ಕರಾವಳಿಯ ಇಬ್ಬರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ


Team Udayavani, Dec 12, 2017, 10:30 AM IST

12-9.jpg

ಉಡುಪಿ: ಕರ್ನಾಟಕ ನಾಟಕ ಅಕಾಡೆಮಿಯ 2017ನೇ ಸಾಲಿನ ಪ್ರಶಸ್ತಿ ಘೋಷಿಸಲಾಗಿದ್ದು, ನಟ- ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರು ಮತ್ತು ಉಡುಪಿಯ ಹಿರಿಯ ರಂಗಭೂಮಿ ಕಲಾವಿದ ಹೇರೂರು ದಯಾನಂದ ಶೆಟ್ಟಿ ಆಯ್ಕೆಯಾದವರಲ್ಲಿದ್ದಾರೆ.

ಹೇರೂರು ದಯಾನಂದ ಶೆಟ್ಟಿ
ಹೇರೂರು ದಯಾನಂದ ಶೆಟ್ಟಿ ಅವರು ಕಂಪೆನಿ ನಾಟಕಗಳಲ್ಲಿ ಪಳಗಿ ದವರು. ಸರ್ವಮಂಗಲ ನಾಟಕ ಸಭಾ, ಹಾಲಸಿದ್ದೇಶ್ವರ ನಾಟಕ ಕಂಪೆನಿಗಳ ಸದಸ್ಯರಾಗಿದ್ದರು. ಭಕ್ತ ಕುಂಬಾರ, ಯಚ್ಚಮ ನಾಯಕ, ಬೇಡರ ಕಣ್ಣಪ್ಪ, ಸತೀಧರ್ಮ, ಶ್ರೀರಾಮ ಜನನ, ದಾನಶೂರ ಕರ್ಣ, ಟಿಪ್ಪು ಸುಲ್ತಾನ್‌, ಮಕ್ಮಲ್‌ಟೋಪಿ ಮೊದಲಾದ ನಾಟಕಗಳಲ್ಲಿ ನಟಿಸಿದ್ದರು. ಯೆಚ್ಚಮ ನಾಯಕ ನಾಟಕದಲ್ಲಿ ರಾಜ್‌ ಜತೆ ತಿರುವೆಂಕಟ ಪಾತ್ರವನ್ನು ನಿರ್ವಹಿಸಿದ್ದರು. ಸುಬ್ಬಯ್ಯ ನಾಯ್ಡು ನಾಟಕ ಕಂಪೆನಿಯಲ್ಲಿ ಸುಮಾರು 15 ವರ್ಷ ಕೆಲಸ ಮಾಡಿದ್ದ ಶೆಟ್ಟಿಯವರು ಆಗ ರಾಜಕುಮಾರ್‌ ಜತೆ ಅಭಿನಯಿಸಿದ್ದರು.

ಕೃಷ್ಣಮೂರ್ತಿ ಕವತ್ತಾರು
ಮೂಲ್ಕಿ ಬಳಿಯ ಕವತ್ತಾರಿನಲ್ಲಿ ಜನಿಸಿದ ಕೃಷ್ಣಮೂರ್ತಿಯವರು ನಟ, ನಿರ್ದೇಶಕರು. ಯಕ್ಷಗಾನದ ಮೂಲಕ ನಾಟಕ ರಂಗ ಪ್ರವೇಶಿಸಿ ದರು. ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಆರಂಭಿಕ ರಂಗ ಕಲಿಕೆ ನಡೆಸಿ ದರು. ಚಿತ್ರದುರ್ಗದ ಜಮುರಾ ಸುತ್ತಾಟ, ಮಲ್ಲಾಡಿಹಳ್ಳಿಯ ತಿರುಕ ರಂಗ, ಕುಕ್ಕೆ ಸುಬ್ರಹ್ಮಣ್ಯದ ಕುಸುಮಸಾರಂಗ, ಮುದ್ರಾಡಿಯ ನಮ ತುಳುವೆರ್‌ ಮೊದಲಾದ ರಂಗ ಸಂಘಟನೆಗಳಲ್ಲಿ ಕೆಲಸ ಮಾಡಿದ್ದಾರೆ. ಏಕವ್ಯಕ್ತಿ ಪ್ರಯೋಗ “ಸಾಯುವನೇ ಚಿರಂಜೀವಿ’ಯನ್ನು ನಾಡಿನಾದ್ಯಂತ 111 ಬಾರಿ ಪ್ರಯೋಗಿಸಿದ್ದಾರೆ. 300ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.