ಮರಳುಗಾರಿಕೆ ಆರಂಭ
Team Udayavani, Dec 11, 2019, 4:24 AM IST
ಕಂಡ್ಲೂರಿನಲ್ಲಿ ನಡೆಯುತ್ತಿರುವ ಮರಳುಗಾರಿಕೆ.
ಕುಂದಾಪುರ: ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮಂಗಳವಾರದಿಂದ ಆರಂಭವಾಗಿದೆ. ಕೆಲವು ವರ್ಷಗಳಿಂದ ನಿಂತಿದ್ದ ಮರಳುಗಾರಿಕೆಗೆ ಅನುಮತಿ ದೊರೆತು ಒಂದಷ್ಟು ದಿನ ಮರಳು ಸಾಗಾಟವಾಗಿತ್ತು. ಅನಂತರ ಲಾರಿಯಲ್ಲಿ ಮರಳು ತುಂಬಿಸಿದ ಬಳಿಕ ವೇ ಬ್ರಿಡ್ಜ್ನಲ್ಲಿ ತೂಕ ಮಾಡಿಯೇ ವಿತರಿಸಬೇಕೆಂದು ಜಿಲ್ಲಾಡಳಿತ ಶರತ್ತು ವಿಧಿಸಿದ ಕಾರಣ ಮರಳುಗಾರಿಕೆ ಸ್ಥಗಿತವಾಗಿತ್ತು. ತೂಗದೇ ಮರಳು ನೀಡಿದರೆ ಒದ್ದೆ ಮರಳು ಲಾರಿಯಲ್ಲಿ ತುಂಬಿಸಿ ಹೆಚ್ಚು ತೂಕ ಬಂದು, ಖರೀದಿಸಿದವರಿಗೆ ಮೋಸವಾಗುವ ಸಾಧ್ಯತೆಯನ್ನು ಜಿಲ್ಲಾಡಳಿತ ಮನಗಂಡಿತ್ತು. ಪರಿಣಾಮವಾಗಿ ಗಣಿ ಇಲಾಖೆಯು ಮರಳುಗಾರಿಕೆಗೆ ನೀಡಿದ್ದ ಪರವಾನಿಗೆಯನ್ನು ಅಮಾನತು ಮಾಡಿತ್ತು.
ನೂರಾರು ಲಾರಿಗಳು ಮರಳು ತುಂಬಿಸಿ ಸಾಗಾಟ ಮಾಡಲಾಗದ ಪರಿಸ್ಥಿತಿಯಿದ್ದು, ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ಲೋಡು ಮಾಡಿದ ಲಾರಿಗಳನ್ನು ಕಳುಹಿಸಲು ಗಣಿ ಇಲಾಖೆ ಕ್ರಮ ಕೈಗೊಂಡಿತ್ತು. ಮಂಗಳವಾರದಿಂದ ಮತ್ತೆ ಮರಳುಗಾರಿಕೆ ಆರಂಭವಾಗಿದೆ. ಕಂಡ್ಲೂರು ಮತ್ತು ಬಳ್ಕೂರಿನಲ್ಲಿ ಮರಳು ತೆಗೆಯಲು ಅನುಮತಿ ಇದ್ದು, ಸೋಮವಾರದಿಂದ ಶನಿವಾರದ ವರೆಗೆ ನಿಗದಿಪಡಿಸಿದ ಹಣ ಪಾವತಿಸಿ ಮರಳು ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ