ಸಾಂಪ್ರದಾಯಿಕ ಬುಟ್ಟಿ ತಯಾರಿಯಲ್ಲಿ ವಿದ್ಯಾರ್ಥಿಗಳು


Team Udayavani, Oct 13, 2019, 5:02 AM IST

041019ASTRO02

ಉಡುಪಿ: ಆಧುನಿಕತೆಯ ಭರಾಟೆಯಲ್ಲಿ ಕೃಷಿ ಪರಿಕರಗಳು ಮರೆಯಾಗುತ್ತಿವೆ. ಸಾಂಪ್ರದಾಯಿಕ ಪರಿಕರಗಳು ಮೂಲೆ ಸೇರುತ್ತಿವೆ. ಆದರೆ ನಶಿಸುತ್ತಿರುವ ಈ ಸಂಪ್ರದಾಯವನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಕುಂಭಾಸಿಯ ಮಕ್ಕಳ ಮನೆಯ ವಿದ್ಯಾರ್ಥಿಗಳು.

5 ವರ್ಷದ ಹಿಂದೆ ಕುಂಭಾಸಿಯ ಕೊರಗರ ಕಾಲನಿಯ ಮಕ್ಕಳಲ್ಲಿ ವಿದ್ಯಾಭ್ಯಾಸದ ಕೊರತೆಯಿತ್ತು. ಸೂಕ್ತ ವಿದ್ಯಾಭ್ಯಾಸವೂ ಲಭಿಸುತ್ತಿರಲಿಲ್ಲ. ಬಳಿಕ ಕುಂಭಾಶಿ ಗ್ರಾ.ಪಂ.ಸಮೀಪ ಅಂಬೇಡ್ಕರ್‌ ಭವನ ನಿರ್ಮಿಸಿ ಅಲ್ಲಿ ವಿದ್ಯಾಭ್ಯಾಸ ಮಾಡುವ ಕೆಲಸ ಪ್ರಾರಂಭವಾಯಿತು. ಅನಂತರ ಇದಕ್ಕೆ ಹೊಂದಿಕೊಂಡಿರುವಂತೆಯೇ ಮಕ್ಕಳ ಮನೆ ಎಂಬ ಹೆಸರಿನಲ್ಲಿ ಕಟ್ಟಡವನ್ನು ರಚಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಿತ ಸಾಂಸ್ಕೃತಿಕ ಚಟುವಟಿಕೆಗಳನ್ನು ನೀಡಲಾಗುತ್ತಿದೆ.

ಬುಟ್ಟಿ ತಯಾರಿ ಆಸಕ್ತಿ
ಹಿಂದಿನ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೊರಗ ಸಮುದಾಯದ ಸುಮಾರು 12ರಷ್ಟು ಮಂದಿ ವಿದ್ಯಾರ್ಥಿಗಳು ಕಳೆದ 1 ತಿಂಗಳಿನಿಂದ ವಿವಿಧ ರೀತಿಯ ಸಾಂಪ್ರದಾಯಿಕ ಬುಟ್ಟಿಗಳ ತಯಾರಿಯಲ್ಲಿ ತೊಡಗಿದ್ದಾರೆ. ಹಣ್ಣುಕಾಯಿ ಬುಟ್ಟಿ, ಹೆಡಿಗೆ, ಫ‌ುಡ್‌ಟ್ರ್ಯಾಕ್ಸ್‌, ಆಲಂಕಾರಿಕ ವಸ್ತುಗಳು, ಪೆನ್‌ ಸ್ಟಾಂಡ್‌ ಸಹಿತ ಹಲವಾರು ವೈವಿಧ್ಯತೆಯುಳ್ಳ ಬುಟ್ಟಿ ತಯಾರಿಸುವ ಕಲೆಗಾರಿಕೆಯನ್ನು ಇವರು ಹೊಂದಿದ್ದಾರೆ. ಅಂದ ಹಾಗೇ ಇಲ್ಲಿರುವ ವಿದ್ಯಾರ್ಥಿಗಳು ಎಂಎಸ್‌ಡಬ್ಲೂ, ಬಿಎಸ್‌ಡಬ್ಲೂ, ಡಿಎಡ್‌ ವಿದ್ಯಾಭ್ಯಾಸ ಹೊಂದಿದವರು. ಈ ಮೂಲಕ ಸಂಪ್ರಾದಾಯಿಕ ವಸ್ತುಗಳಿಗೆ ಬೇಡಿಕೆ ಬರುವಂತೆ ಮಾಡುವ ಛಾತಿ ಇವರದ್ದು.

ಹಣಕಾಸು ನೆರವು
ಈ ರೀತಿ ವಸ್ತುಗಳನ್ನು ತಯಾರಿಸಿ ಸೊಸೈಟಿ ರೀತಿ ಮಾಡುವ ಆಲೋಚನೆಯೂ ಇವರದ್ದು. ಆರು ತಿಂಗಳುಗಳ ಕಾಲ ಇದನ್ನು ಮುಂದುವರಿಸುವ ಯೋಜನೆಯಿದ್ದು, ಅಪಾರ ಬೇಡಿಕೆ ವ್ಯಕ್ತವಾದರೆ ಮುಂದುವರಿಸುವ ಆಲೋಚನೆಯೂ ಇದೆ. ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್‌ಗಳು ಅನುದಾನ ಕಲ್ಪಿಸುವ ಮೂಲಕ ಪ್ರೋತ್ಸಾಹ ನೀಡುತ್ತಿವೆ.

2ರಿಂದ 3 ಬುಟ್ಟಿ ತಯಾರಿ
ಓರ್ವ ವಿದ್ಯಾರ್ಥಿ ದಿನವೊಂದಕ್ಕೆ ಕನಿಷ್ಟ ಎಂದರೂ 2ರಿಂದ 3ರಷ್ಟು ಬುಟ್ಟಿಗಳನ್ನು ಹೆಣೆಯುತ್ತಾರೆ. ಅದಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು ಇವರೇ ಸರಿಪಡಿಸುತ್ತಾರೆ. ಬಿದಿರು, ಕೂಬಿಕೋಲು, ಕುಸುಬ ಬೀಳು, ಕಟ್ಟೆಪಳ್ಳಿಗಳನ್ನು ಇದಕ್ಕೆ ಬಳಸುತ್ತಾರೆ. ಇದನ್ನು ಕೂಡ ಈ ವಿದ್ಯಾರ್ಥಿಗಳೇ ಮಾಡುತ್ತಾರೆ.

ಪೇಟೆಂಟ್‌ ಪಡೆಯಲು ಯತ್ನ
ನಶಿಸುತ್ತಿರುವ ಬುಟ್ಟಿ ತಯಾರಿಕೆಗೆ ಜೀವ ನೀಡಿ ಪೇಟೆಂಟ್‌ ಪಡೆಯುವ ಬಗ್ಗೆಯೂ ಈ ತಂಡ ಚಿಂತನೆ ನಡೆಯುತ್ತಿದೆ. ಇದಕ್ಕೆ ಮಾರುಕಟ್ಟೆ ಒದಗಿಸುವಂತೆ ಈಗಾಗಲೇ ಮಣಿಪಾಲದ ಟ್ಯಾಪ್ಮಿ ಜತೆ ಮಾತುಕತೆಯೂ ನಡೆದಿದೆ. ಒಂದು ವೇಳೆ ಈ ಸಂಸ್ಥೆ ಇವರೊಂದಿಗೆ ಕೈಜೋಡಿಸಿದರೆ ಈ ಉದ್ಯಮಕ್ಕೆ ಮತ್ತಷ್ಟು ಪೋತ್ಸಾಹ ಸಿಗುವುದರ ಜತೆಗೆ ಹಲವಾರು ಮಂದಿಗೆ ಉದ್ಯೋಗಾವಕಾಶವೂ ಲಭಿಸಲಿದೆ.

ಉತ್ತಮ ಮಾರುಕಟ್ಟೆ ನಿರೀಕ್ಷೆ
ನಶಿಸುತ್ತಿರುವ ಈ ಕಸುಬನ್ನು ಉಳಿಸುವ ಒಂದು ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೆ ಹಲವಾರು ಮಂದಿ ಇದನ್ನು ಖರೀದಿಸುತ್ತಿದ್ದಾರೆ. ಮತ್ತಷ್ಟು ಬೇಡಿಕೆ ಬಂದರೆ ಉತ್ಪಾದನೆಯನ್ನೂ ಅಧಿಕ ಮಾಡಬಹುದು. ಇದಕ್ಕೆ ಉತ್ತಮ ಮಾರುಕಟ್ಟೆ ಲಭಿಸಿದರೆ ನಮಗೆ ಮತ್ತಷ್ಟು ಪ್ರೋತ್ಸಾಹ ಸಿಗಲಿದೆ.
-ಸುದರ್ಶನ್‌,ತರಬೇತುದಾರರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.