ಶಿರ್ವ: ಬಿಗು ಬಂದೋಬಸ್ತ್; ಅನಗತ್ಯ ಓಡಾಟದ ವಾಹನ ವಶ
Team Udayavani, May 10, 2021, 12:38 PM IST
ಶಿರ್ವ: ರಾಜ್ಯ ಸರಕಾರ ಸೋಮವಾರದಿಂದ ಘೋಷಿಸಿರುವ ಕಠಿಣ ಲಾಕ್ಡೌನ್ ಹಿನ್ನೆಲೆಯಲ್ಲಿ ಶಿರ್ವ ಠಾಣಾ ವ್ಯಾಪ್ತಿಯ ಶಿರ್ವ ಮತ್ತು ಮೂಡುಬೆಳ್ಳೆ ಪರಿಸರದಲ್ಲಿ ಠಾಣಾಧಿಕಾರಿ ಶ್ರೀಶೈಲ ಮುರಗೋಡ ಮತ್ತು ಕ್ರೈಂ ಎಸ್ಐ ವೇದಾವತಿ ಅವರ ನೇತೃತ್ವದಲ್ಲಿ ಬಿಗು ಬಂದೋ ಬಸ್ತ್ ಏರ್ಪಡಿಸಲಾಗಿದ್ದು, ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಬ್ಯಾರಿಕೇಡ್ ಅಳವಡಿಸಿ ತಪಾಸಣೆ ನಡೆಸಿ ಕೆಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂಜಾನೆಯಿಂದಲೇ ಬಿಗು ತಪಾಸಣೆಗೊಳಪಡಿಸಿ ವಾಹನಗಳ ಸಂಚಾರ ನಿಷೇಧಿಸಿದ ಪರಿಣಾಮ ಜನಸಂಚಾರ ಕಡಿಮೆಯಿದ್ದು ವ್ಯಾಪಾರ ವ್ಯವಹಾರ ಕಡಿಮೆಯಿತ್ತು. ಜನರು ಅಗತ್ಯವಸ್ತುಗಳನ್ನು ಹಿಡಿದುಕೊಂಡು ನಡೆದುಕೊಂಡು ಹೋಗುವ ದೃಶ್ಯ ಕಂಡುಬಂದಿದ್ದು, ಎಲ್ಲಿಯೂ ಜನಸಂದಣಿ ಇರಲಿಲ್ಲ. ವಾಹನಗಳ ಸಂಚಾರವಿಲ್ಲದೆ ಶನಿವಾರ, ರವಿವಾರ ಜನಜಂಗುಳಿಯಿಂದ ತುಂಬಿದ್ದ ಪ್ರದೇಶಗಳು ಖಾಲಿಯಾಗಿದ್ದು, ಲಾಕ್ಡೌನ್ ಬಹುತೇಕ ಯಶಸ್ವಿಯಾಗಿದೆ.
ಮೆಡಿಕಲ್, ತರಕಾರಿ,ದಿನಸಿ ಮತ್ತಿತರ ಅಗತ್ಯ ಸೇವೆಗಳ ಅಂಗಡಿಗಳು ತೆರೆದಿದ್ದು ಬೆಳಿಗ್ಗೆ 10ರ ಬಳಿಕ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ,ಜನ ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್