ಗುರಿಯಲ್ಲ, ಜೀವನಪಥವೇ ಖುಷಿಕರ: ಕೃಪಾಕರ,ಸೇನಾನಿ


Team Udayavani, Aug 31, 2019, 5:09 AM IST

IMG_20190830_111943

ಉಡುಪಿ: ಗುರಿಯನ್ನು ಸಾಗುವ ಜೀವನಪಥವೇ ಖುಷಿಕರ ಎಂದು ವನ್ಯಜೀವಿ ತಜ್ಞರಾದ ಕೃಪಾಕರ ಮತ್ತು ಸೇನಾನಿ ಅಭಿಪ್ರಾಯಪಟ್ಟರು. ಅವರು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಅರಣ್ಯ ಇಲಾಖೆ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ವನ್ಯಜೀವಿ ಪತ್ರಿಕೋದ್ಯಮ ಮತ್ತು ಅರಣ್ಯ ಸಂರಕ್ಷಣೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಪತ್ರಕರ್ತರಾದವರು ತಜ್ಞರಾಗಿ ಬರೆದಾಗ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ತಪ್ಪು ಬರೆದರೆ ತಪ್ಪು ಮಾಹಿತಿ ರವಾನೆಯಾಗುತ್ತದೆ ಎಂದು ಕಿವಿಮಾತು ನುಡಿದರು.
ವಿಷಯ ತಜ್ಞತೆಯ ವರದಿಗಾರರು ಒಂದು ಸ್ಟೋರಿ ಬರೆಯಲು ವರ್ಷ ತೆಗೆದುಕೊಳ್ಳುವುದಿದೆ. ಬಿಬಿಸಿ ವರದಿಗಾರನೊಬ್ಬ ಮೈಸೂರಿನ ಅರಣ್ಯ ಪ್ರದೇಶದಲ್ಲಿ ಒಂದು ತಿಂಗಳು ಬೆಳಗ್ಗೆ 4.30ಕ್ಕೆ ಹೊರಗೆ ಹೋದವ ರಾತ್ರಿ 9 ಗಂಟೆಗೆ ಬರುತ್ತಿದ್ದ. ಈತ ಹತ್ತು ಪುಟಗಳ ಸ್ಟೋರಿಗೆ ಎರಡು ವರ್ಷ ತೆಗೆದುಕೊಂಡಿದ್ದ. ಇವರೊಂದಿಗೆ ಇರುವ ಛಾಯಾಚಿತ್ರಗ್ರಾಹಕನೂ ಇವನೊಂದಿಗೇ ಇರುತ್ತಿದ್ದ. ಇಂತಹ ಪತ್ರಿಕೋದ್ಯಮ ಇಲ್ಲಿ ಕಂಡುಬರುತ್ತದೆಯೆ ಎಂದು ಪ್ರಶ್ನಿಸಿದರು.

ಒಂದು ಬೃಹತ್‌ ಹಿರಿಯ ಮರದ ಹಿಂದೆ ದೊಡ್ಡ ಇತಿಹಾಸವಿರುತ್ತದೆ. ಮಾನವರೂ ವಿಶ್ವದ ಒಂದು ಜೀವ ಜಾಲಗಳಲ್ಲಿ ಒಂದು ಜೀವಿ. ಪರಿಸರಕ್ಕೆ ಹಾನಿ ಮಾಡಿದರೆ ಅದಕ್ಕೇನೂ ಆಗುವುದಿಲ್ಲ. ಅದು ನಿಮ್ಮಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಭೂಮಿಗೆ ಏನಾಗಬೇಕಾಗಿದೆ? ಲಕ್ಷಾಂತರ ಜೀವಿಗಳು ಬಂದು ಹೋಗುತ್ತಿವೆ. ಕೇರಳದಲ್ಲಿ ಆದ ಅನಾಹುತದಿಂದ ಪರಿಸರಕ್ಕೆ ಏನೋ ಎಡವಟ್ಟು ಆಗುತ್ತಿದೆ ಎಂದು ಅರಿವಾಗುತ್ತಿದೆ. ನಾವು ಭೂಮಿಯ ಒಂದು ಜೀವಿ ಎಂದು ತಿಳಿವಳಿಕೆ ಬಂದರೆ ಸಾಕು ಎಂದರು.

ಆನೆಗಳಲ್ಲಿಯೂ ಗಂಡು, ಹೆಣ್ಣಿನ ನೈಸರ್ಗಿಕ ಭಿನ್ನ ವರ್ತನೆ
ಗಂಡು ಆನೆ ಮರಿ ಪುಂಡಾಟಿಕೆ ಮಾಡುತ್ತಲೇ ಇರುತ್ತದೆ. ಹೆಣ್ಣು ಆನೆ ಮರಿ ಎರಡು ವರ್ಷವಾಗುತ್ತಲೇ ತಾಯಿಯ ಚಿಕ್ಕ ಮರಿಗಳನ್ನು ಸಾಕಲು ಬೇಕಾದ ಸಹಾಯ ಮಾಡುತ್ತಿರುತ್ತದೆ. ಹೆಣ್ಣು ಆನೆಗಳಲ್ಲಿ ಅಜ್ಜಿ, ಮಗಳು, ಮೊಮ್ಮಗಳು ಇರುವ 60ರಿಂದ 100 ಆನೆಗಳ ಸಮೂಹ ಇರುತ್ತದೆ. ಗಂಡು ಆನೆ ಮರಿ ತಾಯಿಯಿಂದ ಬೇರೆಯಾಗಿ ಪುಂಡಾಟಿಕೆ ಮಾಡಿಕೊಂಡು ಒಂಟಿಯಾಗಿರುವ ದೊಡ್ಡ ಗಂಡು ಆನೆಯತ್ತ ಹೋಗುವಾಗ ಅದು ಸ್ವೀಕರಿಸುವುದಿಲ್ಲ. ಅಲ್ಲಿ ಚಮಚಾಗಿರಿ ಮಾಡಿ ಹತ್ತಿರ ಆಗುತ್ತದೆ. ಇವೆಲ್ಲ ಸಮೂಹಗಳಿಗೆ ವರ್ಷದ ಸಂಚಾರದಲ್ಲಿ ಎಲ್ಲಿ ಆಹಾರ ಸಿಗುತ್ತದೆ, ಎಲ್ಲಿ ಯಾವಾಗ ನದಿ ದಾಟಲು ಕಷ್ಟವಾಗುತ್ತದೆ ಎಂಬಿತ್ಯಾದಿ ಜ್ಞಾನಗಳು ಸಂತತಿಯಿಂದ ಸಂತತಿಗೆ ವರ್ಗಾವಣೆಯಾಗಿರುತ್ತದೆ. 1985ರಿಂದ 95ರವರೆಗೆ ದೊಡ್ಡ ಪ್ರಮಾಣದಲ್ಲಿ ದಂತದ ಆಸೆಗಾಗಿ ಗಂಡು ಆನೆಗಳನ್ನು ಕೊಲ್ಲಲಾಯಿತು. ಇದರಿಂದಾಗಿ ಹತ್ತು ವರ್ಷಗಳ ಗಂಡು ಆನೆಗಳ ಅನುಭವ ನಷ್ಟವಾಯಿತು. ಚಿಕ್ಕ ಆನೆಗಳಿಗೆ ಎಲ್ಲಿ ಹೋಗಬೇಕು? ಎಲ್ಲಿ ಆಹಾರ ಸಿಗುತ್ತದೆ? ಎಲ್ಲಿ ಹೋದರೆ ಅಪಾಯವಿರುತ್ತದೆ ಎಂಬ ಜ್ಞಾನ ಸಿಗದೆ ಪರದಾಡುವಂತಾಯಿತು ಎಂದು ಸೇನಾನಿ ಹೇಳಿದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.