
ವಿಶ್ವಾಸಿಗಳ ಬದುಕು ಸಾರ್ಥಕ: ಪುತ್ತೂರು ಬಿಷಪ್
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕೋತ್ಸವ
Team Udayavani, Jan 24, 2023, 6:10 AM IST

ಕಾರ್ಕಳ: ಪ್ರಭು ಯೇಸುಕ್ರಿಸ್ತರ ಮುಖಾಂತರ ಕಾಲಪೂರ್ಣತೆಯಲ್ಲಿ ಪ್ರಕಟವಾದ ದೇವರ ಸುವಾರ್ತೆಯಲ್ಲಿ ನಂಬಿಕೆ ಇಟ್ಟು, ಅದನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಂಡು ಬಾಳಲು ಪಣ ತೊಡುವವರು ತಮ್ಮ ಜೀವನದಲ್ಲಿ ದೇವರಿಗೆ ಮಹಿಮೆ ನೀಡುತ್ತಾರೆ. ಸುವಾರ್ತೆಯ ಸಂದೇಶ ಸದ್ಗುಣಗಳನ್ನು ಬೆಳೆಸಲು ಮತ್ತು ಸಮಾಜಮುಖಿಯಾಗಿ ಬಾಳಲು ಆಧಾರ. ಇದರಂತೆ ಬಾಳುವ ವಿಶ್ವಾಸಿಗಳ ಬದುಕು ನಿಜಕ್ಕೂ ಸಾರ್ಥಕ ಎಂದು ಪುತ್ತೂರು ಸೀರೊ ಮಲಂಕರ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಾಯಿಲ್ ಹೇಳಿದರು.
ಅವರು ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ಎರಡನೇ ದಿನ ಸೋಮವಾರ ಪ್ರಮುಖ ಬಲಿಪೂಜೆ ನೆರವೇರಿಸಿ ಪ್ರಬೋಧನೆ ನೀಡಿದರು.
ಮಹೋತ್ಸವದ ಎರಡನೇ ದಿನವೂ ಭಕ್ತರು ನಿರಂತರ ಆಗಮಿಸುತ್ತ ಸಂತ ಲಾರೆನ್ಸರ ಪವಾಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಿಗಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು.
ಸುವಾರ್ತಾ ಪ್ರಸಾರಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದಿನದ ಬಲಿಪೂಜೆಗಳನ್ನು ವಂ| ಸುನಿಲ್ ಡೊಮಿನಿಕ್ ಲೋಬೊ ಪೆರಂಪಳ್ಳಿ, ವಂ| ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂ| ಪ್ರದೀಪ್ ಕಾಡೋಜಾ ಮೂಡುಬೆಳ್ಳೆ, ವಂ| ಆಲ್ಬರ್ಟ್ ಕ್ರಾಸ್ತಾ, ಪಿಯುಸ್ನಗರ, ವಂ| ಸಂತೋಷ್ ರಾಡ್ರಿಗಸ್ ಮಂಗಳೂರು ನೆರವೇರಿಸಿದರು. ದಿನದ ಅಂತಿಮ ಬಲಿಪೂಜೆಯನ್ನು ವಂ| ಡೊ. ಲೆಸ್ಲಿ ಡಿ’ಸೋಜಾ ಶಿರ್ವ ಅವರು ರಾತ್ರಿ 8 ಗಂಟೆಗೆ ನೆರವೇರಿಸಿ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮಗಳನ್ನು ಸಂಪನ್ನಗೊಳಿಸಿದರು.
ಮಹೋತ್ಸವದ ಮೂರನೇ ದಿನ ಮಂಗಳವಾರ ಬೆಳಗ್ಗೆ 8, 10, 12 ಹಾಗೂ ಅಪರಾಹ್ನ 2, 4, 6 ಮತ್ತು 8 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಸಂಜೆ 6 ಗಂಟೆಗೆ ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ ಕನ್ನಡದಲ್ಲಿ ಬಲಿಪೂಜೆ ನೆರವೇರಿಸಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ