ಮತ್ತೆ ತೆರೆದುಕೊಳ್ಳಲಿದೆ ಸೈಂಟ್ ಮೇರಿಸ್; ಸೆ. 26ರಿಂದ ಪ್ರಾರಂಭ; ಸುರಕ್ಷೆಗೆ ಮಹತ್ವ
ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯಿಂದ ಸ್ವಚ್ಛತಾ ಕಾರ್ಯ
Team Udayavani, Sep 24, 2022, 7:20 AM IST
ಮಲ್ಪೆ: ಕಳೆದ ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಮಲ್ಪೆ ಸೈಂಟ್ ಮೇರಿಸ್ ದ್ವೀಪ ಸೆ. 26ರಿಂದ ಪ್ರವಾಸಿಗರಿಗೆ ಮತ್ತೆ ತೆರೆದುಕೊಳ್ಳಲಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಇಲ್ಲಿ ಸ್ವತ್ಛತಾ ಕಾರ್ಯ ನಡೆಯುತ್ತಿದೆ.
ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ. 15ರ ವರಗೆ ದ್ವೀಪಕ್ಕೆ ಜನ ಪ್ರವೇಶ ನಿರ್ಬಂಧ ಹೇರುತ್ತದೆ. ಈ ಸಮಯದಲ್ಲಿ ಪ್ರವಾಸಿ ಬೋಟುಯಾನಗಳು ಸ್ಥಗಿತಗೊಳ್ಳುತ್ತವೆ. ಮಲ್ಪೆ ಬೀಚ್ನಲ್ಲೂ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಇರುತ್ತದೆ. ಇದೀಗ ಸೆ. 26ರಿಂದ ಮತ್ತೆ ತೆರೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ವಚ್ಛತಾ ಕಾರ್ಯ
ಮಳೆಗಾಲದಲ್ಲಿ ನಾಲ್ಕು ತಿಂಗಳಿಂದ ಇಲ್ಲಿ ಜನಸಂಚಾರ ಇರದೇ ಬೆಳೆದು ನಿಂತ ಹುಲ್ಲನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತದೆ. ಐಲ್ಯಾಂಡ್ ಸುತ್ತ ಸಮುದ್ರತೀರದಲ್ಲಿ ಕಸಕಡ್ಡಿ, ಪ್ಲಾಸಿಕ್ ತ್ಯಾಜ್ಯಗಳು ದಡದಲ್ಲಿ ಸಂಗ್ರಹವಾಗಿದ್ದು ಇದೀಗ ಸ್ವಚ್ಛಗೊಳಿಸಲಾಗುತ್ತಿದೆ. ಐಲ್ಯಾಂಡ್ನ ಪ್ರವೇಶ ದ್ವಾರ, ವೈಟಿಂಗ್ ಲಾಂಚ್, ಕ್ಯಾಂಟೀನ್, ಶೌಚಾಲಯದ ದುರಸ್ತಿ ಪಡಿಸಲಾಗುತ್ತದೆ. ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯಿಂದ ಎಲ್ಲ ಕೆಲಸಗಳು ನಡೆಯುತ್ತಿವೆ.
ಐಲ್ಯಾಂಡ್ನ್ನು ಸ್ವಚ್ಛಗೊಳಿಸಲು ಈಗಾಗಲೇ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ. ಈ ಬಾರಿ ಪ್ರವಾಸಿಗರ ಸುರಕ್ಷೆೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತದೆ. ಸಮುದ್ರದ ವಾತಾವರಣ ಹಾಗೂ ಐಲ್ಯಾಂಡಿನ ಸ್ಥಿತಿಗತಿಯನ್ನು ನೋಡಿಕೊಂಡು ಮುಂದಿನ ತೀರ್ಮಾನವನ್ನು ಕೈಗೊಳ್ಳಲಾಗುವುದು.
-ಎಂ. ಕೂರ್ಮಾರಾವ್, ಜಿಲ್ಲಾಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ