ನಿಂತ ಕೊಳಚೆ ನೀರು: ಬೈಲೂರು ಪೇಟೆ ಪರಿಸರ ದುರ್ನಾತ
Team Udayavani, Jul 29, 2019, 5:05 AM IST
ಅಜೆಕಾರು: ಬೈಲೂರು ಗ್ರಾ.ಪಂ. ವ್ಯಾಪ್ತಿಯ ಬೈಲೂರು ಪೇಟೆಯ ಬಳಿಯಲ್ಲಿಯೇ ಕೊಳಚೆ ನೀರು ನಿಂತು ಪರಿಸರ ದುರ್ವಾಸನೆಯಿಂದ ಕೂಡಿದೆ.
ಬೈಲೂರು ಪೇಟೆಯಿಂದ ಬೈಲೂರು ಪ್ರಾಥಮಿಕ ಶಾಲೆ, ಅಂಗನವಾಡಿ, ಪಂಚಾಯತ್ ಕಚೇರಿ, ಗ್ರಾಮ ಕರಣಿಕರ ಕಚೇರಿಯನ್ನು ಸಂಪರ್ಕಿಸಲು ಇರುವ ಕಾಲು ದಾರಿಯಲ್ಲಿಯೇ ಕೊಳಚೆ ನೀರು ನಿಂತ ಕಾರಣ ಗ್ರಾಮಸ್ಥರು ಸಂಕಷ್ಟ ಪಡುವಂತಾಗಿದೆ. ಮಳೆ ಸಂದರ್ಭ ಕಾಲು ದಾರಿಯಲ್ಲಿಯೇ ಸುಮಾರು ಒಂದು ಅಡಿ ನೀರು ನಿಲ್ಲುವ ಜತೆಗೆ ಚರಂಡಿಯ ಕೊಳಚೆ ನೀರು ಇದರೊಂದಿಗೆ ಸೇರುತ್ತಿದೆ. ಪ್ರತೀನಿತ್ಯ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದೇ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗುತ್ತಿದ್ದು, ಸಾಂಕ್ರಾಮಿಕ ರೋಗದ ಭೀತಿ ಸ್ಥಳೀಯರನ್ನು ಕಾಡುತ್ತಿದೆ.
ಬೈಲೂರಿನ ಕೆಲ ಹೊಟೇಲ್ಗಳ ತ್ಯಾಜ್ಯವನ್ನು ಇದಕ್ಕೆ ಹರಿಯಬಿಡಲಾಗುತ್ತಿದೆ. ಮಳೆ ನೀರು ಹಾಗೂ ಕೊಳಚೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್