ವಾಮೀಜಿಯವರು, ಆಚಾರನಿಷ್ಠ ವಿದ್ವಾಂಸರು ವ್ರತದ ಆಹಾರ ಕ್ರಮವನ್ನು ಅನುಸರಿಸುತ್ತಾರೆ. ನಾಲ್ಕೂ ತಿಂಗಳು ಒಂದು ಸ್ವಲ್ಪವೂ ತಪ್ಪದೆ ಈ ಆಹಾರಕ್ರಮ ಪಾಲಿಸುವ ಆಚಾರನಿಷ್ಠರೂ ಇದ್ದಾರೆ. ಆದರೆ ಸಂಖ್ಯೆಯಲ್ಲಿ ಇವರು ಕಡಿಮೆ. 

ಜು. 4ರಿಂದ ಚಾತುರ್ಮಾಸ ವ್ರತ ಆಹಾರ ಕ್ರಮ ಉಡುಪಿ ಸಂಪ್ರದಾಯದ ಎಲ್ಲ ಮಠಗಳಲ್ಲಿ ಆರಂಭಗೊಳ್ಳುತ್ತದೆ. ಸ್ವಾಮೀಜಿ ಯವರ ಚಾತುರ್ಮಾಸ ವ್ರತ (ಒಂದೆಡೆ ಕುಳಿತುಕೊಂಡು ಸಾಧನೆ ಮಾಡುವ) ಎರಡು ತಿಂಗಳಲ್ಲಿ ಮುಗಿದರೂ ಆಹಾರ ಕ್ರಮ ನಾಲ್ಕೂ ತಿಂಗಳು ಮುಂದುವರಿಯುತ್ತದೆ.

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.