Parkala ಪರವಾನಿಗೆ ಇಲ್ಲದೆ ದಾಸ್ತಾನು: 1.20 ಲ.ರೂ.ಮೌಲ್ಯದ ಪಟಾಕಿ ವಶಕ್ಕೆ
Team Udayavani, Oct 11, 2023, 7:57 PM IST
ಉಡುಪಿ: ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ದುರಂತದ ಬಳಿಕ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಬುಧವಾರ ಪರ್ಕಳದಲ್ಲಿ ಪರವಾನಿಗೆ ಇಲ್ಲದೆ ಪಟಾಕಿ ದಾಸ್ತಾನು ಇರಿಸಿದ್ದ ಅಂಗಡಿಯ ಮೇಲೆ ದಾಳಿ ನಡೆಸಲಾಗಿದೆ.
ಪರ್ಕಳದ ಮುಖ್ಯರಸ್ತೆಯಲ್ಲಿರುವ ಪ್ರಾವಿಜನ್ ಸ್ಟೋರ್ಗೆ ಮಣಿಪಾಲ ಠಾಣೆಯ ಇನ್ಸ್ಪೆಕ್ಟರ್, ತಹಶೀಲ್ದಾರ್ ಹಾಗೂ ಅಗ್ನಿಶಾಮಕ ದಳ ಜಂಟಿಯಾಗಿ ದಾಳಿ ನಡೆಸಿದೆ. ಈ ವೇಳೆ 766 ಕೆಜಿಯ ಸುಮಾರು 1.20 ಲ.ರೂ.ಮೌಲ್ಯದ ಅಕ್ರಮ ಪಟಾಕಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಪ್ರಾವಿಜನ್ ಸ್ಟೋರ್ ಹಾಗೂ ರಸಗೊಬ್ಬರ ಮಾರಾಟ ಅಂಗಡಿಯ ಹಿಂಬದಿಯ ಗೋಡೌನ್ನಲ್ಲಿ ಇಪ್ಪತ್ತಕ್ಕೂ ಅಧಿಕ ಪಟಾಕಿ ಬಾಕ್ಸ್ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ