ಮಕ್ಕಳ ಅನುಕೂಲಕ್ಕೆ ಬಸ್ ಸಂಚಾರ ಆರಂಭಿಸಿ: ಶಾಸಕರ ಸೂಚನೆ
Team Udayavani, Aug 6, 2019, 5:56 AM IST
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ ಅನುಕೂಲವಾಗುವಂತೆ ಬಸ್ ಸೌಕರ್ಯ ಕಲ್ಪಿಸುವ ಸಂಬಂಧ ಸೋಮವಾರ ನೆಂಪುವಿನಲ್ಲಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳ ಸಭೆ ನಡೆಯಿತು.
ಶಾಸಕರು ಮಾತನಾಡಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಶಂಕರನಾರಾಯಣ, ನೆಂಪು, ಬೈಂದೂರು, ಕೊಲ್ಲೂರು ಕಾಲೇಜುಗಳಿಗೆ ಬೇರೆ ಬೇರೆ ಕಡೆಗಳಿಂದ ಕಲಿಯಲು ಬರುವ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಬಸ್ಗಳು ಇಲ್ಲದೆ ಬೆಳಗ್ಗೆ ಕಾಲೇಜಿಗೆ ಬರಲು ಹಾಗೂ ಮನೆಗೆ ವಾಪಾಸು ತೆರಳಲು ಸಮಸ್ಯೆಯಾಗುತ್ತದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವಂತೆ ಬೆಳಗ್ಗಿನ ಹಾಗೂ ಸಂಜೆಯ ಅವಧಿಯಲ್ಲಿ ಬಸ್ ಸೌಕರ್ಯ ಕಲ್ಪಿಸಲು ಆದ್ಯತೆ ಮೇರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಉದಯವಾಣಿ ವರದಿ
ಗ್ರಾಮೀಣ ಭಾಗಗಳಲ್ಲಿ ಬಸ್ ಸೌಕರ್ಯವಿಲ್ಲದೆ ಶಾಲಾ – ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ‘ಉದಯವಾಣಿ’ ಪತ್ರಿಕೆಯು ನಿರಂತರ ವಾಗಿ ವಿಶೇಷ ವರದಿ ಮಾಡುವ ಮೂಲಕ ಬಸ್ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿತ್ತು. ಸಭೆಯಲ್ಲಿ ಭಾಗಿಯಾಗಿದ್ದ ಸ್ಥಳೀಯ ಮುಖಂಡರು, ಹೊಸಾಡು, ಕಾಲ್ತೋಡು, ಹೇರೂರು ಭಾಗದ ಬಸ್ ಸಮಸ್ಯೆ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು.
ಈ ಸಭೆಯಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ವಿಭಾಗದ ಆಯುಕ್ತ ರಾಮಕೃಷ್ಣ, ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ., ಡಿಟಿಒ ಜೈಶಾಂತ್, ಕುಂದಾಪುರ ಡಿಪೋ ಮೆನೇಜರ್ ರಾಜೇಶ್ ಮೊಗವೀರ, ದೀಪಕ್ ಕುಮಾರ್ ಶೆಟ್ಟಿ, ಅಶೋಕ್ ಶೆಟ್ಟಿ ಹೇರೂರು, ಶ್ರೀನಿವಾಸ ಪೂಜಾರಿ, ಸುರೇಶ್ ನಾಯ್ಕ, ರಮೇಶ್ ಆಚಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ