ರಾಜ್ಯ ಮೀನುಗಾರಿಕಾ ಇಲಾಖೆ: ಅರ್ಧಕ್ಕೂ ಹೆಚ್ಚು ಹುದ್ದೆ ಖಾಲಿ


Team Udayavani, Jul 25, 2019, 7:48 AM IST

fishing

ಕುಂದಾಪುರ: ರಾಜ್ಯದಲ್ಲಿ 9.61 ಲಕ್ಷ ಮೀನುಗಾರರನ್ನು ಹಾಗೂ ವಾರ್ಷಿಕ ಕೋಟ್ಯಂತರ ರೂಪಾಯಿ ಮೀನು ಉತ್ಪಾದನೆ ಆದಾಯ ಹೊಂದಿರುವ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಅರ್ಧಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿಯಾಗಿಯೇ ಇದೆ.

ರಾಜ್ಯದ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರಮುಖ ಕಸುಬಾಗಿರುವ ಮೀನುಗಾರಿಕೆಗೆ ಸಂಬಂಧಪಟ್ಟಿರುವ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಅಧಿಕಾರಿ ಹಾಗೂ ಸಿಬಂದಿ ಎಲ್ಲ ಒಟ್ಟು ಸೇರಿ 1,401 ಹುದ್ದೆಗಳಿವೆ. ಆದರೆ ಈವರೆಗೆ ಭರ್ತಿಯಾಗಿರುವುದು ಮಾತ್ರ ಕೇವಲ 683 ಹುದ್ದೆಗಳು. ಅಂದರೆ ಒಟ್ಟು 718 ಹುದ್ದೆಗಳು ಖಾಲಿಯಿವೆ.

ನಿರ್ದೇಶಕರೇ ಪ್ರಭಾರ

ಮೀನುಗಾರಿಕಾ ಇಲಾಖೆಯಲ್ಲಿ ರಾಜ್ಯ ಮೀನುಗಾರಿಕಾ ನಿರ್ದೇಶಕರ ಹುದ್ದೆಯೇ ಮೇಲ್ಸ್ತರದ ಹುದ್ದೆಯಾಗಿದ್ದು, ಅದುವೇ ಖಾಲಿಯಾಗಿದೆ. ಸದ್ಯ ಜಂಟಿ ನಿರ್ದೇಶಕರೇ ಪ್ರಭಾರ ನೆಲೆಯಲ್ಲಿ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಎಲ್ಲ ಹುದ್ದೆಗಳು ಕೂಡ ಈಗಾಗಲೇ ಭರ್ತಿಯಾಗಿವೆ.

ಯಾವ್ಯಾವ ಹುದ್ದೆ ಖಾಲಿ

ಇಲಾಖೆಯಲ್ಲಿ ಒಬ್ಬ ಮೀನುಗಾರಿಕಾ ನಿರ್ದೇಶಕರಿರಬೇಕಿದ್ದು, ಅದು ಭರ್ತಿಯಾಗಿಲ್ಲ. ಇಬ್ಬರು ಜಂಟಿ ನಿರ್ದೇಶಕರ ಹುದ್ದೆ ಭರ್ತಿಯಾಗಿದೆ. ಒಬ್ಬ ಉಪನಿರ್ದೇಶಕರಿದ್ದಾರೆ. ಒಬ್ಬ ಹಿರಿಯ ಸಹಾಯಕ ನಿರ್ದೇಶಕ (ಆಡಳಿತ)ರಿದ್ದಾರೆ. ಇನ್ನು 33 ಸಹಾಯಕ ನಿರ್ದೇಶಕರ ಪೈಕಿ ಕೇವಲ 23ನ್ನು ಮಾತ್ರ ತುಂಬಲಾಗಿದ್ದು, ಬಾಕಿ 10 ಹುದ್ದೆ ಖಾಲಿಯಾಗಿವೆ. 8ರಲ್ಲಿ 8 ಪ್ರಾಂತೀಯ ಉಪ ನಿರ್ದೇಶಕರ ಹುದ್ದೆ ಭರ್ತಿಯಾಗಿದೆ. 26 ಜಿಲ್ಲಾ ಮೀನುಗಾರಿಕಾ ನಿರ್ದೇಶಕರ ಪೈಕಿ 12 ಮಾತ್ರ ಭರ್ತಿಯಾಗಿದ್ದು, 14 ಹುದ್ದೆ, 186 ತಾಲೂಕು ಮಟ್ಟದ ಅಧಿಕಾರಿಗಳ ಪೈಕಿ 144 ಭರ್ತಿಯಾಗಿದ್ದು, 42 ಹುದ್ದೆಗಳು ಖಾಲಿಯಿವೆ.

ತ್ವರಿತ ನಿರ್ವಹಣೆಗೆ ಅಡ್ಡಿ

ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನುಗಾರಿಕೆ ನಡೆಸುವವರಿಗೆ ತ್ವರಿತ, ಸಮರ್ಪಕವಾಗಿ ನೆರವಾಗುವ ನಿಟ್ಟಿನಲ್ಲಿ ಇಲಾಖೆಯಲ್ಲಿರುವ ಎಲ್ಲ ಹುದ್ದೆಗಳು ಭರ್ತಿಯಾಗುವುದು ಆವಶ್ಯಕವಾಗಿದ್ದು, ಆದರೆ ಅರ್ಧಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಇರುವುದರಿಂದ ಇಲಾಖೆಯ ಅಡಿಯಲ್ಲಿ ಬರುವಂತಹ ಬೇರೆ ಬೇರೆ ರೀತಿಯ ಕೆಲಸಗಳು ವಿಳಂಬವಾಗುತ್ತಿವೆ. ಯೋಜನೆಗಳು ಸಮರ್ಪಕ ರೀತಿಯಲ್ಲಿ ಮಂಜೂರಾಗುತ್ತಿಲ್ಲ. ಇದಲ್ಲದೆ ಅನುದಾನ ಬಿಡುಗಡೆಯಲ್ಲಿಯೂ ವಿಳಂಬವಾಗುತ್ತಿದೆ. ಇದಲ್ಲದೆ ದಾಖಲೆ ಸಂಗ್ರಹ ಕಾರ್ಯವೂ ನಡೆಯುತ್ತಿಲ್ಲ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.