ಒಳ್ಳೆಯತನ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಾಧ್ಯ

ಅತ್ತೂರು ವಾರ್ಷಿಕ ಮಹೋತ್ಸವದ ನಾಲ್ಕನೇ ದಿನ: ಉಡುಪಿ ಬಿಷಪ್‌ ಸಂದೇಶ

Team Udayavani, Jan 29, 2020, 11:04 PM IST

2901KKRAM6C

ಕಾರ್ಕಳ: ಒಳ್ಳೆಯತನ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಉಡುಪಿ ಬಿಷಪ್‌ ಡಾ| ಜೆರಾಲ್ಡ್‌ ಲೋಬೋ ಅಭಿಪ್ರಾಯಪಟ್ಟರು.

ಅವರು ಜ. 29ರಂದು ಸಂತ ಲಾರೆನ್ಸ್‌ ಅತ್ತೂರು ಬಸಿಲಿಕಾದ ನಾಲ್ಕನೇ ದಿನ ಬಲಿಪೂಜೆ ನೆರವೇರಿಸಿ ಸಂದೇಶ ನೀಡಿದರು.ಭಗವಂತ ಮನುಷ್ಯನನ್ನು ಒಳ್ಳೆಯತನಕ್ಕಾಗಿ ಸೃಷ್ಟಿಸಿದ್ದಾನೆ. ಆದರೆ, ಮನುಷ್ಯ ತನ್ನ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು ಕೆಲ ಸಂದರ್ಭ ಕೆಟ್ಟತನವನ್ನು ಆಲಂಗಿಸಿಕೊಳ್ಳುತ್ತಾನೆ ಎಂದವರು ಹೇಳಿದರು.

ಬುಧ‌ವಾರದಂದು ಪುಣ್ಯಕ್ಷೇತ್ರದಲ್ಲಿ ಹನ್ನೊಂದು ಬಲಿಪೂಜೆಗಳು ನೆರವೇರಿದವು. ಈ ಸಂದರ್ಭ ಸಾವಿರಾರು ಭಕ್ತಾದಿಗಳು ನೆರೆದಿದ್ದರು.

ದಿನದ ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿಯ ಧರ್ಮಾಧ್ಯಕ್ಷರಾದ ಜೆರಾಲ್ಡ್‌ ಲೋಬೋ ಕೊಂಕಣಿ ಭಾಷೆಯಲ್ಲಿ, ಹಾಗೂ ಬೆಳ್ತಂಗಡಿಯ ಧರ್ಮಾಧ್ಯಕ್ಷ ಲಾರೆನ್ಸ್‌ ಮುಕ್ಕುಝಿ ಕನ್ನಡ ಭಾಷೆಯಲ್ಲಿ ನೆರವೇರಿಸಿದರು. ಬಳಿಕ ದೈಹಿಕ ಹಾಗೂ ಮಾನಸಿಕ ಅಸ್ವಸ್ಥರಿಗಾಗಿ ವಿಶೇಷ ಪ್ರಾರ್ಥನೆ ನಡೆಸಿಕೊಟ್ಟರು.

ಕರ್ನಾಟಕದಾದ್ಯಂತದಿಂದ ಸುಮಾರು 350ಕ್ಕೂ ಮಿಕ್ಕಿದ ಧರ್ಮಗುರುಗಳು ಹಾಗೂ ಸೇವಾದರ್ಶಿಗಳು ಮಹೋತ್ಸವದ ಐದು ದಿನಗಳಲ್ಲು ಭಕ್ತಾದಿಗಳ ಆಧ್ಯಾತ್ಮಿಕ ಸೇವೆಯಲ್ಲಿ ತಮ್ಮನ್ನೇ ತೊಡಗಿಸಿಕೊಂಡಿದ್ದರು. 500 ಕ್ಕೂ ಮಿಕ್ಕಿ ಸ್ವಯಂಸೇವಕರು ವಿವಿಧ ವಿಭಾಗಗಳಲ್ಲಿ ಸಕ್ರಿಯವಾಗಿದ್ದು ಮಹೋತ್ಸವ ಸುಸೂತ್ರವಾಗಿ ನಡೆಯುವಲ್ಲಿ ಸಹಕರಿಸಿದ್ದರು.

ಮಿಯ್ನಾರಿನ ವಂ| ಜೇಸನ್‌ ಡಿ’ಸೋಜಾ, ಪೆರಂಪಳ್ಳಿಯ ವಂ| ಅನಿಲ್‌ ಡಿ’ಕೋಸ್ಟಾ, ಬೈಂದೂರಿನ ವಂ| ವಿನ್ಸೆಂಟ್‌ ಕುವೆಲ್ಲೊ, ಮಂಗಳೂರು ಜೆಪ್ಪು ಸೆಮಿನರಿಯ ರೆಕ್ಟರ್‌ ವಂ| ರೊನಾಲ್ಡ್‌ ಸೆರಾವೊ, ಉಡುಪಿ ಶೋಕಮಾತಾ ದೇವಾಲಯದ ವಂ| ವಲೇರಿಯನ್‌ ಮೆಂಡೊನ್ಸಾ, ಗಂಗೊಳ್ಳಿಯ ವಂ| ಅಲ್ಬರ್ಟ್‌ ಕ್ರಾಸ್ತಾ ಹಾಗೂ ಚಿತ್ರದುರ್ಗ ಹಿರಿಯೂರಿನ ವಂ| ಫ್ರಾಂಕ್ಲಿನ್‌ ಡಿ’ಸೋಜಾರವರು ಕೊಂಕಣಿ ಭಾಷೆಯಲ್ಲಿ ಬಲಿಪೂಜೆಗಳನ್ನು ನೆರವೇರಿಸಿದರು. ಚಿಕ್ಕಮಗಳೂರಿನ ವಂ| ಡೇವಿಡ್‌ ಪ್ರಕಾಶ್‌ ಹಾಗೂ ಶಿವಮೊಗ್ಗದ ವಂ| ಲಾರೆನ್ಸ್‌ ಡಿ’ಸೋಜಾ ಕನ್ನಡ ಬಲಿಪೂಜೆಗಳನ್ನು ನೆರವೇರಿಸಿ ಭಕ್ತಾದಿಗಳಿಗಾಗಿ ಪ್ರಾರ್ಥಿಸಿದರು.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಶಾಸಕ ರಮಾನಾಥ ರೈ, ಅಭಯಚಂದ್ರ ಜೈನ್‌ ಭೇಟಿ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.