ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ: ವಾರ್ಷಿಕ ಮಹೋತ್ಸವಕ್ಕೆ ಚಾಲನೆ
Team Udayavani, Jan 27, 2020, 6:04 AM IST
ಕಾರ್ಕಳ: ಪ್ರಸಿದ್ಧ ಕೆೈಸ್ತ ಪುಣ್ಯಕ್ಷೇತ್ರ ಅತ್ತೂರು ಸಂತ ಲಾರೆನ್ಸರ ಬಸಿಲಿಕಾದಲ್ಲಿ ಪವಿತ್ರ ವಾರ್ಷಿಕ ಮಹೋತ್ಸವಕ್ಕೆ ರವಿವಾರ ಚಾಲನೆ ದೊರೆಯಿತು. ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ಧ್ವಜಾರೋಹಣ ಗೈಯುವ ಮೂಲಕ ಚಾಲನೆ ನೀಡಿದರು. ಬಳಿಕ ದಿವ್ಯ ಬಲಿಪೂಜೆ ನಡೆಸಿದರು. ಬೆಳಗ್ಗೆ ಪುಷ್ಕರಣಿಯಲ್ಲಿ ಸಂತ ಲಾರೆನ್ಸರ ಪವಾಡ ಮೂರ್ತಿಯನ್ನು ಅನಾವರಣಗೊಳಿಸಲಾಯಿತು. ಅಪರಾಹ್ನ 2.30ಕ್ಕೆ ಮತ್ತು 4.30ಕ್ಕೆ ಮಕ್ಕಳಿಗಾಗಿ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆ ನೆರವೇರಿತು.
ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಡಾ| ಅಲೋಶಿಯಸ್ ಪಾವ್É ಡಿ’ಸೋಜಾ ಕೊಂಕಣಿಯಲ್ಲಿ ದಿವ್ಯ ಬಲಿಪೂಜೆ ನಡೆಸಿದರು.
ಮಹೋತ್ಸವದ ಮೊದಲನೇ ದಿನ ರವಿವಾರವಾದ ಹಿನ್ನೆಲೆಯಲ್ಲಿ ಅತ್ತೂರು ಬಸಿಲಿಕಾದತ್ತ ಜನಸಾಗರವೇ ಹರಿದು ಬಂತು.
ಇಂದಿನ ಕಾರ್ಯಕ್ರಮ
ಜ. 27ರಂದು ಬೆಳಗ್ಗೆ 10ಕ್ಕೆ ಮತ್ತು ಅಪರಾಹ್ನ 3.30ಕ್ಕೆ ಅಸ್ವಸ್ಥರಿಗಾಗಿ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆ ಜರಗಲಿವೆ. ಚಿಕ್ಕಮಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ| ಟಿ. ಅಂತೋಣಿ ಸ್ವಾಮಿ ಕನ್ನಡದಲ್ಲಿ ಬಲಿಪೂಜೆ ನಡೆಸಿಕೊಡಲಿದ್ದಾರೆ. ಅಲ್ಲದೆ ಹಲವಾರು ಕೊಂಕಣಿ ಬಲಿಪೂಜೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ