ಪಡಿತರ ಪಡೆಯಲು ಪಡಿಪಾಟಲು

ರಾಜ್ಯ ವ್ಯಾಪಿ ಸರ್ವರ್‌ ಸಮಸ್ಯೆ ದಿನವಿಡೀ ಕಾದು ಸುಸ್ತಾದ ಜನ, ವ್ಯವಸ್ಥೆಗೆ ಹಿಡಿಶಾಪ

Team Udayavani, Jan 24, 2020, 7:03 AM IST

kaa-48

ಕೋಟ: ರಾಜ್ಯಾದ್ಯಂತ ಪಡಿತರ ವಿತರಣೆ ಸರ್ವರ್‌ನಲ್ಲಿ ದೋಷ ಹಲವು ದಿನಗಳಿಂದ ಮುಂದುವರಿದಿದ್ದು, ಫಲಾನುಭವಿಗಳಿಗೆ ಸಕಾಲದಲ್ಲಿ ಆಹಾರ ಸಾಮಗ್ರಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲಸಕ್ಕೆ ರಜೆ ಹಾಕಿ ದಿನವಿಡೀ ಅಂಗಡಿ ಮುಂದೆ ಕಾದು ಸುಸ್ತಾಗುವ ಜನರು ಸಿಬಂದಿ ಮತ್ತು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹೊಸ ವ್ಯವಸ್ಥೆಯಲ್ಲಿ ಜಾರಿಯಾದ ಮೇಲೆ ಪಡಿತರ ಚೀಟಿಯಲ್ಲಿ ಹೆಸರಿರುವ ಸದಸ್ಯರು ಬೆರಳಚ್ಚು ನೀಡಿದರಷ್ಟೇ ಆಹಾರ ಧಾನ್ಯ ಪಡೆಯಬಹುದಾಗಿದೆ. ಆದರೆ ಸರ್ವರ್‌ ಸಮಸ್ಯೆಯಿಂದ ಬೆರಳಚ್ಚು ದಾಖಲಾಗುತ್ತಿಲ್ಲ. ಜತೆಗೆ ಈಗ ಮಾಸಾಂತ್ಯ ಸಮೀಪಿಸಿರುವುದರಿಂದ ಕೆಲವೇ ದಿನಗಳಲ್ಲಿ ಪಡಿತರ ವಿತರಣೆ ಸ್ಥಗಿತಗೊಳ್ಳಲಿದೆ. ಹೀಗಾಗಿ ಪಡಿತರ ಕೈತಪ್ಪಲಿದೆ ಎನ್ನುವ ಭಯದಿಂದ ಜನರು ಅಂಗಡಿ ಮುಂದೆ ಸಾಲುಗಟ್ಟುತ್ತಿದ್ದಾರೆ. ಸರ್ವರ್‌ ಸಮಸ್ಯೆಯಿಂದ ಜನದಟ್ಟಣೆ ಹೆಚ್ಚಿದೆ.

ಬೆಳಗ್ಗಿನಿಂದ ಸಂಜೆಯ ವರೆಗೆ ಕಾದರೂ ಪಡಿತರ ಸಿಗದೆ ಫಲಾನುಭವಿಗಳು ಸಿಬಂದಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರ್ವರ್‌ ಸಮಸ್ಯೆಯಿಂದ ವಿಳಂಬ ಆಗುತ್ತಿದೆ ಎಂದರೂ ಕೇಳುತ್ತಿಲ್ಲ. ಪ್ರತಿದಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುವುದು ಸಿಬಂದಿಯ ಪಾಡಾಗಿದೆ. ರಾಜ್ಯ ಮಟ್ಟದ ಸಮಸ್ಯೆಯಾದ್ದರಿಂದ ಅಧಿಕಾರಿಗಳೂ ಅಸಹಾಯಕರಾಗಿದ್ದಾರೆ.

ಕೆವೈಸಿಯಿಂದ ಸಮಸ್ಯೆ?
ಅಕ್ರಮ ಪಡಿತರ ಕಾರ್ಡ್‌ ಪತ್ತೆ ಹಚ್ಚುವುದಕ್ಕಾಗಿ ಎಲ್ಲ ಪಡಿತರ ಕಾರ್ಡ್‌ದಾರರು ಕಡ್ಡಾಯವಾಗಿ ಬೆರಳಚ್ಚು ದಾಖಲಿಸುವ (ಕೆವೈಸಿ) ಪ್ರಕ್ರಿಯೆ ನಡೆಯುತ್ತಿದೆ. ಆದರೆ ಇದಕ್ಕೆ ಪ್ರತ್ಯೇಕ ಸರ್ವರ್‌ ವ್ಯವಸ್ಥೆ ಕಲ್ಪಿಸದಿರುವುದರಿಂದ ಒಂದೇ ಸರ್ವರ್‌ನಲ್ಲಿ ಅದು ದಾಖಲಾಗುತ್ತಿದೆ. ಲಕ್ಷಾಂತರ ಪಡಿತರದಾರರು ಬೆರಳಚ್ಚು ದಾಖಲಿಸಲು ಮುಗಿಬಿದ್ದು ಸರ್ವರ್‌ ಹ್ಯಾಂಗ್‌ ಆಗಿತ್ತು. ಪಡಿತರಕ್ಕೆ ಸಮಸ್ಯೆಯಾಗುತ್ತದೆ ಎನ್ನುವುದರಿಂದ ಕೆವೈಸಿ ನೋಂದಣಿ ಸ್ಥಗಿತಗೊಳಿಸಲು ಇಲಾಖೆ ಕ್ರಮ ಕೈಗೊಂಡಿದೆ. ಆದರೂ ಸರ್ವರ್‌ ದೋಷ ಬಗೆಹರಿದಿಲ್ಲ.

ಕೆಲಸಕ್ಕೆ ರಜೆ ಹಾಕಿ 2-3 ದಿನಗಳಿಂದ ಪಡಿತರ ಅಂಗಡಿಗೆ ಭೇಟಿ ನೀಡುತ್ತಿದ್ದೇವೆ. ಅತ್ತ ಕೆಲಸವೂ ಇಲ್ಲ, ಇತ್ತ ಪಡಿತರವೂ ಇಲ್ಲ ಎನ್ನುವಂತಾಗಿದೆ. ಕೆವೈಸಿ ತೆಗೆದುಕೊಳ್ಳುವುದಕ್ಕೆ ಹಿಂದೆ ಈ ಸಮಸ್ಯೆ ಇರಲಿಲ್ಲ. ತಂತ್ರಜ್ಞಾನ ಜಾಸ್ತಿಯಾದಂತೆ ಸಮಸ್ಯೆಯೂ ಜಾಸ್ತಿ. ಸಮಸ್ಯೆ ಸರಿಯಾಗದಿದ್ದರೆ ಈ ತಿಂಗಳ ಪಡಿತರ ಮುಂದಿನ ತಿಂಗಳು ಸಿಗುವ ಹಾಗೆ ವ್ಯವಸ್ಥೆ ಮಾಡಬೇಕು.
– ಗುಲಾಬಿ ಕೋಟ, ಪಡಿತರ ಫಲಾನುಭವಿ

ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಆದರೆ ರಾಜ್ಯ ಮಟ್ಟದಲ್ಲೇ ಸಮಸ್ಯೆ ಇರುವುದರಿಂದ ಪರಿಹಾರ ಅಸಾಧ್ಯವಾಗಿದೆ. ಪಡಿತರಕ್ಕೆ ಸಮಸ್ಯೆಯಾಗಬಾರದು
ಎನ್ನುವ ನಿಟ್ಟಿನಲ್ಲಿ ಕೆವೈಸಿ ನೋಂದಣಿ ಸ್ಥಗಿತಗೊಳಿಸಿದ್ದೇವೆ. ಸರ್ವರ್‌ ದುರಸ್ತಿ ಕಾರ್ಯ ಚಾಲನೆಯಲ್ಲಿದೆ. ಇದರಿಂದಾಗಿ ಪಡಿತರ ವಂಚಿತರಾದವರಿಗೆ ಮುಂದಿನ ತಿಂಗಳು ಹೆಚ್ಚುವರಿ ವಿತರಿಸಲು ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.
– ಬಿ.ಕೆ ಕುಸುಮಾಧರ, ಉಪ ನಿರ್ದೇಶಕ (ಪ್ರಭಾರ), ಆಹಾರ ಇಲಾಖೆ, ಉಡುಪಿ

– ರಾಜೇಶ ಗಾಣಿಗ ಅಚ್ಲಾಡಿ,

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.