ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಕಟ್ಟುನಿಟ್ಟಿನ ಆಗ್ರಹ
ಜನಪರ ಚಿಂತನ ವೇದಿಕೆ
Team Udayavani, Jun 11, 2019, 6:00 AM IST
ಉಡುಪಿ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ 2012ರಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಆದರೆ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ರಸ್ತೆ ಬದಿ ಪ್ಲಾಸ್ಟಿಕ್ ತ್ಯಾಜ್ಯಗಳು ರಾಶಿ ಬೀಳುವಂತಾಗಿದೆ ಎಂದು ಪರಿಸರ ಪರ ಹೋರಾಟಗಾರ ರಾಯನ್ ಫೆರ್ನಾಂಡಿಸ್ ಬೇಸರ ವ್ಯಕ್ತಪಡಿಸಿದರು.
ಬೀಡಿನಗುಡ್ಡೆಯ ಶ್ರೀ ಮುಖ್ಯಪ್ರಾಣದಲ್ಲಿ ನಡೆದ “ಜನಪರ ಚಿಂತನ ವೇದಿಕೆ’ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಮತ್ತು ಪರಿಸರದ ಕುರಿತ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮುಂಬೈ ನಂತಹ ಬೃಹತ್ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಕಟ್ಟುನಿಟ್ಟಿನಲ್ಲಿ ಜಾರಿಗೆ ತರಲಾಗಿದೆ. ಆದರೆ ಉಡುಪಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಜಾರಿಗೆ ತರುವಲ್ಲಿ ಅಧಿಕಾರಿ ವರ್ಗ ಸೋತು ಹೋಗಿದ್ದಾರೆ ಎಂದರು.
ವಿಷಕಾರಿ ರಾಸಾಯನಿಕದಿಂದ ತಯಾರಿಸಲಾಗುವ ಪ್ಲಾಸ್ಟಿಕ್ ವೇಗವಾಗಿ ಭೂಮಿ, ನೀರು ಮತ್ತು ಗಾಳಿಯನ್ನು ಮಾಲಿನ್ಯ ಮಾಡುತ್ತಿದೆ. ಸುಟ್ಟರೂ ಸುಡದ, ಭೂಮಿಯೊಳಗೆ ಹೂತರೂ ಕರಗದ ಪ್ಲಾಸ್ಟಿಕ್ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ. 2050ರ ಹೊತ್ತಿಗೆ ಸಮುದ್ರದಲ್ಲಿ ಮೀನಿಗಿಂತ ಪ್ಲಾಸ್ಟಿಕ್ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಿದರು.
ಸಂವಾದ ಕಾರ್ಯಕ್ರಮ ನಡೆಯಿತು. ಭಾರತಿ ಎಸ್. ಕೊಡಂಕೂರು, ವಿಶ್ವನಾಥ ಪೂಜಾರಿ ಬೀಡಿನಗುಡ್ಡೆ, ಗಣೇಶ ರಾವ್ ಕೊರಂಗ್ರಪಾಡಿ, ಯೋಗೀಶ್ ಪೂಜಾರಿ ಕಾಡಬೆಟ್ಟು, ಜ್ಯೋತಿ ಅಂಬಲಪಾಡಿ, ಅಕ್ಷತಾ ವಿಶ್ವನಾಥ್ ಚಿಟಾ³ಡಿ ಸಂವಾದದಲ್ಲಿ ಭಾಗವಹಿಸಿದ್ದರು. ಪ್ರಕಾಶ ಪೂಜಾರಿ ಬೀಡಿನಗುಡ್ಡೆ ಸ್ವಾಗತಿಸಿ, ಸುಮಾ ಜಿ. ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ