ಬಾಲಕಿಯರ ವಿದ್ಯಾರ್ಥಿ ನಿಲಯ ಮತದಾನ ಪ್ರಾತ್ಯಕ್ಷಿಕೆ
Team Udayavani, Mar 23, 2019, 12:30 AM IST
ಉಡುಪಿ: ಕಿನ್ನಿಮೂಲ್ಕಿಯ ಡಿ. ದೇವರಾಜ ಅರಸು ಮೆಟ್ರಿಕ್ ಅನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ವಿದ್ಯಾರ್ಥಿನಿಯರಿಗೆ ಮತದಾನದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.
ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಮತದಾನದ ಜಾಗೃತಿಯ ಬಗ್ಗೆ ಅರಿವುಮೂಡಿಸಿ,ನಿರ್ಭೀತಿಯಿಂದ ಮತದಾನದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಉಡುಪಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮತ ಯಂತ್ರದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪಲಮಾಣಿ ಭಾಗವಹಿಸಿದ್ದರು. ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜಿ.ಗಿರಿಧರ ಗಾಣಿಗ ಸ್ವಾಗತಿಸಿದರು. ನಿಲಯದ ವಿದ್ಯಾರ್ಥಿನಿ ಅನ್ನಪೂರ್ಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ