ಮೊಬೈಲ್ ಅಂಗಡಿಯಿಂದ ಕಳವು: ಮೂವರ ಬಂಧನ
Team Udayavani, Dec 3, 2019, 12:38 AM IST
ಉಡುಪಿ: ನಗರದ ತ್ರಿವೇಣಿ ಜಂಕ್ಷನ್ ಬಳಿ ಇರುವ ಪ್ಲೇ ಝೋನ್ ಮೊಬೈಲ್ ಅಂಗಡಿಯಲ್ಲಿ ನ.5ರಂದು ರಾತ್ರಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅಂತಾರಾಜ್ಯ ಕಳ್ಳರ ತಂಡವನ್ನು ಡಿ.1ರಂದು ಪೊಲೀಸರು ಬಂಧಿಸಿದ್ದಾರೆ. ನ.5ರಂದು ಮೊಬೈಲ್ ಅಂಗಡಿಯಿಂದ 8,34,990 ರೂ. ಬೆಲೆ ಬಾಳುವ ಮೊಬೈಲ್ ಫೋನ್ಗಳು ಹಾಗೂ ನಗದು ಕಳವಾಗಿದ್ದವು.
ಅಂತಾರಾಜ್ಯ ಕಳವು ತಂಡದ ಸದಸ್ಯರಾದ ಮಹಾರಾಷ್ಟ್ರದ ರಝಾಕ್ ಅಸ್ಲಾಂ ಮುಜಾವರ್, ಕೊಪ್ಪಳದ ರಾಜಾಸಾಬ್ ನಾಯಕ್, ಬಿಹಾರದ ದೀಪಕ್ ಪ್ರಸಾದ್ರನ್ನು ಬಂಧಿಸಿರುವ ಪೊಲೀಸರು, ಸುಮಾರು 3 ಲ.ರೂ. ಮೌಲ್ಯದ 16 ಮೊಬೈಲ್ಗಳು, 22 ಸಾ. ರೂ., ಕಳವಿಗೆ ಉಪಯೋಗಿಸಿದ್ದ ಸ್ಕ್ರೂ ಡ್ರೈವರ್, ಕಟ್ಟಿಂಗ್ ಪ್ಲೇಯರ್, ಎರಡು ಬ್ಯಾಗ್, ಮಾಸ್ಕ್, ಕ್ಯಾಪ್ ಮುಂತಾದವುಗಳನ್ನು ವಶಪಡಿಸಿಕೊಂಡಿದ್ದಾರೆ.
ಎಸ್ಪಿ ನಿಶಾ ಜೇಮ್ಸ್ ಆದೇಶ ದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಸಿಐ ಮಂಜುನಾಥ, ಮಲ್ಪೆ ಠಾಣೆಯ ಎಸ್ ಐ ತಿಮ್ಮೇಶ್, ಎಎಸ್ಐ ರವಿಚಂದ್ರ, ಸಿಬಂದಿ ವರ್ಗದ ಡಿಸಿಐಬಿಯ ರಾಮು ಹೆಗ್ಡೆ, ರಾಘವೇಂದ್ರ, ನಗರ ಠಾಣೆಯ ಲೋಕೇಶ್, ಬಾಲಕೃಷ್ಣ, ಇಮ್ರಾನ್, ಸಂತೋಷ್ ರಾಥೋಡ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ