ಬೀದಿ ಪಾಲು ಮಾಡಿದ ಸರಕಾರ ;ಅತಿಥಿ ಉಪನ್ಯಾಸಕರ ಅಳಲು
Team Udayavani, Aug 10, 2017, 7:35 AM IST
ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಬುಧವಾರ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರ ಮೂಲಕ ಸರಕಾರಕ್ಕೆ ಪ್ರತಿಭಟನಾ ಮನವಿ ಸಲ್ಲಿಸಿದರು.
ನಮ್ಮಿಂದ ಕೆಲಸ ಮಾಡಿಸಿಕೊಂಡು ಮನೆಗೆ ಹೋಗಿ ಎಂದು ಹೇಳುತ್ತಾರೆ. ನಮ್ಮ ಜೀವನಕ್ಕೆ ದಿಕ್ಕು ಬೇಡವೆ? ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ನಾವು ಕಾಲೇಜು ಶಿಕ್ಷಣ ಇಲಾಖೆ ಆದೇಶದಿಂದ ಕೆಲಸ ಕಳೆದುಕೊಂಡು ಬೀದಿ ಪಾಲಾಗಿದ್ದೇವೆ. ನಾವು ಮನುಷ್ಯರು, ನಮಗೂ ಜೀವನದ ಹಕ್ಕಿದೆ. ನಮ್ಮ ಬದುಕಿನಲ್ಲಿ ಆಟವಾಡಬೇಡಿ. ಮನಸ್ಸಿಗೆ ಬಂದಂತೆ ವರ್ತಿಸಿ ಕತ್ತು ಹಿಸುಕಬೇಡಿ ಎಂದು ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿಯವರ ಮುಂದೆ ತಮ್ಮ ದುಃಖ ತೋಡಿಕೊಂಡರು.
ಕಾಲೇಜು ಆರಂಭವಾಗಿ 2 ತಿಂಗಳಾದರೂ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಸರಕಾರ, ಇಲಾಖೆಗೆ ನಿರ್ಧಾರ ತೆಗೆದುಕೊಂಡಿಲ್ಲ. ಕೆಲಸ ಮಾಡುತ್ತಿರುವವರನ್ನು ಖಾಯಂಗೊಳಿಸಿ ಪಾಠಪ್ರವಚನ ನಡೆಯುವಂತೆಯೂ ಹೇಳುತ್ತಿಲ್ಲ. ದಿನಕ್ಕೊಂದು ಸುತ್ತೋಲೆ ಕಳುಹಿಸಿ ಆಟವಾಡುತ್ತಿದ್ದಾರೆ ಎಂದರು.
ಜು. 31 ರಂದು ಕಳುಹಿಸಿದ 3ನೇ ಸುತ್ತೋಲೆಯಲ್ಲಿ 10, 15 ವರ್ಷಗಳ ಸೇವೆ ಕೈಬಿಟ್ಟು 5 ವರ್ಷದ ಸೇವಾವಧಿ ಪರಿಗಣಿಸುವಂತೆ ಆದೇಶ ನೀಡಿದೆ. ಇದರಿಂದ ನೂರಾರು ಅತಿಥಿ ಉಪನ್ಯಾಸಕರು ಬೀದಿಗೆ ಬೀಳುತ್ತಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.
10,000 ರೂ. ಸಂಬಳಕ್ಕೆ ದುಡಿಯುತ್ತಿರುವ ನಮ್ಮನ್ನು ಕಾಲೇಜು ಶಿಕ್ಷಣ ಇಲಾಖೆ ಏಕಾಏಕಿ ಮನೆಗೆ ಹೋಗುವಂತೆ ಮಾಡಿದೆ. ನಾವು ಲಕ್ಷಾಂತರ ರೂ. ವೇತನ ಕೇಳುತ್ತಿಲ್ಲ. ಬದುಕುವ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿ ಎಂದು ಕೇಳಿದರೂ ಸರಕಾರ ಕ್ರೌರ್ಯ ತೋರಿಸುತ್ತಿದೆ.
ಪ್ರಾಂಶುಪಾಲರು, ವಿ.ವಿ.ಗಳು ಕೈ ಕಟ್ಟಿ ಕುಳಿತಿವೆ. ಸರಕಾರಿ ಕಾಲೇಜುಗಳನ್ನು ಮುಚ್ಚಿ, ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ರಂಜಿತ್ ಕುಮಾರ್ ಶೆಟ್ಟಿ ಆರೋಪಿಸಿದರು.
ಅತಿಥಿ ಉಪನ್ಯಾಸಕರಾದ ಅನಿಲ್ ಕುಮಾರ್, ಶ್ರೀನಿವಾಸ ಕೆ., ನಾಗೇಶ್ ಬೈಂದೂರು, ಶ್ರೀಲತಾ, ರವಿಚಂದ್ರ ಬಾಯರಿ, ಶುಭಾಶ್ರೀ , ತೃಪ್ತಿ, ಸುನೀತಾ, ಭವ್ಯಶ್ರೀ, ಜಯ ಕರ್ನಾಟಕ ಸಂಘಟನೆಯ ರಮೇಶ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಅನ್ಸಾರ್ ಅಹಮದ್, ಸಿಐಟಿಯುನ ಬಾಲಕೃಷ್ಣ ಶೆಟ್ಟಿ, ಕವಿರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?