ರಾಜ್ಯಮಟ್ಟದ ರ್‍ಯಾಂಕಿಂಗ್‌: ಉಡುಪಿ ನಗರಸಭೆ ಕುಸಿತ


Team Udayavani, Mar 12, 2019, 1:00 AM IST

rajya-mattada-ranking.jpg

ಉಡುಪಿ: ಕೇಂದ್ರ ಸರಕಾರದ ಸ್ವತ್ಛ ಭಾರತ ಅಭಿಯಾನದಲ್ಲಿ ನಡೆದ ಸ್ವತ್ಛ ಸರ್ವೇಕ್ಷಣಾ ಸಮೀಕ್ಷೆಯ ರಾಷ್ಟ್ರ ಹಾಗೂ ರಾಜ್ಯಮಟ್ಟದ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಉಡುಪಿ ನಗರ ವಿಫ‌ಲವಾಗಿದೆ.

ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳಿಂದ ಸ್ವತ್ಛ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಈ ಬಾರಿಯ ಸ್ವತ್ಛ ಸರ್ವೇಕ್ಷಣಾ ಸಮೀಕ್ಷೆಯ ರಾಷ್ಟ್ರ ಮಟ್ಟದ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಉಡುಪಿ ನಗರ 198ಸ್ಥಾನದಿಂದ 254 ಸ್ಥಾನಕ್ಕೆ ಕುಸಿತ ಕಂಡಿದೆ. ರಾಜ್ಯ ಮಟ್ಟದಲ್ಲಿ 5ನೇ ಸ್ಥಾನದಿಂದ 8ಸ್ಥಾನಕ್ಕೆ ಕುಸಿದಿದೆ.

ರಾಜ್ಯಮಟ್ಟದಲ್ಲಿ ರ್‍ಯಾಂಕಿಂಗ್‌ ಕುಸಿತ
ಕಳೆದ ಬಾರಿ ಸ್ವತ್ಛ ಸರ್ವೇಕ್ಷಣಾದಲ್ಲಿ ಕೇವಲ 471 ನಗರ ಇದ್ದು, ಈ ಬಾರಿ ಅದನ್ನು 4,022 ನಗರಗಳಿಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ಮಟ್ಟದಲ್ಲಿ ರ್‍ಯಾಂಕಿಂಗ್‌ ಕುಸಿಯುವುದು ಸಹಜ. ಆದರೆ ರಾಜ್ಯಮಟ್ಟದಲ್ಲಿಯೂ ಅಗ್ರಸ್ಥಾನ ಕಾಯ್ದು ಕೊಳ್ಳುವಲ್ಲಿ ಉಡುಪಿ ನಗರ ಸೋತು ಹೋಗಿದೆ.

ಸ್ವತ್ಛತೆ ಆಧಾರದ ಮೇಲೆ ರ್‍ಯಾಂಕಿಂಗ್‌
ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಆಯಾ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಸ್ವತ್ಛತೆ ಪರಿಶೀಲನೆ ನಡೆಸುತ್ತಾರೆ. ಈ ಸಂದರ್ಭದಲ್ಲಿ ಮಾರುಕಟ್ಟೆ ಪ್ರದೇಶದ, ಸಾರ್ವಜನಿಕ ಸ್ಥಳ ಸ್ವತ್ಛತೆ, ಸಾರ್ವಜನಿಕ ಶೌಚಾಲಯದ ಸ್ಥಿತಿಗತಿ, ತ್ಯಾಜ್ಯ ವಿಲೇವಾರಿ, ಗಟಾರ, ಒಳಚರಂಡಿ ವ್ಯವಸ್ಥೆ, ಕಸ ಸಂಗ್ರಹಣೆ ವ್ಯವಸ್ಥೆಯನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಸಮೀಕ್ಷೆ, ನೇರ ಭೇಟಿಯ ಜತೆಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.

ಸಿಬಂದಿ ಕೊರತೆ ರ್‍ಯಾಂಕಿಂಗ್‌ ಕುಸಿತಕ್ಕೆ ಕಾರಣವೇ?
ಉಡುಪಿ ನಗರಸಭೆಯಲ್ಲಿ ಸಿಬಂದಿಗಳ ಕೊರತೆಯಿಂದ ರಾಜ್ಯ ಮಟ್ಟದಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳಲು ಅಸಫ‌ಲರಾದರೇ ಎನ್ನುವ ಅನುಮಾನ ಕಾಡುತ್ತಿದೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 156 ಪೌರಕಾರ್ಮಿಕರ ಹುದ್ದೆ ಖಾಲಿಯಿದ್ದು, ಅದರಲ್ಲಿ ದಿನಕೂಲಿ ಆಧಾರದ ಮೇಲೆ ಸುಮಾರು 118 ಸಿಬಂದಿಗಳನ್ನು ಪೌರಕಾರ್ಮಿಕ ಹುದ್ದೆಗೆ ನೇಮಿಸಿಕೊಂಡು ನಿರ್ವಹಿಸಲಾಗುತ್ತಿದೆ. ಈ ಸಿಬಂದಿಗಳು ಇತ್ತೀಚಿಗೆ ವಾರ್ಡ್‌ಗಳಲ್ಲಿ ವಾರಕ್ಕೊಮ್ಮೆ ಕಾಣ ಸಿಗುವುದೆ ಅಪರೂಪ. ಚುನಾವಣೆ ಮುಗಿದು ಕೆಲವು ತಿಂಗಳು ಕಳೆದರೂ ಆಯ್ಕೆಯಾದ ಜನಪ್ರತಿನಿಧಿಗಳಿನ್ನೂ ಅಧಿಕಾರ ಸ್ವೀಕರಿಸದಿರುವುದೂ ಅವ್ಯವಸ್ಥೆಗೆ ಇನ್ನೊಂದು ಕಾರಣವೆನ್ನಲಾಗಿದೆ. ಇವೆಲ್ಲ ಕಾರಣಗಳು ಸೇರಿ ಸ್ವತ್ಛ ಸರ್ವೇಕ್ಷಣಾ ಸಮೀಕ್ಷೆಯ ರಾಜ್ಯಮಟ್ಟದ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಉಡುಪಿ ನಗರ ಅಗ್ರಸ್ಥಾನ ಪಡೆದುಕೊಳ್ಳುವಲ್ಲಿ ವಿಫ‌ಲವಾಗಿದೆ ಎನ್ನಲಾಗುತ್ತಿದೆ. 

ಸಾರ್ವಜನಿಕರ ಅಭಿಪ್ರಾಯವೂ ಕಾರಣ?
ಸಾರ್ವಜನಿಕರು ಸ್ವತ್ಛತೆಯ ಬಗ್ಗೆ ನೀಡುವ ಋಣಾತ್ಮಕ ಹೇಳಿಕೆಗಳು ಸಹ ರ್‍ಯಾಂಕಿಂಗ್‌ ನಿರ್ಧರಿಸಲಿದೆ. ಸರ್ವೇಕ್ಷಣಾ ತಂಡಗಳು ಕೇವಲ ಅಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸದೆ ಸಾರ್ವಜನಿಕರಿಂದಲೂ ಮಾಹಿತಿ ಪಡೆಯುವ ಕಾರಣ ಅಲ್ಲೊಂದಿಷ್ಟು ವಾಸ್ತವಾಂಶ ಬೆಳಕು ಕಾಣುತ್ತದೆ. ಸ್ವತ್ಛತೆ ಬಗ್ಗೆ ನಗರಾಡಳಿತ ನಿರ್ಲಕ್ಷ ವಹಿಸಿದರೆ ಸಾರ್ವಜನಿಕರ ಮಾಹಿತಿಯಿಂದಲೂ ವಾಸ್ತವ ಗೋಚರವಾಗುತ್ತದೆ.

ಎಲ್ಲ ವಿಭಾಗಗಳಲ್ಲೂ ಉತ್ತಮ ನಿರ್ವಹಣೆ ಅಗತ್ಯ
ನಗರ ಸ್ವತ್ಛತೆಗೆ ಸಂಬಂಧಿಸಿದಂತೆ ವಾಹನಗಳು, ಪರಿಕರಗಳು ಹಾಗೂ ಮೂಲ ಸೌಕರ್ಯಗಳ ಅಗತ್ಯವಿದೆ. ಎಲ್ಲ ವಿಭಾಗಗಳಲ್ಲೂ ಉತ್ತಮ ನಿರ್ವಹಣೆ ಇದ್ದರೆ ಮಾತ್ರ  ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಬಹುದು.
-ರಾಫ‌ವೇಂದ್ರ, ಪರಿಸರ ಎಂಜಿನಿಯರ್‌, ನಗರಸಭೆ ಉಡುಪಿ 

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.