ಅಂಧ ಯುವತಿ ಹಚ್ಚಿದ ಯುವ ಜನೋತ್ಸವ ದೀಪ


Team Udayavani, Dec 1, 2017, 9:42 AM IST

01-13.jpg

ಉಡುಪಿ: ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಇಲಾಖೆ, ರಾಜ್ಯ ಮತ್ತು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಆಶ್ರಯದಲ್ಲಿ  ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆರಂಭಗೊಂಡ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಇಲಾಖಾ ಸಚಿವ ಪ್ರಮೋದ್‌ ಮಧ್ವರಾಜ್‌ ದೀಪ ಬೆಳಗಿಸಿ ಉದ್ಘಾಟಿಸಿದ ಸಂದರ್ಭ ವಿಜಯಪುರದ ಅಂಧ ಯುವತಿ ಕೃತ್ತಿಕಾ ಜಂಗಿನಮಠ ಅವರು ಡಿ.ಎಸ್‌. ಕರ್ಕಿ ಅವರ “ಹಚ್ಚುವೆವು ಕನ್ನಡದ ದೀಪ…’ ಭಾವಗೀತೆಯನ್ನು ವೇಣುವಾದನದಲ್ಲಿ ನುಡಿಸಿ ಸಚಿವರೂ ಸೇರಿದಂತೆ ಸರ್ವರ ಮೆಚ್ಚುಗೆಗೆ ಪಾತ್ರರಾದರು.

ಕೌಶಲಾಭಿವೃದ್ಧಿಗೂ ಒತ್ತು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವ ಜನೋತ್ಸವ, ಯುವ ಜನ ಮೇಳವಲ್ಲದೆ ಕೌಶಲ್ಯಾಭಿವೃದ್ಧಿಗೂ ಒತ್ತು ನೀಡುತ್ತಿದೆ. ಯುವ ಸಬಲೀಕರಣ ಇಲಾಖೆಗೆ ಪ್ರತ್ಯೇಕವಾಗಿ 15 ಕೋ.ರೂ. ಅನುದಾನವನ್ನು ಮುಖ್ಯಮಂತ್ರಿಗಳು ಕೌಶಲಾಭಿವೃದ್ಧಿಗಾಗಿ ಮೀಸಲಿಟ್ಟಿದ್ದಾರೆಂದು ಸಚಿವರು ತಿಳಿಸಿದರು. 

ಪ್ರತಿಭಾ ಪ್ರದರ್ಶನ ಅಗತ್ಯ
ಹಿಂದೆ ಯುವ ಜನ ಮೇಳ, ಯುವಜನೋತ್ಸವವೆಂದರೆ ಊರಿನಲ್ಲಿ ಹಬ್ಬದ ವಾತಾವರಣವಿತ್ತು. ಈಗ ಯುವಕರು ವಾಟ್ಸಪ್‌, ಫೇಸ್‌ಬುಕ್‌ನಲ್ಲಿ ಮುಳುಗುತ್ತಿದ್ದಾರೆ. ವೇದಿಕೆ ಮೇಲೇರಿ ಪ್ರತಿಭೆಯನ್ನು ಪ್ರದರ್ಶಿಸುವ ಬದಲು ಕೋಣೆಯೊಳಗೆ ಸೇರುವ ಪ್ರವೃತ್ತಿ ಹೆಚ್ಚುತ್ತಿದೆ. ಈ ಸ್ಥಿತಿಯಿಂದ ಮತ್ತೆ ಹಿಂದಕ್ಕೆ ಬರಬೇಕು. ಜನರೊಂದಿಗೆ ಬೆರೆಯುವ ಮನೋಭಾವನೆಯನ್ನು ಬೆಳೆಸಿ ಭಾÅತೃತ್ವ, ಮಿತ್ರತ್ವ, ಒಗ್ಗಟ್ಟಿನ ಜೀವನಕ್ಕೆ ನಾಂದಿ ಹಾಡಬೇಕು ಎಂದು ಸಚಿವರು ಕರೆ ನೀಡಿದರು. 

ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನರಸಿಂಹಮೂರ್ತಿ, ರಾಜ್ಯ ಒಕ್ಕೂಟದ ಅಧ್ಯಕ್ಷ ಬಾಲಾಜಿ, ಜಿಲ್ಲಾ ಸಂಘದ ಮನೋಹರ ಕುಂದರ್‌, ಎಸ್‌ಪಿ ಡಾ| ಸಂಜೀವ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಅನುರಾಧಾ, ಅಜ್ಜರಕಾಡು ಮಹಿಳಾ ಕಾಲೇಜಿನ ಪ್ರಾಂಶುಪಾಲ ಜಗದೀಶ ರಾವ್‌, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಯುವಜನ ಸಬಲೀಕರಣ ಇಲಾಖೆ ಜಂಟಿ ನಿರ್ದೇಶಕ ಅಭಿಜಿನ್‌, ಉಪನಿರ್ದೇಶಕ ರಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರ್ವಹಿಸಿ ಪ್ರಕಾಶ್‌ ಕ್ರಮಧಾರಿ ವಂದಿಸಿದರು. 

ಚೌರಾಶಿಯಾ ಶಿಷ್ಯೆಗೆ ಶಹಬ್ಟಾಸ್‌ಗಿರಿ
ಮೂಲತಃ ವಿಜಯಪುರದವರಾದ ಕೃತ್ತಿಕಾ ಅವರು ಪ್ರಸ್ತುತ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಮ್ಯೂಸಿಕ್‌ ಎರಡನೇ ವರ್ಷದಲ್ಲಿ ಓದುತ್ತಿದ್ದಾರೆ. ಹಿಂದೂಸ್ತಾನೀ ಗಾಯನ ಮತ್ತು ವೇಣುವಾದನದಲ್ಲಿ ಪ್ರಾವೀಣ್ಯ ಪಡೆದಿರುವ ಕೃತ್ತಿಕಾ 2016ರಲ್ಲಿ  ಆಕಾಶವಾಣಿ ಏರ್ಪಡಿಸಿದ ಅ.ಭಾ. ಮಟ್ಟದ ಸ್ಪರ್ಧೆಯಲ್ಲಿ ದೇಶಕ್ಕೆ ಪ್ರಥಮ, 2010ರಲ್ಲಿ ರಾಜ್ಯದ ಬಾಲಕಲಾಶ್ರೀ ಪ್ರಶಸ್ತಿ ಪಡೆದಿದ್ದಾರೆ. ಪ್ರಸಿದ್ಧ ವೇಣುವಾದಕ ಪಂ| ಹರಿಪ್ರಸಾದ್‌ ಚೌರಾಸಿಯಾ ಅವರ ಶಿಷ್ಯೆ. ವಿಜಯಪುರದ ಭಾರತೀಯ ಆಹಾರ ನಿಗಮದ ಉದ್ಯೋಗಿ ವೀರೇಶ್ವರ, ತಾಯಿ ಪದ್ಮಾವತಿಯವರ ಪುತ್ರಿ ಕೃತ್ತಿಕಾ ಸೋದರ, ಕಾರ್ತಿಕೇಯ ತಬ್ಲಾ ಕಲಾವಿದ, ಕಂಪ್ಯೂಟರ್‌ ವಿಜ್ಞಾನ ಡಿಪ್ಲೊಮಾ ವಿದ್ಯಾರ್ಥಿ. ವೇಣು ವಾದನಕ್ಕೆ ಸಚಿವರು ಮೆಚ್ಚಿ ಸ್ಮರಣಿಕೆ ನೀಡಿದರು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.