ಮಹಿಳಾ ಸಬಲೀಕರಣಕ್ಕೆ ಹೊಲಿಗೆ ವೃತ್ತಿ ಸಹಕಾರಿ : ಕೆ. ಎಂ. ಉಡುಪ
Team Udayavani, Jul 4, 2017, 3:45 AM IST
ಉಡುಪಿ: ಮಹಿಳಾ ಸಬಲೀಕರಣಕ್ಕೆ ಹೊಲಿಗೆ ವೃತ್ತಿ ತುಂಬ ಸಹಕಾರಿ. ಮನೆಯಲ್ಲೇ ಇದ್ದು ಹೊಲಿಗೆ, ಕಸೂತಿ ಮತ್ತು ವಸ್ತ್ರ ವಿನ್ಯಾಸದ ವೃತ್ತಿ ಕೈಗೊಂಡು ಉತ್ತಮ ಆದಾಯ ಗಳಿಸಬಹುದು. ಶಿಬಿರಾರ್ಥಿಗಳು ಶ್ರಮ ವಹಿಸಿದಲ್ಲಿ ಈ ಕ್ಷೇತ್ರದಲ್ಲಿ ಯಶಸ್ಸು ಖಂಡಿತ ಎಂದು ಭಾರತೀಯ ವಿಕಾಸ ಟ್ರಸ್ಟಿನ ಆಡಳಿತ ಟ್ರಸ್ಟಿ ಕೆ.ಎಂ. ಉಡುಪ ಹೇಳಿದರು.
ಸಿಂಡಿಕೇಟ್ ಬ್ಯಾಂಕ್ ಕಾರ್ಪೊರೇಟ್ ಕಚೇರಿ ಬೆಂಗಳೂರು ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಮಹಿಳೆಯರಿಗೆ 3 ವಾರಗಳ ಹೊಲಿಗೆ ತರಬೇತಿಯ ಉದ್ಘಾಟನೆಯಲ್ಲಿ ಮಾತನಾಡಿದರು.
ಸಿಂಡಿಕೇಟ್ ಬ್ಯಾಂಕಿನ ಮಹಾಪ್ರಬಂಧಕ ಸತೀಶ್ ಕಾಮತ್ ಉದ್ಘಾಟಿಸಿ ಮಾತನಾಡಿ ವೃತ್ತಿಪರ ಶಿಕ್ಷಣ ಎಲ್ಲ ಸ್ವ ಉದ್ಯೋಗ ಆಕಾಂಕ್ಷಿ ಮಹಿಳೆಯರಿಗೆ ಅತ್ಯಗತ್ಯ. ತರಬೇತಿ ಪಡೆಯಲು ಬಂದ ಮಹಿಳೆಯರು ಸಂಪನ್ಮೂಲ ವ್ಯಕ್ತಿಗಳಿಂದ ಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಇಲ್ಲಿ ತರಬೇತಿ ಪಡೆದ ಮಹಿಳೆಯರು ಸೊÌàದ್ಯೋಗ ಕೈಗೊಳ್ಳುವುದಾದಲ್ಲಿ ಸಿಂಡಿಕೇಟ್ ಬ್ಯಾಂಕಿನ ಮೂಲಕ ಕೇಂದ್ರ, ರಾಜ್ಯ ಸರಕಾರಗಳಿಂದ ಪ್ರಾಯೋಜಿಸಲ್ಪಟ್ಟ ಮುದ್ರಾ ಯೋಜನೆಯಡಿಯಲ್ಲಿ ಸುಲಭವಾಗಿ ಸಾಲ ಪಡೆದುಕೊಳ್ಳಬಹುದು ಎಂದರು. ಸಂಪನ್ಮೂಲ ವ್ಯಕ್ತಿ ಮುಕ್ತಾ ಶ್ರೀನಿವಾಸ್ ಭಟ್ ಉಪಸ್ಥಿತರಿದ್ದರು. ಉಡುಪಿ, ದ.ಕ., ಕಾಸರಗೋಡು ಜಿಲ್ಲೆಯ 35ಕ್ಕೂ ಅಧಿಕ ಮಹಿಳೆಯರು 21 ದಿನಗಳ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಬಿವಿಟಿ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷಿ¾à ಬಾಯಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ