ಹೊಸಂಗಡಿ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ
ಸ್ಥಳೀಯ ನಾಲ್ವರು ವಿದ್ಯಾರ್ಥಿಗಳಿಂದ ಶೋಧನೆ
Team Udayavani, Jun 23, 2022, 4:13 PM IST
ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ ಹಾಗೂ ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ಗುರುವಾರ ಪತ್ತೆಯಾಗಿದೆ.
ಸುಮಾರು 100 ವರ್ಷಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ ಆನೆಗೆ ನೀರು ಕುಡಿಯಲು ನಿರ್ಮಿಸಿದ ಕಲ್ಲಿನ ಕೊಪ್ಪರಿಗೆ ಪತ್ತೆಯಾಗಿದೆ.
ಕೊಪ್ಪರಿಗೆ ಹಿಂದೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದು, ಆನೆ ಕಟ್ಟುವ ಕಂಬ ಮೊದಲಿನಿಂದಲೂ ಇಲ್ಲಿ ರಸ್ತೆ ಬದಿ, ಕಾಣುತ್ತಿತ್ತು. ಆದರೆ ಆನೆಗೆ ನೀರಿಡುವ ಕೊಪ್ಪರಿಗೆ ಕಾಣಿಸುತ್ತಿರಲಿಲ್ಲ. ಇಲ್ಲಿ ಆ ಕೊಪ್ಪರಿಗೆ ಇತ್ತು ಎಂಬ ಮಾತನ್ನು ಕೇಳಿದ ಇಲ್ಲಿನ ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ, ಸಮರ್ಥ, ರಿತೀಶ್ ಹಾಗೂ ಅನ್ವಿತ್ ಮಲ್ಯ ಅವರು ಆಸಕ್ತಿಯಿಂದ ಅದನ್ನು ಹುಡುಕಿ, ಹೊರಗೆ ತೆಗೆದಿದ್ದಾರೆ.
ಇದನ್ನೂ ಓದಿ:ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿಯೆಂದು ಧಾರವಾಡ ಹೈಕೋರ್ಟ್ ತೀರ್ಪು
ಮಾಹಿತಿಯ ಪ್ರಕಾರ ಈ ಭಾಗದಲ್ಲಿ ಕೆಳದಿ ಶಿವಪ್ಪ ನಾಯಕನ ಕಾಲದ ಹೊನ್ನಯ್ಯ ಅರಸ ಮನೆತನದವರು ಆಳ್ವಿಕೆ ನಡೆಸಿದ್ದು, ಇದು ಅವರ ಕಾಲದಲ್ಲಿಯೇ ನಿರ್ಮಿಸಿರಬಹುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…