ಯಕ್ಷಗಾನದಿಂದ ವಿದ್ಯಾರ್ಥಿ ವ್ಯಕ್ತಿತ್ವ ವಿಕಸನ: ಪೇಜಾವರ ಶ್ರೀ
Team Udayavani, Dec 17, 2017, 11:08 AM IST
ಉಡುಪಿ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹೊಂದಲು ವಿದ್ಯೆಯ ಜತೆಗೆ ಕಲೆ, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಯಕ್ಷ ಗಾನ ಕಲಿತು, ಪ್ರದರ್ಶನಗಳಲ್ಲಿ ಭಾಗ ವಹಿಸುವುದರಿಂದ ವಿದ್ಯಾರ್ಥಿ ಗಳ ಮಾನಸಿಕ ವಿಕಸನ ಸಾಧ್ಯ. ಜತೆಗೆ ನಮ್ಮ ಸಂಸ್ಕೃತಿಯ ಅರಿವು ಕೂಡ ಬೆಳೆಯುತ್ತದೆ ಎಂದು ಪರ್ಯಾಯ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು.
ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಕಿಶೋರ ಯಕ್ಷಗಾನ ದಶಮಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಆಶೀರ್ವಚನ ನೀಡಿದರು. ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ನಮ್ಮ ನಾಡಿನ ಶ್ರೇಷ್ಠ ಕಲೆ ಯಕ್ಷಗಾನ ಅವನತಿ ಹೊಂದುವ ಕಾಲ ಎದುರಾಗಿತ್ತು. ಆದರೆ ಯಕ್ಷಗಾನ ಕಲಾರಂಗ ಸೂಕ್ತ ಸಮಯದಲ್ಲಿ ಯಕ್ಷಗಾನವನ್ನು ಉಳಿಸಿ ಬೆಳಸುವ ಕಾರ್ಯ ಮಾಡುತ್ತಿದೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳಿಗೆ ಯಕ್ಷಗಾನದ ಬಗ್ಗೆ ತರಬೇತಿ, ಅರಿವು ಮೂಡಿಸುತ್ತಿದೆ ಎಂದರು.
ಯಕ್ಷನಿಧಿ ಡೈರಿ-2018ನ್ನು ಪೇಜಾವರ ಶ್ರೀಗಳು ಬಿಡುಗಡೆಗೊಳಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಯು. ದುಗ್ಗಪ್ಪ ಅವರ ನೆನಪಿನಲ್ಲಿ ನೀಡುವ ಯಕ್ಷಗುರು ಪ್ರಶಸ್ತಿಯನ್ನು ಭಾಗವತ ತೋನ್ಸೆ ಜಯಂತ್ ಕುಮಾರ್ ಅವರಿಗೆ ಪ್ರದಾನ ಮಾಡಲಾಯಿತು. ಯಕ್ಷಶಿಕ್ಷಣದ ಗುರುಗಳನ್ನು ಸಮ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶುಭ ಹಾರೈಸಿದರು. ಡಾ| ನಿ.ಬೀ. ವಿಜಯ ಬಲ್ಲಾಳ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್ ಉಪಸ್ಥಿತರಿದ್ದರು. ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಪ್ರಸ್ತಾವನೆಗೈದರು. ಕಲಾರಂಗದ ಉಪಾಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಎಂ. ನಾರಾಯಣ ಹೆಗ್ಡೆ ನಿರೂಪಿಸಿದರು. ಶೃಂಗೇಶ್ವರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ