ಕೇರಳದಂತೆ ಹಲಸಿಗೆ ರಾಜ್ಯ ಹಣ್ಣು ಮಾನ್ಯತೆ ನಿರೀಕ್ಷೆ

ನಿಟ್ಟೆ: 5 ಕೋ.ರೂ. ವೆಚ್ಚದಲ್ಲಿ ಸಂಸ್ಕರಣ ಘಟಕ ನಿರ್ಮಾಣ

Team Udayavani, May 19, 2022, 10:11 AM IST

jackfruit

ಕಾರ್ಕಳ: ಹಲಸು ಹಣ್ಣು ಹಿತ್ತಲಿಗೆ ಸೀಮಿತವಾಗದೆ ತೋಟದ ಬೆಳೆಯಾಗಿ ವಿಸ್ತರಿಸಿ, ವಾಣಿಜ್ಯ ಬೆಳೆಯಾಗಿ ರೂಪುಗೊಂಡಲ್ಲಿ ಆರ್ಥಿಕತೆ ಸುಧಾರಿಸುವ ಹಲವು ಸಾಧ್ಯತೆಗಳನ್ನು ಹಲಸು ಹೊಂದಲಿದೆ. ಹಲಸನ್ನು ರಾಜ್ಯ ಹಣ್ಣಿನ ಬೆಳೆ ಮಾನ್ಯತೆ ದೊರಕಿಸುವ ಪ್ರಯತ್ನಕ್ಕೆ ಕಾರ್ಕಳದ ರಾಷ್ಟ್ರೀಯ ಹಲಸು ಮೇಳದ ಮೂಲಕ ಚಾಲನೆ ಸಿಗುವ ಸಂಭವವಿದೆ.

ಕಾರ್ಕಳದ ಸ್ಥಳೀಯ ಆಹಾರ ಉತ್ಪನ್ನ ಕಾರ್ಲ ಕಜೆ ಅಕ್ಕಿ, ಬಿಳಿಬೆಂಡೆ ಇವುಗಳನ್ನು ಬ್ರ್ಯಾಂಡ್‌ ಬೆಳೆಯನ್ನಾಗಿಸುವ ಪ್ರಯತ್ನ ಈ ಹಿಂದೆ ನಡೆದು ರಾಜ್ಯದ ಗಮನ ಸೆಳೆದಿತ್ತು. ಅದಕ್ಕೂ ಮುಂಚಿತ ಉಡುಪಿಯ ಮಟ್ಟುಗುಳ್ಳ ಬೆಳೆ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿದೆ. ಕರಾವಳಿ ಭಾಗದ ಹಣ್ಣು ಹಲಸು ವಿಚಾರದಲ್ಲಿ ಈಗ ಮತ್ತೂಮ್ಮೆ ರಾಜ್ಯದ ಗಮನ ಸೆಳೆಯಲು ಸಿದ್ಧವಾಗಿದೆ. ಸುಫ‌ಲ ರೈತ ಉತ್ಪಾದಕ ಕಂಪೆನಿ ಆಶ್ರಯದಲ್ಲಿ ನಿಟ್ಟೆಯಲ್ಲಿ ಅಟಲ್‌ ಇಂಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ, ಇಲ್ಲಿ 5 ಕೋ.ರೂ. ವೆಚ್ಚದಲ್ಲಿ ಹಲಸು ಸಂಸ್ಕರಣ ಕೇಂದ್ರ ನಿರ್ಮಿಸಲಾಗುತ್ತಿದೆ. ಘಟಕದ ಮೂಲಕ ಹಲಸಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

ಪ್ರಧಾನಿಗಳ ಲೋಕಲ್‌ ಫಾರ್‌ ವೋಕಲ್‌ ಆಶಯದಂತೆ ಹಲಸಿಗೆ ಪ್ರೋತ್ಸಾಹ ನೀಡಿ, ಸಂಶೋಧನೆಗೆ ಒಳಪಡಿಸಿ, ಆರ್ಥಿಕತೆ ಹೆಚ್ಚಳ, ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಾಯೋಗಿಕ ಪ್ರಯತ್ನಗಳು ಆರಂಭಗೊಂಡಿವೆ. ಪೂರ್ವಭಾವಿ ಯಾಗಿ ಮೇ 20ರಿಂದ 22ರ ತನಕ ರಾಷ್ಟ್ರೀಯ ಹಲಸು ಮೇಳ ನಿಟ್ಟೆಯಲ್ಲಿ ನಡೆಯುತ್ತಿದೆ.

ಸರ್ವ ಕಾಲ ಫ‌ನೀಡುವ ಸಾಮರ್ಥ್ಯ

ರಾಜ್ಯದ ರೈತರು ತೊಗರಿ, ರಾಗಿ, ಮತ್ತಿತರ ಧವಸ ಧಾನ್ಯಗಳನ್ನು ಬೆಳೆಯುವುದರ ಜತೆಗೆ ಹಲಸಿಗೂ ಮೌಲ್ಯ ತುಂಬುವ ಕಾರ್ಯ ವಿವಿಧ ಭಾಗಗಳಲ್ಲಿ ನಡೆದಿದೆ. ಹಲಸು ಲಾಭದಾಯಕ ಎನ್ನುವುದನ್ನು ದೊಡ್ಡಬಳ್ಳಾಪುರ, ತುಮಕೂರು ಇನ್ನಿತರ ಭಾಗಗಳ ಕೆಲವು ಕೃಷಿಕರು ಸಾಧಿಸಿ ತೋರಿಸಿದ್ದಾರೆ. ಹಲಸಿಗಾಗಿಯೇ ಸಂಘ ಕಟ್ಟಿಕೊಂಡು ಹಲಸು ಮಾರಾಟವನ್ನು ಗುರಿಯಾಗಿಸಿಕೊಂಡು ಅದರಲ್ಲಿ ಯಶಸ್ವಿಯಾಗಿದ್ದಾರೆ. ಕರಾವಳಿ ಭಾಗದಲ್ಲಿಯೂ ಇತ್ತೀಚೆಗೆ ಹಲಸಿನ ತೋಟಗಳು ಕಾಣಲಾರಂಭಿಸಿವೆ. ಸಾಮಾನ್ಯವಾಗಿ ಮಾರ್ಚ್‌ನಿಂದ ಜುಲೈ ತನಕ ರಾಜ್ಯದಲ್ಲಿ ಹಲಸಿನ ಸೀಸನ್‌ ಇರುತ್ತದೆ. ತುಮಕೂರು ಭಾಗದ ಕೆಲವು ಭಾಗದಲ್ಲಿ ಕೆಲವು ಮರಗಳು ಮಾತ್ರ ಸರ್ವ ಕಾಲ ಫ‌ಲ ನೀಡುವ ಸಾಮರ್ಥ್ಯ ಹೊಂದಿದೆ.

ಹಲಸು-ಮಾವಿಗೆ ಪ್ರಾತಿನಿಧ್ಯ ಸಿಗಲಿ

ರಾಜ್ಯದಲ್ಲಿ ಹಣ್ಣುಗಳು ಸರಕಾರದ ಸಹಾಯವೇ ಇಲ್ಲದೆ ಸೊರಗುತ್ತಿವೆ. ಮಾವು ಸೇರಿ ಇನ್ನಿತರ ತೋಟಗಾರಿಕಾ ಬೆಳೆಯಾಗಿ ಸಾಕಷ್ಟು ಪ್ರೋತ್ಸಾಹ ರಾಜ್ಯದಲ್ಲಿ ಇದ್ದರೂ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲ. ಮಾವು, ಹಲಸನ್ನು ರಾಜ್ಯದ ಹಣ್ಣಾಗಿ ಘೋಷಿಸಿದರೆ ಸಹಜವಾಗಿಯೇ ಮಾರುಕಟ್ಟೆ ವಿಸ್ತಾರಗೊಳ್ಳುತ್ತದೆ. ಸರಕಾರ ಈ ದಿಸೆಯಲ್ಲಿ ಯೋಚಿಸಬೇಕು ಎನ್ನುವುದು ಹಣ್ಣು ಬೆಳೆಗಾರರ ಅಭಿಪ್ರಾಯವಾಗಿದೆ.

ಹಲಸು ಬೆಳೆಗಾರರ ಸಂಘ ಶೀಘ್ರ ಅಸ್ತಿತ್ವಕ್ಕೆ

ಕರಾವಳಿ ಭಾಗದ ಅಲ್ಲಲ್ಲಿ ಹಲಸು ಮೇಳಗಳನ್ನು ಈ ಹಿಂದೆಯೂ ನಡೆಸಿಕೊಂಡು ಬರಲಾಗಿದೆ. ಜು. 4 ಅನ್ನು ಹಲಸು ದಿನ ಎಂದೇ ಆಚರಿಸ ಲಾಗುತ್ತಿದೆ. ಪುತ್ತೂರಿನ ಕೃಷಿಕ ಶ್ರೀಪಡ್ರೆಯವರು ಹಲಸು ಬೆಳೆ ಮತ್ತು ಹಲಸಿನಿಂದ ತಯಾರಾದ ಆಹಾರವನ್ನು ಜನಪ್ರಿಯಗೊಳಿಸಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.

ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರ, ತುಮಕೂರಿನ ಕೃಷಿ ವಿಶ್ವವಿದ್ಯಾಲಯಗಳು ಈ ನಿಟ್ಟಿನಲ್ಲಿ ಸಂಶೋಧನೆ, ಸಲಹೆ-ಸೂಚನೆಗಳನ್ನು ನೀಡುತ್ತಿವೆ. ನಿಟ್ಟೆಯಲ್ಲಿ ನಡೆಯುವ ರಾಷ್ಟ್ರೀಯ ಹಲಸು ಮೇಳದ ಬಳಿಕ ರಾಜ್ಯದಲ್ಲಿ ಹಲಸು ಬೆಳೆಗಾರರ ಸಂಘ ಸ್ಥಾಪಿಸಿ, ಹಲಸು ಕ್ಷೇತ್ರದಲ್ಲಿ ಮತ್ತಷ್ಟೂ ಪ್ರಗತಿ ಸಾಧಿಸುವ ಪ್ರಯತ್ನಗಳಿಗೆ ವೇದಿಕೆ ಒದಗಿಲಾಗುತ್ತಿದೆ.

ಔಷಧೀಯ ಗುಣ

ಜ್ಯೂಸ್‌, ಪಾಯಸ, ಇಡ್ಲಿ, ದೋಸೆ, ಗಟ್ಟಿ, ಪತ್ತೋಳಿ, ಮಾಂಬಳ, ಮುಳಕ, ಗೆಣಸಲೆ, ಬನ್ಸ್‌, ಶಿರಾ, ಹೋಳಿಗೆ, ಚಿಪ್ಸ್‌, ಹಪ್ಪಳ ಹೀಗೆ ಹಲವು ಬಗೆಯ ಖಾದ್ಯಗಳ ಪಟ್ಟಿಯಲ್ಲಿ ಹಲಸಿದೆ. ಬೀಜ ಕೂಡ ಪದಾರ್ಥ ಖಾದ್ಯ ತಯಾರಿಕೆ ಬಳಕೆಯಾಗುತ್ತಿದೆ. ಹಸಿವು ನೀಗಿಸುವ ಕಿಸೆ ತುಂಬಿಸುವ ಹಲಸು ಇಂದು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದುಕೊಂಡಿದೆ. ವಾಣಿಜ್ಯವಾಗಿ ಬೆಳೆದು ಕೈ ತುಂಬ ಗಳಿಸುತ್ತಿದ್ದಾರೆ. ಹಲಸಿನ ಎಲೆ, ಎಳೆ ಹಲಸಿನಕಾಯಿ (ಗುಜ್ಜೆ), ಹಣ್ಣು, ಬೀಜ ಹೀಗೆ ಎಲ್ಲದರಲ್ಲೂ ಒಂದೊಂದು ಔಷಧ ಗುಣವಿದೆ. ಹೃದ್ರೋಗ, ಮಧುಮೇಹ, ಕ್ಯಾನ್ಸರ್‌ ಮೊದಲಾದ ರೋಗಗಳಿಗೂ ತಡೆಗಟ್ಟುವ ಶಕ್ತಿ ಇದೆ. ಈ ಬಗ್ಗೆ ಒಂದಷ್ಟು ಸಂಶೋಧನೆಗಳು ನಡೆಯುತ್ತಿವೆ.

ಪರಿಶೀಲನೆ

ರಾಜ್ಯದಲ್ಲಿ ಹಲವು ವಿಧಧ ಹಣ್ಣುಗಳನ್ನು ಬೆಳೆಯಲಾಗುತ್ತದೆ. ಅವುಗಳ ಪೈಕಿ ಹಲಸು ಒಂದು ಚೌಕಟ್ಟಿನೊಳಗೆ, ಸೀಮಿತವಾಗಿ ಬೆಳೆಯುವ ಬೆಳೆ. ಹಲಸು ಹಣ್ಣನ್ನು ರಾಜ್ಯ ಹಣ್ಣಾಗಿ ಘೋಷಣೆ ಬಗ್ಗೆ ಪ್ರಸ್ತಾವನೆಗಳು ಬಂದಲ್ಲಿ ಈ ಬಗ್ಗೆ ಪರಿಶೀಲಿಸಬಹುದು. ಕೆ.ಬಿ. ದುಂಡಿ, ತೋಟಗಾರಿಕ ಅಪರ ನಿರ್ದೇಶಕರು, ಹಣ್ಣುಗಳು ಮತ್ತು ಪುಷ್ಪಾಭಿವೃದ್ಧಿ ಲಾಲ್‌ಬಾಲ್‌ ಬೆಂಗಳೂರು

ಪ್ರೋತ್ಸಾಹ ಅಗತ್ಯ

ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕೆನ್ನುವುದು ಪ್ರಧಾನಿಯವರ ಆಶಯ. ಕಾರ್ಕಳದ ಎರಡು ಆಹಾರ ಬೆಳೆಯನ್ನು ಬ್ರ್ಯಾಂಡ್‌ ಬೆಳೆಯನ್ನಾಗಿಸುವ ಪ್ರಯತ್ನ ಈಗಾಗಲೇ ನಡೆದಿದೆ. ಕರಾವಳಿಯ ಹಲಸಿಗೂ ಪ್ರೋತ್ಸಾಹ, ಬೆಂಬಲ ನೀಡಲಾಗುವುದು. ವಿ.ಸುನಿಲ್‌ ಕುಮಾರ್‌, ಸಚಿವರು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.