ಸಾರ್ವಜನಿಕ ಸ್ಥಳದಲ್ಲಿ ಗಬ್ಬು ನಾರುತ್ತಿದೆ ತ್ಯಾಜ್ಯಗಳ ರಾಶಿ
Team Udayavani, Apr 5, 2019, 6:15 AM IST
ತೆಕ್ಕಟ್ಟೆ : ತೆಕ್ಕಟ್ಟೆ ರಾ.ಹೆ.66 ಪೆಟ್ರೋಲ್ ಬಂಕ್ ಎದುರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವ ಪರಿಣಾಮ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಗ್ರಾ.ಪಂ.ಗೆ ಸವಾಲಾಗಿ ಪರಿಣಮಿಸಿದ ತ್ಯಾಜ್ಯ ವಿಲೇವಾರಿ !ಕಳೆದ ಹಲವು ದಿನಗಳಿಂದಲೂ ಹೋಟೆಲ್, ಇನ್ನಿತರ ತ್ಯಾಜ್ಯಗಳನ್ನು ರಸ್ತೆಯ ಇಕ್ಕೆಲದಲ್ಲಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಪರಿಣಾಮ ಈ ಭಾಗದಲ್ಲಿ ಬೀದಿ ನಾಯಿಗಳ ಸಂಖ್ಯೆ ಕೂಡಾ ಅಧಿಕವಾಗಿದ್ದು , ಪರಿಸರ ಗಬ್ಬುನಾರುತ್ತಿದೆ . ಪ್ರಸ್ತುತ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸ್ಥಳೀಯಾಡಳಿತ ತತ್ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.