ಸರಕಾರಿ ಶಾಲೆ ಉಳಿವಿಗಾಗಿ ವಿದ್ಯಾರ್ಥಿಗಳ ಹುಡುಕಾಟ!
Team Udayavani, Apr 27, 2019, 12:14 PM IST
ಬೆಳ್ಮಣ್, ಎ. 26: ಸ್ಪರ್ಧಾತ್ಮಕ ಶೈಕ್ಷಣಿಕ ಯುಗದಲ್ಲಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಬೆಳ್ಮಣ್, ಮುಂಡ್ಕೂರು, ಬೋಳ, ಸಚ್ಚೇರಿಪೇಟೆ ಪ್ರದೇಶಗಳಲ್ಲಿ ಶಿಕ್ಷಕರು ಪೋಷಕರ ಮನವೊಲಿಸಲು ವಿದ್ಯಾರ್ಥಿಗಳ ಮನೆ ಗಳಿಗೆ ಭೇಟಿ ನೀಡುತ್ತಿದ್ದಾರೆ.
ಗ್ರಾಮೀಣ ಭಾಗದ ಸರಕಾರಿ ಕನ್ನಡ ಶಾಲೆಗಳಲ್ಲಿ ಹಲವಾರು ಕಾರಣಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಈ ಭಾಗದ ಖಾಸಗಿ ಶಾಲೆ ಗಳಲ್ಲಿಯೂ ವಿದ್ಯಾರ್ಥಿಗಳ ನೋಂದಾವಣೆಗೆ ಹರ ಸಾಹಸ ಪಡಲಾಗುತ್ತಿದೆ.
ನೋಂದಣಿ ಟಾರ್ಗೆಟ್:
ಕೆಲವು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಆಯಾ ಶಾಲೆಗಳ ಶಿಕ್ಷಕರಿಗೆ ತಮ್ಮ ಉದ್ಯೋಗ ಖಾಯಂಗೊಳಿಸಲು ವಿದ್ಯಾರ್ಥಿ ನೋಂದಾವಣೆಯ ಟಾರ್ಗೆಟ್ ನೀಡಿದೆ. ಇದರಿಂದಾಗಿ ವಿವಿಧ ಖಾಸಗಿ ಶಾಲೆಗಳ ಶಿಕ್ಷಕರು ಬಿಸಿಲ ಬೇಗೆಯನ್ನೂ ಲೆಕ್ಕಿಸದೇ ಗ್ರಾಮೀಣ ಭಾಗದ ಮನೆಗಳ ಬಾಗಿಲು ತಟ್ಟಲು ಪ್ರಾರಂಭಿಸಿದ್ದಾರೆ.
ಮನವೊಲಿಕೆ:
ಶಾಲೆಗಳಿಗೆ ವಿದ್ಯಾರ್ಥಿಗಳನ್ನು ನೋಂದಾಯಿಸಲು ಪೋಷಕರಿಗೆ ವಿವಿಧ ಆಮಿಷಗಳನ್ನು ಶಾಲೆಯ ಆಡಳಿತ ಮಂಡಳಿ ಶಿಕ್ಷಕರ ಮೂಲಕ ನೀಡುತ್ತಿದೆ. ತಮ್ಮ ಶಾಲೆಗಳಲ್ಲಿ ವಿವಿಧ ತರಬೇತಿಗಳಿವೆ, ಶುಲ್ಕ ರಿಯಾಯಿತಿ ಇದೆ, ಬಸ್ಸು ಸೌಲಭ್ಯ ಇದೆ, ಉತ್ತಮ ಫಲಿತಾಂಶ ಬರುತ್ತಿದೆ ಎಂದು ಮೂಲಕ ಪೋಷಕರ ಮನವೊಲಿಸುತ್ತಿದ್ದಾರೆ. ಆದರೆ ಯಾವ ಶಾಲೆ ಎಂಬ ವಿಚಾರದಲ್ಲಿ ಪೋಷಕರು ದ್ವಂದ್ವಕ್ಕೊಳಗಾಗುತ್ತಿದ್ದಾರೆ.
ಸರಕಾರಿ ಶಾಲೆಗಳಿಗೆ ಭಾರೀ ಹಿನ್ನಡೆ:
ನಾಯಿ ಕೊಡೆಗಳಂತೆ ಒಂದೇ 4-5 ಕಿಲೋಮೀಟರ್ ವ್ಯಾಪ್ತಿಯೊಳಗೇ ಹಲವಾರು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ತೆರೆಯಲ್ಪಡುತ್ತಿರುವುದರ ಜತೆ ಪೋಷಕರೂ ಅವುಗಳಿಗೆ ಮರುಳಾಗುತ್ತಿರುವುದರಿಂದ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ವಿದ್ಯಾರ್ಥಿ ನೋಂದಾವಣೆಯಲ್ಲಿ ಭಾರೀ ಹಿನ್ನಡೆ ಉಂಟಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಸರಕಾರ ಹಲವಾರು ಸೌಲಭ್ಯಗಳನ್ನು ನೀಡಿದರೂ ಕ್ವಾರಿಗಳ ವಲಸಿಗ ವಿದ್ಯಾರ್ಥಿಗಳು ಮಾತ್ರ ಇವುಗಳನ್ನು ಸದುಪಯೋಗಪಡಿಸಿಕೊಂಡು ಸರಕಾರಿ ಶಾಲೆಗಳಿಗೆ ಸೇರುತ್ತಿದ್ದಾರೆ. ಈ ಶಾಲೆಗಳನ್ನುಳಿಸಲು ಶಿಕ್ಷಕರು , ಆಯಾ ಶಾಲೆಗಳ ಹಳೆ ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಈ ಶಾಲೆಗಳ ಶಿಕ್ಷಕರೂ ಮನೆ ಮನೆ ಭೇಟಿಗೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ