ವಿದ್ಯಾರ್ಥಿನಿ ಕಾವ್ಯಾ ಸಾವು ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
Team Udayavani, Aug 3, 2017, 7:30 AM IST
ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, ಕಾವ್ಯಾ ಅವರ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಅಖೀಲಭಾರತೀಯ ವಿದ್ಯಾರ್ಥಿ ಘಟಕ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಮಂಗಳವಾರ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಎಬಿವಿಪಿ ಘಟಕದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕುಂದಾಪುರ ಮಿನಿ ವಿಧಾನಸೌಧದ ತನಕ ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಅರ್ಪಿಸಿದರು.
ಕಾವ್ಯಾ ಸಾವು ಹಲವಾರು ಗೊಂದಲಗಳನ್ನು ಹುಟ್ಟು ಹಾಕಿದ್ದು, ಆ ಬಗ್ಗೆ ಸರಿಯಾದ ತನಿಖೆ ನಡೆಸಿ ಪ್ರಕರಣದ ನಿಗೂಢತೆಯನ್ನು ಬಯಲಿಗೆಳೆದು ಮುಗೆœಯ ಸಾವಿಗೆ ನ್ಯಾಯ ಒದಗಿಸಬೇಕು. ಮೇಲ್ನೋಟಕ್ಕೆ ಇದೊಂದು ಅನುಮಾನಾಸ್ಪದ ಸಾವು, ಹೆತ್ತವರು ಆರೋಪಿಸುವಂತೆ ಹೆತ್ತವರಿಗೆ ಸಾವಿನ ಸುದ್ದಿ ತಿಳಿಸಿ ಅರ್ಧ ಗಂಟೆಯೊಳಗೆ ಅವರು ಆ ಸ್ಥಳಕ್ಕೆ ತಲುಪುವ ಮೊದಲೇ ಶವವನ್ನು ಶವಾಗಾರ ದಲ್ಲಿ ಇರಿಸಿದ್ದು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಹೆತ್ತವರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಕಾಲೇಜಿನ ಎಬಿವಿಪಿ ಅಧ್ಯಕ್ಷ ವೈಭವ್ ಭಟ್, ಕಾರ್ಯದರ್ಶಿ ಸುಕೇಶ್, ಉಪಾಧ್ಯಕ್ಷ ಪ್ರಜ್ವಲ್, ಪ್ರಮುಖ ರಾದ ರಾಘವೇಂದ್ರ ಉಪಸ್ಥಿತರಿದ್ದರು. ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ