ವಿದ್ಯಾರ್ಥಿಗಳು ನವಭಾರತ ನಿರ್ಮಿಸಿ: ಅದಮಾರು ಶ್ರೀ

"ವಿಶ್ವ ಬಾಹ್ಯಾಕಾಶ ಸಪ್ತಾಹ': ಇಸ್ರೋ ವಿಜ್ಞಾನಿಗಳಿಂದ ಮಾಹಿತಿ

Team Udayavani, Oct 5, 2019, 4:41 AM IST

z-39

ಪಡುಬಿದ್ರಿ: ವಿದ್ಯಾರ್ಥಿಗಳು ವಿಜ್ಞಾನ ಲಾಭವನ್ನು ಅರಿತು ನವಭಾರತ ನಿರ್ಮಾಣದ ಮಹತ್ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರೂ ತಮ್ಮ ಮಕ್ಕಳು ಕೇವಲ ವೈದ್ಯರು, ಎಂಜಿನಿಯರ್‌ ಆಗುವಂತಹ ಕನಸು ಕಾಣದೇ ವಿಜ್ಞಾನಿಗಳಾಗಿ ದೇಶ ಸೇವೆ ಮಾಡವತ್ತ ಮಕ್ಕಳನ್ನು ಪ್ರೇರೇಪಿಸ ಬೇಕು ಎಂದು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಅವರು ಶುಕ್ರವಾರ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ 14 ವಿಜ್ಞಾನಿಗಳ ತಂಡವು ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜಿಗೆ ಆಗಮಿಸಿ ಅ. 4ರಿಂದ ಅ. 10ರ ವರೆಗೆ ಆಚರಿಸಲ್ಪಡುವ ವಿಶ್ವ ಬಾಹ್ಯಾಕಾಶ ಸಪ್ತಾಹ ಕಾರ್ಯಕ್ರಮದ ಪ್ರಮುಖ ಅಂಗ ಪ್ರೌಢಶಾಲಾ ಮಕ್ಕಳಿಗೆ ಒಂದು ದಿನದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಸ್ರೋ ನಮ್ಮ ಹೆಮ್ಮೆ
ಮುಖ್ಯಅತಿಥಿಯಾಗಿದ್ದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ಖಗೋಳ ವಿಜ್ಞಾನಿ ಡಾ| ಎ.ಪಿ. ಭಟ್‌ ಮಾತನಾಡಿ, ಭಾರತೀಯ ಖಗೋಳ ವಿಜ್ಞಾನದ ಮೇರು ವ್ಯಕ್ತಿ ಉಡುಪಿ ರಾಮಚಂದ್ರ ರಾಯರ ಹುಟ್ಟೂರಿಗೆ ಇಸ್ರೋ ವಿಜ್ಞಾನಿಗಳು ಆಗಮಿಸಿರುವುದು ನಮ್ಮ ಹೆಮ್ಮೆ. ಚಂದ್ರಯಾನ 2ರ ಶೇ. 98ರಷ್ಟು ಯಶಸ್ಸಿನಿಂದಾಗಿ ಇಡಿಯ ವಿಶ್ವವೇ ಇಂದು ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದೆ. ಅಂತಹ ಚಂದ್ರಯಾನದ ಯಶಸ್ಸಿನ ಸಹಾಯಕ ನಿರ್ದೇಶಕ ಸುರೇಶ್‌ ಕುಮಾರ್‌ ಅದಮಾರಿಗೆ ಬಂದಿ ರುವುದೂ ನಮ್ಮ ಹೆಮ್ಮೆ ಎಂದರು.

ಚಂದ್ರಯಾನ 2ರ ಸಹಾಯಕ ನಿರ್ದೇಶಕ ಎಚ್‌.ಎನ್‌. ಸುರೇಶ್‌ ಕುಮಾರ್‌ ಮಾತನಾಡಿ, “ಚಂದ್ರ ನಕ್ಷತ್ರಗಳಿಗೆ ಹೆಬ್ಟಾಗಿಲು’ ಆಗಿದ್ದು ವಿದ್ಯಾರ್ಥಿಗಳಿಗೆ ಈ ನಿಟ್ಟಿನಲ್ಲಿ ಇಸ್ರೋ ಸಾಧನೆಗಳು ಹಾಗೂ ಉಪಗ್ರಹಗಳು ಜನಸೇವೆಯಲ್ಲಿ ವಹಿಸುವ ಪಾತ್ರಗಳ ಬಗೆಗೆ ಮಾಹಿತಿ ಕಾರ್ಯಕ್ರಮದಲ್ಲಿ ವಿವರಿಸಲಾಗುವುದೆಂದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್‌ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಅದಮಾರು ಶಿಕ್ಷಣ ಮಂಡಳಿಯ ಕೋಶಾಧಿಕಾರಿ ಪ್ರವೀಣ್‌ ಕುಮಾರ್‌ ಪಿ.ಎಚ್‌. ಉಪಸ್ಥಿತರಿದ್ದರು.

ಅದಮಾರು ಪೂರ್ಣಪ್ರಜ್ಞ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ ಸ್ವಾಗತಿಸಿದರು. ನೀಶಾ ಕಾರ್ಯಕ್ರಮ ನಿರ್ವಹಿಸಿದರು. ಪ್ರಜ್ಞಾ ಶೆಟ್ಟಿ ವಂದಿಸಿದರು. ಉಡುಪಿ ಜಿಲ್ಲೆಯ 32 ವಿವಿಧ ಪ್ರೌಢಶಾಲೆಗಳ 158 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜ್ಞಾನಿಗಳೊಂದಿಗೆ ಸಂವಾದ ನಡೆಯಿತು.

ದೂರ ಸಂವೇದಿ ಉಪಗ್ರಹ ವಾಹಕಗಳು, ಚಂದ್ರಯಾನ 2, ಮಂಗಳಯಾನ, ರಿಸೋರ್ಸ್‌ ಸ್ಯಾಟ್‌ ಉಪಗ್ರಹಗಳ ಸಹಿತ ವಿವಿಧ ಮಾಡೆಲ್‌ಗ‌ಳು, ಇಸ್ರೋ ಸಾಧನೆಗಳು, ಬಾಹ್ಯಾಕಾಶದಲ್ಲಿ ಸಾಧನೆಗಳ ಪಟ್ಟಿ, ಇಸ್ರೋ ಉಡ್ಡಯನದ ಬಳಿಕ ಅಂತರಿಕ್ಷದಲ್ಲಿ ನಮಗಿಂದು ವಿಶ್ವದ ಬೇರೆ ಬೇರೆ ದೇಶಗಳ ಟಿವಿ ಚಾನಲ್‌ಗ‌ಳನ್ನು ನೋಡಲು ಅನುಕೂಲವಾಗುವ, ಹವಾಮಾನದ ಕುರಿತಾಗಿ ಮಾಹಿತಿ ನೀಡುವ, ಕೃಷಿ ಸಂಬಂಧಿ ಮಾಹಿತಿಯನ್ನು ನೀಡುವ ಬೇರೆ, ಬೇರೆ ಉಪಗ್ರಹಗಳ ಪಟ್ಟಿಯನ್ನು ವೀಕ್ಷಿಸಿದ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.